Check out the new design

আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ * - অনুবাদসমূহৰ সূচীপত্ৰ

PDF XML CSV Excel API
Please review the Terms and Policies

অৰ্থানুবাদ ছুৰা: আল-ইছৰা   আয়াত:
وَمَا مَنَعَنَاۤ اَنْ نُّرْسِلَ بِالْاٰیٰتِ اِلَّاۤ اَنْ كَذَّبَ بِهَا الْاَوَّلُوْنَ ؕ— وَاٰتَیْنَا ثَمُوْدَ النَّاقَةَ مُبْصِرَةً فَظَلَمُوْا بِهَا ؕ— وَمَا نُرْسِلُ بِالْاٰیٰتِ اِلَّا تَخْوِیْفًا ۟
ದೃಷ್ಟಾಂತಗಳನ್ನು ಕಳುಹಿಸಲು ನಮಗೆ ತಡೆಯಾಗಿರುವುದು, ಮೊದಲಿನ ಜನರು ಅವುಗಳನ್ನು ನಿಷೇಧಿಸಿದ್ದರು ಎಂಬುದು ಮಾತ್ರ. ನಾವು ಸಮೂದ್ ಗೋತ್ರಕ್ಕೆ ಅಂತರ್ದೃಷ್ಟಿಯ ರೂಪದಲ್ಲಿ ಒಂಟೆಯನ್ನು ನೀಡಿದೆವು. ಆದರೆ ಅವರು ಅದರೊಡನೆ ಅನ್ಯಾಯವೆಸಗಿದರು. ಜನರನ್ನು ಹೆದರಿಸುವುದಕ್ಕಾಗಿಯೇ ವಿನಾ ನಾವು ದೃಷ್ಟಾಂತಗಳನ್ನು ಕಳುಹಿಸುವುದಿಲ್ಲ.
আৰবী তাফছীৰসমূহ:
وَاِذْ قُلْنَا لَكَ اِنَّ رَبَّكَ اَحَاطَ بِالنَّاسِ ؕ— وَمَا جَعَلْنَا الرُّءْیَا الَّتِیْۤ اَرَیْنٰكَ اِلَّا فِتْنَةً لِّلنَّاسِ وَالشَّجَرَةَ الْمَلْعُوْنَةَ فِی الْقُرْاٰنِ ؕ— وَنُخَوِّفُهُمْ ۙ— فَمَا یَزِیْدُهُمْ اِلَّا طُغْیَانًا كَبِیْرًا ۟۠
“ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಜನರನ್ನು ಆವರಿಸಿದ್ದಾನೆ” ಎಂದು ನಾವು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ನಾವು ನಿಮಗೆ ತೋರಿಸಿದ ಆ ದೃಶ್ಯವನ್ನು ನಾವು ಜನರಿಗೆ ಒಂದು ಪರೀಕ್ಷೆಯನ್ನಾಗಿ ಮಾಡಿದ್ದೆವು. ಅದೇ ರೀತಿ ಕುರ್‌ಆನ್‍ನಲ್ಲಿ ಶಪಿಸಲಾದ ಆ ಮರವನ್ನು ಕೂಡ. ನಾವು ಅವರನ್ನು ಹೆದರಿಸುತ್ತೇವೆ. ಆದರೆ ಅದು ಅವರಿಗೆ ಮಹಾ ಅತಿರೇಕವನ್ನು ಮಾತ್ರ ಹೆಚ್ಚಿಸುತ್ತದೆ.[1]
[1] ಪ್ರವಾದಿ ಮುಹಮ್ಮದರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆಕಾಶಾರೋಹಣ ಮಾಡಿದಾಗ ಅಲ್ಲಿ ನರಕವನ್ನು ಮತ್ತು ಅದರ ಶಿಕ್ಷೆಗಳನ್ನು ನೋಡಿದರು. ಅದನ್ನು ಅವರಿಗೆ ಜನರಿಗೆ ವಿವರಿಸಿದಾಗ ಸತ್ಯನಿಷೇಧಿಗಳು ತೀವ್ರವಾಗಿ ಲೇವಡಿ ಮಾಡಿದರು. ನರಕದಲ್ಲಿರುವ ಝಕ್ಕೂಮ್ ಮರದ ಬಗ್ಗೆ ಹೇಳಿದಾಗಲೂ ವಿರೋಧಿಗಳು ತೀವ್ರವಾಗಿ ಹಾಸ್ಯ ಮಾಡಿದರು.
আৰবী তাফছীৰসমূহ:
وَاِذْ قُلْنَا لِلْمَلٰٓىِٕكَةِ اسْجُدُوْا لِاٰدَمَ فَسَجَدُوْۤا اِلَّاۤ اِبْلِیْسَ ؕ— قَالَ ءَاَسْجُدُ لِمَنْ خَلَقْتَ طِیْنًا ۟ۚ
“ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ” ಎಂದು ನಾವು ದೇವದೂತರುಗಳಿಗೆ ಹೇಳಿದ ಸಂದರ್ಭ. ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು. ಅವನು ಕೇಳಿದನು: “ನೀನು ಜೇಡಿಮಣ್ಣಿನಿಂದ ಸೃಷ್ಟಿಸಿದವನಿಗೆ ನಾನು ಸಾಷ್ಟಾಂಗ ಮಾಡಬೇಕೇ?”
আৰবী তাফছীৰসমূহ:
قَالَ اَرَءَیْتَكَ هٰذَا الَّذِیْ كَرَّمْتَ عَلَیَّ ؗ— لَىِٕنْ اَخَّرْتَنِ اِلٰی یَوْمِ الْقِیٰمَةِ لَاَحْتَنِكَنَّ ذُرِّیَّتَهٗۤ اِلَّا قَلِیْلًا ۟
ಇಬ್ಲೀಸ್ ಹೇಳಿದನು: “ನೀನು ನನಗಿಂತಲೂ ಹೆಚ್ಚು ಶ್ರೇಷ್ಠತೆ ನೀಡಿದ ಈ ವ್ಯಕ್ತಿಯನ್ನು ನೋಡು. ನೀನು ನನಗೆ ಪುನರುತ್ಥಾನದ ದಿನದವರೆಗೆ ಕಾಲಾವಕಾಶ ನೀಡಿದರೆ, ಕೆಲವರನ್ನು ಹೊರತುಪಡಿಸಿ ಇವನ ಸಂಪೂರ್ಣ ಸಂತಾನವನ್ನು ನಾನು ನನ್ನ ವಶಕ್ಕೆ ಪಡೆಯುವೆನು.”
আৰবী তাফছীৰসমূহ:
قَالَ اذْهَبْ فَمَنْ تَبِعَكَ مِنْهُمْ فَاِنَّ جَهَنَّمَ جَزَآؤُكُمْ جَزَآءً مَّوْفُوْرًا ۟
ಅಲ್ಲಾಹು ಹೇಳಿದನು: “ಇಲ್ಲಿಂದ ತೊಲಗು! ಅವರಲ್ಲಿ ಯಾರು ನಿನ್ನನ್ನು ಅನುಸರಿಸುತ್ತಾರೋ, ನಿಮ್ಮೆಲ್ಲರಿಗೂ ನರಕಾಗ್ನಿಯೇ ಪ್ರತಿಫಲವಾಗಿದೆ. ಅದು ಪೂರ್ಣರೂಪದ ಪ್ರತಿಫಲವಾಗಿದೆ.
আৰবী তাফছীৰসমূহ:
وَاسْتَفْزِزْ مَنِ اسْتَطَعْتَ مِنْهُمْ بِصَوْتِكَ وَاَجْلِبْ عَلَیْهِمْ بِخَیْلِكَ وَرَجِلِكَ وَشَارِكْهُمْ فِی الْاَمْوَالِ وَالْاَوْلَادِ وَعِدْهُمْ ؕ— وَمَا یَعِدُهُمُ الشَّیْطٰنُ اِلَّا غُرُوْرًا ۟
ಅವರಲ್ಲಿ ಯಾರನ್ನೆಲ್ಲಾ ನಿನಗೆ ನಿನ್ನ ಧ್ವನಿಯ ಮೂಲಕ ದಾರಿತಪ್ಪಿಸಲು ಸಾಧ್ಯವಾಗುತ್ತದೋ ದಾರಿತಪ್ಪಿಸು. ನಿನ್ನ ಅಶ್ವದಳ ಮತ್ತು ಪದಾತಿದಳದ ಮೂಲಕ ಅವರ ಮೇಲೆ ಮುಗಿಬೀಳು. ಅವರ ಆಸ್ತಿ ಮತ್ತು ಮಕ್ಕಳಲ್ಲಿ ಅವರೊಡನೆ ಸೇರಿಕೋ. ಅವರಿಗೆ ಆಶ್ವಾಸನೆಗಳನ್ನು ನೀಡು.” ಶೈತಾನನು ಅವರಿಗೆ ನೀಡುವ ಆಶ್ವಾಸನೆಗಳು ಕೇವಲ ವಂಚನೆಗಳಾಗಿವೆ.
আৰবী তাফছীৰসমূহ:
اِنَّ عِبَادِیْ لَیْسَ لَكَ عَلَیْهِمْ سُلْطٰنٌ ؕ— وَكَفٰی بِرَبِّكَ وَكِیْلًا ۟
“ನಿಶ್ಚಯವಾಗಿಯೂ ನನ್ನ ದಾಸರ ಮೇಲೆ ನಿನಗೆ ಯಾವುದೇ ಅಧಿಕಾರವಿಲ್ಲ. ಕಾರ್ಯನಿರ್ವಾಹಕನಾಗಿ ನಿನ್ನ ಪರಿಪಾಲಕನೇ (ಅಲ್ಲಾಹನೇ) ಸಾಕು”.
আৰবী তাফছীৰসমূহ:
رَبُّكُمُ الَّذِیْ یُزْجِیْ لَكُمُ الْفُلْكَ فِی الْبَحْرِ لِتَبْتَغُوْا مِنْ فَضْلِهٖ ؕ— اِنَّهٗ كَانَ بِكُمْ رَحِیْمًا ۟
ನಿಮಗೋಸ್ಕರ ಕಡಲಲ್ಲಿ ನಾವೆಗಳನ್ನು ಚಲಾಯಿಸುವವನೇ ನಿಮ್ಮ ಪರಿಪಾಲಕನು (ಅಲ್ಲಾಹು). ನೀವು ಅವನ ಔದಾರ್ಯವನ್ನು ಅರಸುವುದಕ್ಕಾಗಿ. ಖಂಡಿತವಾಗಿಯೂ ಅವನಿಗೆ ನಿಮ್ಮ ಮೇಲೆ ಅತ್ಯಧಿಕ ಕರುಣೆಯಿದೆ.
আৰবী তাফছীৰসমূহ:
 
অৰ্থানুবাদ ছুৰা: আল-ইছৰা
ছুৰাৰ তালিকা পৃষ্ঠা নং
 
আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ - অনুবাদসমূহৰ সূচীপত্ৰ

মহম্মদ হামজাৰ দ্বাৰা অনুবাদ কৰা হৈছে। মৰ্কজ ৰুৱাদুত তাৰ্জামাৰ তত্ত্বাৱধানত ইয়াক উন্নীত কৰা হৈছে।

বন্ধ