Check out the new design

আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ * - অনুবাদসমূহৰ সূচীপত্ৰ

PDF XML CSV Excel API
Please review the Terms and Policies

অৰ্থানুবাদ ছুৰা: আল-হজ্জ   আয়াত:
وَیَسْتَعْجِلُوْنَكَ بِالْعَذَابِ وَلَنْ یُّخْلِفَ اللّٰهُ وَعْدَهٗ ؕ— وَاِنَّ یَوْمًا عِنْدَ رَبِّكَ كَاَلْفِ سَنَةٍ مِّمَّا تَعُدُّوْنَ ۟
ಅವರು ನಿಮ್ಮೊಡನೆ ಶಿಕ್ಷೆಗಾಗಿ ತ್ವರೆ ಮಾಡುತ್ತಾರೆ. ಆದರೆ ಅಲ್ಲಾಹು ತನ್ನ ವಾಗ್ದಾನವನ್ನು ಎಂದಿಗೂ ಉಲ್ಲಂಘಿಸುವುದಿಲ್ಲ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಒಂದು ದಿನವೆಂದರೆ ನಿಮ್ಮ ಎಣಿಕೆಯಂತೆ ಸಾವಿರ ವರ್ಷಗಳಾಗಿವೆ.
আৰবী তাফছীৰসমূহ:
وَكَاَیِّنْ مِّنْ قَرْیَةٍ اَمْلَیْتُ لَهَا وَهِیَ ظَالِمَةٌ ثُمَّ اَخَذْتُهَا ۚ— وَاِلَیَّ الْمَصِیْرُ ۟۠
ನಾನು ಎಷ್ಟೋ ಊರುಗಳಿಗೆ ಅವುಗಳ ನಿವಾಸಿಗಳು ಅಕ್ರಮವೆಸಗಿದಾಗ ಕಾಲಾವಕಾಶವನ್ನು ವಿಸ್ತರಿಸಿಕೊಟ್ಟಿದ್ದೆನು. ನಂತರ ಅವರನ್ನು ಹಿಡಿದೆನು. ಎಲ್ಲರೂ ಮರಳಿ ಬರುವುದು ನನ್ನ ಬಳಿಗೇ ಆಗಿದೆ.
আৰবী তাফছীৰসমূহ:
قُلْ یٰۤاَیُّهَا النَّاسُ اِنَّمَاۤ اَنَا لَكُمْ نَذِیْرٌ مُّبِیْنٌ ۟ۚ
ಹೇಳಿರಿ: “ಓ ಜನರೇ! ನಿಶ್ಚಯವಾಗಿಯೂ ನಾನು ನಿಮಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡುವವನಾಗಿದ್ದೇನೆ.”
আৰবী তাফছীৰসমূহ:
فَالَّذِیْنَ اٰمَنُوْا وَعَمِلُوا الصّٰلِحٰتِ لَهُمْ مَّغْفِرَةٌ وَّرِزْقٌ كَرِیْمٌ ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಕ್ಷಮೆ ಮತ್ತು ಗೌರವಾನ್ವಿತ ಆಹಾರವಿದೆ.
আৰবী তাফছীৰসমূহ:
وَالَّذِیْنَ سَعَوْا فِیْۤ اٰیٰتِنَا مُعٰجِزِیْنَ اُولٰٓىِٕكَ اَصْحٰبُ الْجَحِیْمِ ۟
ನಮ್ಮ ದೃಷ್ಟಾಂತಗಳನ್ನು ವಿರೂಪಗೊಳಿಸಲು ಪ್ರಯತ್ನಿಸುವವರು ಯಾರೋ ಅವರೇ ನರಕವಾಸಿಗಳು.
আৰবী তাফছীৰসমূহ:
وَمَاۤ اَرْسَلْنَا مِنْ قَبْلِكَ مِنْ رَّسُوْلٍ وَّلَا نَبِیٍّ اِلَّاۤ اِذَا تَمَنّٰۤی اَلْقَی الشَّیْطٰنُ فِیْۤ اُمْنِیَّتِهٖ ۚ— فَیَنْسَخُ اللّٰهُ مَا یُلْقِی الشَّیْطٰنُ ثُمَّ یُحْكِمُ اللّٰهُ اٰیٰتِهٖ ؕ— وَاللّٰهُ عَلِیْمٌ حَكِیْمٌ ۟ۙ
ನಾವು ನಿಮಗಿಂತ ಮೊದಲು ಕಳುಹಿಸಿದ ಯಾವುದೇ ಸಂದೇಶವಾಹಕರು ಮತ್ತು ಪ್ರವಾದಿಗಳು ಮಾತನಾಡುವಾಗ (ಅಲ್ಲಾಹನ ಗ್ರಂಥವನ್ನು ಓದಿಕೊಡುವಾಗ), ಶೈತಾನನು ಅದಕ್ಕೆ ಕೆಲವು ದುರ್ವಿಚಾರಗಳನ್ನು ಸೇರಿಸುತ್ತಿದ್ದನು. ಆದರೆ ಶೈತಾನನು ಸೇರಿಸಿದ್ದನ್ನು ಅಲ್ಲಾಹು ಅಳಿಸಿ ಹಾಕುತ್ತಿದ್ದನು. ನಂತರ ಅಲ್ಲಾಹು ತನ್ನ ವಚನಗಳನ್ನು ಪ್ರಬಲಗೊಳಿಸುತ್ತಿದ್ದನು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.[1]
[1] ಅಂದರೆ ಪ್ರವಾದಿಗಳು (ಅವರ ಮೇಲೆ ಶಾಂತಿಯಿರಲಿ) ದೇವವಾಣಿಯ ಆಧಾರದಲ್ಲಿ ಮಾತನಾಡುವಾಗ, ಅಥವಾ ಅಲ್ಲಾಹನ ಗ್ರಂಥದ ವಚನಗಳನ್ನು ಓದಿಕೊಡುವಾಗ, ಶೈತಾನನು ಅವರ ಮಾತಿನಲ್ಲಿ ತನ್ನ ಮಾತನ್ನು ಸೇರಿಸಲು, ಅಥವಾ ಅಲ್ಲಾಹನ ವಚನಕ್ಕೆ ತನ್ನ ವಚನಗಳನ್ನು ಸೇರಿಸಲು, ಅಥವಾ ಅದನ್ನು ಓದಿಕೊಡುವಾಗ ಜನರ ಮನದಲ್ಲಿ ದುರ್ವಿಚಾರಗಳನ್ನು ಹುಟ್ಟಿಸಲು ಪ್ರಯತ್ನಿಸುತ್ತಿದ್ದನು. ಆದರೆ ಅಲ್ಲಾಹು ಶೈತಾನನ ಈ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿ ತನ್ನ ವಚನಗಳನ್ನು ಬಲಿಷ್ಠಗೊಳಿಸುತ್ತಿದ್ದನು.
আৰবী তাফছীৰসমূহ:
لِّیَجْعَلَ مَا یُلْقِی الشَّیْطٰنُ فِتْنَةً لِّلَّذِیْنَ فِیْ قُلُوْبِهِمْ مَّرَضٌ وَّالْقَاسِیَةِ قُلُوْبُهُمْ ؕ— وَاِنَّ الظّٰلِمِیْنَ لَفِیْ شِقَاقٍ بَعِیْدٍ ۟ۙ
ಶೈತಾನನು ಸೇರಿಸಿದ್ದನ್ನು ಹೃದಯಗಳಲ್ಲಿ ರೋಗವಿರುವವರಿಗೆ ಮತ್ತು ಕಠೋರ ಹೃದಯಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಲು. ನಿಶ್ಚಯವಾಗಿಯೂ ಅಕ್ರಮಿಗಳು ಆಳವಾದ ವಿರೋಧದಲ್ಲಿದ್ದಾರೆ.
আৰবী তাফছীৰসমূহ:
وَّلِیَعْلَمَ الَّذِیْنَ اُوْتُوا الْعِلْمَ اَنَّهُ الْحَقُّ مِنْ رَّبِّكَ فَیُؤْمِنُوْا بِهٖ فَتُخْبِتَ لَهٗ قُلُوْبُهُمْ ؕ— وَاِنَّ اللّٰهَ لَهَادِ الَّذِیْنَ اٰمَنُوْۤا اِلٰی صِرَاطٍ مُّسْتَقِیْمٍ ۟
ಅದೇ ರೀತಿ ಜ್ಞಾನ ನೀಡಲಾದವರು ಅದು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ತಿಳಿದು ಅದರಲ್ಲಿ ವಿಶ್ವಾಸವಿಡಲು, ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲು. ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ.
আৰবী তাফছীৰসমূহ:
وَلَا یَزَالُ الَّذِیْنَ كَفَرُوْا فِیْ مِرْیَةٍ مِّنْهُ حَتّٰی تَاْتِیَهُمُ السَّاعَةُ بَغْتَةً اَوْ یَاْتِیَهُمْ عَذَابُ یَوْمٍ عَقِیْمٍ ۟
ಅಂತ್ಯಸಮಯವು ಅವರ ಬಳಿಗೆ ಹಠಾತ್ತನೆ ಬರುವ ತನಕ ಅಥವಾ ವಿನಾಶಕಾರಿ ದಿನದ ಶಿಕ್ಷೆಯು ಅವರ ಬಳಿಗೆ ಬರುವ ತನಕ ಸತ್ಯನಿಷೇಧಿಗಳು ಅದರ ಬಗ್ಗೆ ಸಂಶಯದಲ್ಲೇ ಇರುವರು.
আৰবী তাফছীৰসমূহ:
 
অৰ্থানুবাদ ছুৰা: আল-হজ্জ
ছুৰাৰ তালিকা পৃষ্ঠা নং
 
আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ - অনুবাদসমূহৰ সূচীপত্ৰ

মহম্মদ হামজাৰ দ্বাৰা অনুবাদ কৰা হৈছে। মৰ্কজ ৰুৱাদুত তাৰ্জামাৰ তত্ত্বাৱধানত ইয়াক উন্নীত কৰা হৈছে।

বন্ধ