Check out the new design

Firo maanaaji Alqur'aana Teddunde nden - Eggo Kannada ngol - Bashiir Maisoori * - Loowdi firooji ɗi


Firo maanaaji Simoore.: Simoore denndal   Aaya.:

ಅಲ್ -ಹಶ್ರ್

سَبَّحَ لِلّٰهِ مَا فِی السَّمٰوٰتِ وَمَا فِی الْاَرْضِ ۚ— وَهُوَ الْعَزِیْزُ الْحَكِیْمُ ۟
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳೂ ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸುತ್ತಿವೆ ಮತ್ತು ಅವನು ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
Tafsiraaɗe Aarabu ɗen:
هُوَ الَّذِیْۤ اَخْرَجَ الَّذِیْنَ كَفَرُوْا مِنْ اَهْلِ الْكِتٰبِ مِنْ دِیَارِهِمْ لِاَوَّلِ الْحَشْرِ ؔؕ— مَا ظَنَنْتُمْ اَنْ یَّخْرُجُوْا وَظَنُّوْۤا اَنَّهُمْ مَّا نِعَتُهُمْ حُصُوْنُهُمْ مِّنَ اللّٰهِ فَاَتٰىهُمُ اللّٰهُ مِنْ حَیْثُ لَمْ یَحْتَسِبُوْا وَقَذَفَ فِیْ قُلُوْبِهِمُ الرُّعْبَ یُخْرِبُوْنَ بُیُوْتَهُمْ بِاَیْدِیْهِمْ وَاَیْدِی الْمُؤْمِنِیْنَ ۗ— فَاعْتَبِرُوْا یٰۤاُولِی الْاَبْصَارِ ۟
ಗ್ರಂಥದವರ ಪೈಕಿ ಸತ್ಯನಿಷೇಧಿಗಳನ್ನು ಪ್ರಥಮ ಗಡಿಪಾರಿನ ಸಂದರ್ಭದಲ್ಲಿ ಅವರ ಮನೆಗಳಿಂದ ಹೊರಹಾಕಿದವನು ಅವನೇ ಆಗಿದ್ದಾನೆ. ಅವರು ಹೊರಬರುವರೆಂದು ನೀವು ಊಹಿಸಿಯೇ ಇರಲಿಲ್ಲ ಮತ್ತು ಸ್ವತಃ ಅವರು ತಮ್ಮನ್ನು ತಮ್ಮ ಕೋಟೆಗಳು ಅಲ್ಲಾಹನಿಂದ ರಕ್ಷಿಸಿಕೊಳ್ಳಬಲ್ಲವೆಂದು ಭಾವಿಸಿಕೊಂಡಿದ್ದರು. ಆದರೆ ಅವರು ಊಹಿಸಿರದಂತಹ ಕಡೆಯಿಂದ ಅಲ್ಲಾಹನು ಅವರ ಕಡೆಗೆ ಬಂದನು ಹಾಗೂ ಅವರ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸಿದನು.. ಅವರು ಸ್ವತಃ ತಮ್ಮ ಕೈಗಳಿಂದ ಹಾಗೂ ಸತ್ಯ ವಿಶ್ವಾಸಿಗಳ ಕೈಗಳಿಂದ ತಮ್ಮ ಮನೆಗಳನ್ನು ಕೆಡವಿ ನಾಶ ಮಾಡುತ್ತಿದ್ದರು. ಆದ್ದರಿಂದ ಓ ದೃಷ್ಟಿಯುಳ್ಳವರೇ ನೀವು ಪಾಠ ಕಲಿಯಿರಿ.
Tafsiraaɗe Aarabu ɗen:
وَلَوْلَاۤ اَنْ كَتَبَ اللّٰهُ عَلَیْهِمُ الْجَلَآءَ لَعَذَّبَهُمْ فِی الدُّنْیَا ؕ— وَلَهُمْ فِی الْاٰخِرَةِ عَذَابُ النَّارِ ۟
ಅಲ್ಲಾಹನು ಅವರ ಮೇಲೆ ಗಡಿಪಾರನ್ನು ವಿಧಿಸದಿರುತ್ತಿದ್ದರೆ ಖಂಡಿತ ಅವನು ಅವರನ್ನು ಇಹಲೋಕದಲ್ಲೇ ಶಿಕ್ಷಿಸುತ್ತಿದ್ದನು ಮತ್ತು ಅವರಿಗೆ ಪರಲೋಕದಲ್ಲಿ ನರಕಯಾತನೆ ಇದೆ.
Tafsiraaɗe Aarabu ɗen:
ذٰلِكَ بِاَنَّهُمْ شَآقُّوا اللّٰهَ وَرَسُوْلَهٗ ۚ— وَمَنْ یُّشَآقِّ اللّٰهَ فَاِنَّ اللّٰهَ شَدِیْدُ الْعِقَابِ ۟
ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು ವಿರೋಧಿಸುತ್ತಾನೋ ಖಂಡಿತವಾಗಿಯೂ ಅಲ್ಲಾಹನು ಅವರಿಗೆ ಅತ್ಯುಗ್ರ ಯಾತನೆಯನ್ನು ನೀಡುವವನಾಗಿದ್ದಾನೆ.
Tafsiraaɗe Aarabu ɗen:
مَا قَطَعْتُمْ مِّنْ لِّیْنَةٍ اَوْ تَرَكْتُمُوْهَا قَآىِٕمَةً عَلٰۤی اُصُوْلِهَا فَبِاِذْنِ اللّٰهِ وَلِیُخْزِیَ الْفٰسِقِیْنَ ۟
ನೀವು ಖರ್ಜೂರ ಮರವನ್ನು ಕಡಿದಿದ್ದೂ ಅಥವ ಅವುಗಳನ್ನು ಅವುಗಳ ಕಾಂಡಗಳಲ್ಲಿ ಉಳಿಯಬಿಟ್ಟಿದ್ದೂ ಎಲ್ಲವೂ ಅಲ್ಲಾಹನ ಅಪ್ಪಣೆಯ ಮೇರೆಗೆ ಆಗಿತ್ತು ಹಾಗೂ ಇದು ಧಿಕ್ಕಾರಿಗಳನ್ನು ಅಲ್ಲಾಹನು ಅಪಮಾನಿಸಲೆಂದೂ ಆಗಿತ್ತು.
Tafsiraaɗe Aarabu ɗen:
وَمَاۤ اَفَآءَ اللّٰهُ عَلٰی رَسُوْلِهٖ مِنْهُمْ فَمَاۤ اَوْجَفْتُمْ عَلَیْهِ مِنْ خَیْلٍ وَّلَا رِكَابٍ وَّلٰكِنَّ اللّٰهَ یُسَلِّطُ رُسُلَهٗ عَلٰی مَنْ یَّشَآءُ ؕ— وَاللّٰهُ عَلٰی كُلِّ شَیْءٍ قَدِیْرٌ ۟
ಅಲ್ಲಾಹನು ಯಹೂದರಿಂದ ಪಡೆದು ತನ್ನ ಸಂದೇಶವಾಹಕರ ವಶಕ್ಕೆ ಕೊಟ್ಟಿರುವ ಸಂಪತ್ತಿಗಾಗಿ, ನೀವು ಕುದುರೆಗಳನ್ನಾಗಲಿ, ಒಂಟೆಗಳನ್ನಾಗಲಿ ಓಡಿಸಲಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರನ್ನು ತಾನಿಚ್ಛಿಸಿದವರ ಮೇಲೆ ಅಧಿಕಾರವನ್ನು ಕೊಡುತ್ತಾನೆ. ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯ ಉಳ್ಳವನಾಗಿದ್ದಾನೆ.
Tafsiraaɗe Aarabu ɗen:
مَاۤ اَفَآءَ اللّٰهُ عَلٰی رَسُوْلِهٖ مِنْ اَهْلِ الْقُرٰی فَلِلّٰهِ وَلِلرَّسُوْلِ وَلِذِی الْقُرْبٰی وَالْیَتٰمٰی وَالْمَسٰكِیْنِ وَابْنِ السَّبِیْلِ ۙ— كَیْ لَا یَكُوْنَ دُوْلَةً بَیْنَ الْاَغْنِیَآءِ مِنْكُمْ ؕ— وَمَاۤ اٰتٰىكُمُ الرَّسُوْلُ فَخُذُوْهُ ۚ— وَمَا نَهٰىكُمْ عَنْهُ فَانْتَهُوْا ۚ— وَاتَّقُوا اللّٰهَ ؕ— اِنَّ اللّٰهَ شَدِیْدُ الْعِقَابِ ۟ۘ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಗ್ರಾಮವಾಸಿಗಳಿಂದ ನೀಡಿರುವ ಸಂಪತ್ತು ಅಲ್ಲಾಹನಿಗೂ ಸಂದೇಶವಾಹಕರಿಗೂ, ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ ಮತ್ತು ಯಾತ್ರಿಕರಿಗೂ ಆಗಿದೆ. ಇದೇಕೆಂದರೆ ಸಂಪತ್ತು ನಿಮ್ಮಲ್ಲಿನ ಸಿರಿವಂತರ ಕೈಯಲ್ಲಿ ಮಾತ್ರ ಚಲಿಸುತ್ತಾ ಇರಬಾರದೆಂಬುದಾಗಿದೆ ಮತ್ತು ಸಂದೇಶವಾಹಕರು ನಿಮಗೆ ಏನನ್ನು ನೀಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ಯಾವುದರಿಂದ ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನನ್ನು ಭಯಪಡುತ್ತಿರಿ, ಖಂಡಿತವಾಗಿಯೂ ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
Tafsiraaɗe Aarabu ɗen:
لِلْفُقَرَآءِ الْمُهٰجِرِیْنَ الَّذِیْنَ اُخْرِجُوْا مِنْ دِیَارِهِمْ وَاَمْوَالِهِمْ یَبْتَغُوْنَ فَضْلًا مِّنَ اللّٰهِ وَرِضْوَانًا وَّیَنْصُرُوْنَ اللّٰهَ وَرَسُوْلَهٗ ؕ— اُولٰٓىِٕكَ هُمُ الصّٰدِقُوْنَ ۟ۚ
ಆ ಸೊತ್ತು ತಮ್ಮ ಮನೆಗಳಿಂದಲೂ, ತಮ್ಮ ಸೊತ್ತು ಸಂಪತ್ತುಗಳಿAದಲೂ ಹೊರ ಹಾಕಲಾದ ಬಡ ಮುಹಾಜಿರ್‌ಗಳಿಗಾಗಿದೆ. ಅವರು ಅಲ್ಲಾಹನ ಕಡೆಯ ಅನುಗ್ರಹ ಮತ್ತು ಸಂಪ್ರೀತಿಯನ್ನು ಬಯಸುತ್ತಾರೆ ಹಾಗೂ ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಸಹಾಯ ಮಾಡುತ್ತಾರೆ, ಅವರೇ ಸತ್ಯವಂತರಾಗಿದ್ದಾರೆ.
Tafsiraaɗe Aarabu ɗen:
وَالَّذِیْنَ تَبَوَّءُو الدَّارَ وَالْاِیْمَانَ مِنْ قَبْلِهِمْ یُحِبُّوْنَ مَنْ هَاجَرَ اِلَیْهِمْ وَلَا یَجِدُوْنَ فِیْ صُدُوْرِهِمْ حَاجَةً مِّمَّاۤ اُوْتُوْا وَیُؤْثِرُوْنَ عَلٰۤی اَنْفُسِهِمْ وَلَوْ كَانَ بِهِمْ خَصَاصَةٌ ۫ؕ— وَمَنْ یُّوْقَ شُحَّ نَفْسِهٖ فَاُولٰٓىِٕكَ هُمُ الْمُفْلِحُوْنَ ۟ۚ
ಮತ್ತು ಆ ಸೊತ್ತು ಮುಹಾಜಿರ್‌ಗಳ ಆಗಮನಕ್ಕೆ ಮುಂಚೆ ಸತ್ಯವಿಶ್ವಾಸ ಸ್ವೀಕರಿಸಿ ಮದೀನಾದಲ್ಲಿ ವಾಸವಾಗಿದ್ದವರಿಗೂ ಇದೆ. ಅವರು ತಮ್ಮೆಡೆಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ ಹಾಗೂ ಮುಹಾಜಿರ್‌ಗಳಿಗೆ ನೀಡಲಾದ ಧನದ ಕುರಿತು ಅವರು ತಮ್ಮ ಹೃದಯಗಳಲ್ಲಿ ಯಾವ ಪ್ರಯಾಸವನ್ನು ಕಾಣುವುದಿಲ್ಲ ಮತ್ತು ಸ್ವತಃ ತಮಗೆ ಅಗತ್ಯವಿದ್ದರೂ ತಮ್ಮ ಮೇಲೆ ಇತರರಿಗೆ ಆದ್ಯತೆ ನೀಡುತ್ತಾರೆ (ವಸ್ತುತಃ) ಯಾರು ತನ್ನಲ್ಲಿನ ಲೋಭತನದಿಂದ ರಕ್ಷಿಸಲ್ಪಡುತ್ತಾರೋ ಅವರೇ ವಿಜಯಿಗಳು.
Tafsiraaɗe Aarabu ɗen:
وَالَّذِیْنَ جَآءُوْ مِنْ بَعْدِهِمْ یَقُوْلُوْنَ رَبَّنَا اغْفِرْ لَنَا وَلِاِخْوَانِنَا الَّذِیْنَ سَبَقُوْنَا بِالْاِیْمَانِ وَلَا تَجْعَلْ فِیْ قُلُوْبِنَا غِلًّا لِّلَّذِیْنَ اٰمَنُوْا رَبَّنَاۤ اِنَّكَ رَءُوْفٌ رَّحِیْمٌ ۟۠
ಮತ್ತು ಆ ಸೊತ್ತು ಅವರ ನಂತರ ಬಂದವರಿಗೂ ಆಗಿದೆ, ಅವರು ಹೀಗೆ ಪ್ರಾರ್ಥಿಸುತ್ತಾರೆ, ಓ ನಮ್ಮ ಪ್ರಭುವೇ ನಮ್ಮನ್ನು ಮತ್ತು ನಮಗಿಂತ ಮೊದಲು ಸತ್ಯವಿಶ್ವಾಸ ಸ್ವೀಕರಿಸಿದ ಆ ನಮ್ಮ ಸಹೋದರರನ್ನು ಕ್ಷಮಿಸಿಬಿಡು ಹಾಗೂ ನಮ್ಮ ಹೃದಯಗಳಲ್ಲಿ ಸತ್ಯ ವಿಶ್ವಾಸಿಗಳ ಬಗ್ಗೆ ಯಾವುದೇ ಹಗೆತನವನ್ನು ಇರಿಸದಿರು, ಓ ನಮ್ಮ ಪ್ರಭುವೇ ನಿಸ್ಸಂಶಯವಾಗಿಯೂ ನೀನು ಕೃಪಾಳು, ಕರುಣಾನಿಧಿಯು ಆಗಿರುವೆ.
Tafsiraaɗe Aarabu ɗen:
اَلَمْ تَرَ اِلَی الَّذِیْنَ نَافَقُوْا یَقُوْلُوْنَ لِاِخْوَانِهِمُ الَّذِیْنَ كَفَرُوْا مِنْ اَهْلِ الْكِتٰبِ لَىِٕنْ اُخْرِجْتُمْ لَنَخْرُجَنَّ مَعَكُمْ وَلَا نُطِیْعُ فِیْكُمْ اَحَدًا اَبَدًا ۙ— وَّاِنْ قُوْتِلْتُمْ لَنَنْصُرَنَّكُمْ ؕ— وَاللّٰهُ یَشْهَدُ اِنَّهُمْ لَكٰذِبُوْنَ ۟
(ಓ ಪೈಗಂಬರರೇ) ನೀವು ಕಪಟ ವಿಶ್ವಾಸಿಗಳನ್ನು ನೋಡಲಿಲ್ಲವೇ ? ಅವರು ಗ್ರಂಥದವರಾದ ತಮ್ಮ ಸತ್ಯನಿಷೇಧಿ ಸಹೋದರರಿಗೆ ಹೇಳುತ್ತಾರೆ; ನೀವು ಗಡಿಪಾರುಗೊಳಿಸಲ್ಪಟ್ಟರೆ ಖಂಡಿತ ನಾವು ಸಹ ನಿಮ್ಮೊಂದಿಗೆ ಹೊರಡುತ್ತೇವೆ ಹಾಗೂ ನಿಮ್ಮ ವಿಚಾರದಲ್ಲಿ ಎಂದಿಗೂ ಯಾರನ್ನು ಅನುಸರಿಸಲಾರೆವು ಇನ್ನು ನಿಮ್ಮೊಂದಿಗೆ ಯುದ್ಧ ಮಾಡಲಾದರೆ ಖಂಡಿತ ನಾವು ನಿಮಗೆ ಸಹಾಯಮಾಡುತ್ತೇವೆ, ಆದರೆ ಇವರು ನಿಜವಾಗಿಯೂ ಸುಳ್ಳುಗಾರರಾಗಿದ್ದಾರೆಂದು ಅಲ್ಲಾಹನು ಸಾಕ್ಷö್ಯವಹಿಸುತ್ತಾನೆ.
Tafsiraaɗe Aarabu ɗen:
لَىِٕنْ اُخْرِجُوْا لَا یَخْرُجُوْنَ مَعَهُمْ ۚ— وَلَىِٕنْ قُوْتِلُوْا لَا یَنْصُرُوْنَهُمْ ۚ— وَلَىِٕنْ نَّصَرُوْهُمْ لَیُوَلُّنَّ الْاَدْبَارَ ۫— ثُمَّ لَا یُنْصَرُوْنَ ۟
ಅವರೇನಾದರೂ ಗಡಿಪಾರುಗೊಳಿಸಲ್ಪಟ್ಟರೆ ಇವರು ಅವರೊಂದಿಗೆ ಹೊರಡಲಾರರು ಮತ್ತು ಅವರೊಂದಿಗೆ ಯುದ್ಧ ಮಾಡಲಾರದೆ ಇವರು ಅವರಿಗೆ ಸಹಾಯವನ್ನೂ ಮಾಡಲಾರರು ಮತ್ತು ಇವರು ಅವರಿಗೆ ಸಹಾಯ ಮಾಡಲು ಮುಂದೆ ಬಂದರೂ ಖಂಡಿತ ಬೆನ್ನು ತಿರುಗಿಸಿ ಓಡುವರು ಬಳಿಕ ಅವರಿಗೆ ಯಾವ ಸಹಾಯವೂ ದೊರಕಲಾರದು.
Tafsiraaɗe Aarabu ɗen:
لَاَنْتُمْ اَشَدُّ رَهْبَةً فِیْ صُدُوْرِهِمْ مِّنَ اللّٰهِ ؕ— ذٰلِكَ بِاَنَّهُمْ قَوْمٌ لَّا یَفْقَهُوْنَ ۟
( ಓ ಸತ್ಯ ವಿಶ್ವಾಸಿಗಳೇ) ಅವರ ಹೃದಯಗಳಲ್ಲಿ ಅಲ್ಲಾಹನ ಭಯಕ್ಕಿಂತಲೂ ನಿಮ್ಮ ಭಯವಿದೆ. ಇದೇಕೆಂದರೆ ಅವರು ಅವಿವೇಕಿಗಳಾಗಿದ್ದಾರೆ.
Tafsiraaɗe Aarabu ɗen:
لَا یُقَاتِلُوْنَكُمْ جَمِیْعًا اِلَّا فِیْ قُرًی مُّحَصَّنَةٍ اَوْ مِنْ وَّرَآءِ جُدُرٍ ؕ— بَاْسُهُمْ بَیْنَهُمْ شَدِیْدٌ ؕ— تَحْسَبُهُمْ جَمِیْعًا وَّقُلُوْبُهُمْ شَتّٰی ؕ— ذٰلِكَ بِاَنَّهُمْ قَوْمٌ لَّا یَعْقِلُوْنَ ۟ۚ
ಕೋಟೆಗಳಿಂದ ಆವೃತವಾದ ಪ್ರದೇಶಗಳಿಂದ ಅಥವ ಗೋಡೆಗಳ ಮರೆಯಲ್ಲಿ ಅವಿತುಕೊಂಡು ಮಾತ್ರವಲ್ಲದೆ ಅವರು ಒಟ್ಟಾಗಿ ನಿಮ್ಮೊಂದಿಗೆ ಯುದ್ಧ ಮಾಡಲಾರರು. ಅವರ ಒಳಗೊಳಗಿನ ಜಗಳವು ಪ್ರಬಲವಾಗಿದೆ; ನೀವು ಅವರನ್ನು ಒಟ್ಟಾಗಿರುವರೆಂದು ಭಾವಿಸಿ ಕೊಂಡಿದ್ದೀರಾ. ಆದರೆ ಅವರ ಹೃದಯಗಳು ಪರಸ್ಪರ ಭಿನ್ನವಾಗಿವೆ, ಇದೇಕೆಂದರೆ ಅವರು ಬುದ್ಧಿ ಇಲ್ಲದ ಜನರಾಗಿದ್ದಾರೆ.
Tafsiraaɗe Aarabu ɗen:
كَمَثَلِ الَّذِیْنَ مِنْ قَبْلِهِمْ قَرِیْبًا ذَاقُوْا وَبَالَ اَمْرِهِمْ ۚ— وَلَهُمْ عَذَابٌ اَلِیْمٌ ۟ۚ
ಇವರ ಸ್ಥಿತಿಯು ಇವರಿಗಿಂತ ಮೊದಲು ಹತ್ತಿರದಲ್ಲೇ ಗತಿಸಿದವರ ಸ್ಥಿತಿಯಂತಿದೆ. ಅವರು ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದಿದ್ದರು ಮತ್ತು ಅವರಿಗೆ ವೇದನಾಜನಕ ಯಾತನೆಯು ಸಿದ್ಧವಿದೆ.
Tafsiraaɗe Aarabu ɗen:
كَمَثَلِ الشَّیْطٰنِ اِذْ قَالَ لِلْاِنْسَانِ اكْفُرْ ۚ— فَلَمَّا كَفَرَ قَالَ اِنِّیْ بَرِیْٓءٌ مِّنْكَ اِنِّیْۤ اَخَافُ اللّٰهَ رَبَّ الْعٰلَمِیْنَ ۟
ಇವರ (ಕಪಟಿಗಳ) ಉದಾಹರಣೆಯು ಶೈತಾನನಂತಿದೆ ಅವನು ಮನುಷ್ಯನಿಗೆ ನೀನು ಸತ್ಯವನ್ನು ನಿಷೇಧಿಸು ಎಂದನು. ಅವನು ಸತ್ಯವನ್ನು ನಿಷೇಧಿಸಿದಾಗ ಹೇಳಿದನು; ನಾನಂತೂ ನಿನ್ನಿಂದ ಸಂಬAಧ ಮುಕ್ತನಾಗಿದ್ದೇನೆ. ನಾನು ಸಕಲ ಲೋಕಗಳ ಪ್ರಭುವಾದ ಅಲ್ಲಾಹನನ್ನು ಭಯಪಡುತ್ತೇನೆ.
Tafsiraaɗe Aarabu ɗen:
فَكَانَ عَاقِبَتَهُمَاۤ اَنَّهُمَا فِی النَّارِ خَالِدَیْنِ فِیْهَا ؕ— وَذٰلِكَ جَزٰٓؤُا الظّٰلِمِیْنَ ۟۠
ಕೊನೆಗೆ ಅವರಿಬ್ಬರ ಗತಿ ಏನಾಯಿತೆಂದರೆ ಅವರಿಬ್ಬರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಮತ್ತು ಅಕ್ರಮಿಗಳ ಪ್ರತಿಫಲವೂ ಇದೇ ಆಗಿರುತ್ತದೆ.
Tafsiraaɗe Aarabu ɗen:
یٰۤاَیُّهَا الَّذِیْنَ اٰمَنُوا اتَّقُوا اللّٰهَ وَلْتَنْظُرْ نَفْسٌ مَّا قَدَّمَتْ لِغَدٍ ۚ— وَاتَّقُوا اللّٰهَ ؕ— اِنَّ اللّٰهَ خَبِیْرٌ بِمَا تَعْمَلُوْنَ ۟
ಓ ಸತ್ಯವಿಶ್ವಾಸಿಗಳೇ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪ್ರತಿಯೊಬ್ಬ ವ್ಯಕ್ತಿಯು ತಾನು ನಾಳೆ ಪರಲೋಕಕ್ಕಾಗಿ ಏನನ್ನು ಕಳುಹಿಸಿರುತ್ತಾನೆಂಬುದನ್ನು ನೋಡಲಿ ನೀವು ಸದಾ ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯೂ ಅಲ್ಲಾಹನು ನಿಮ್ಮ ಸಕಲ ಕರ್ಮಗಳ ಕುರಿತು ಅರಿವುಳ್ಳವನಾಗಿದ್ದಾನೆ.
Tafsiraaɗe Aarabu ɗen:
وَلَا تَكُوْنُوْا كَالَّذِیْنَ نَسُوا اللّٰهَ فَاَنْسٰىهُمْ اَنْفُسَهُمْ ؕ— اُولٰٓىِٕكَ هُمُ الْفٰسِقُوْنَ ۟
ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ ಮಾಡಿಬಿಟ್ಟನು, ಅವರೇ ದುರಾಚಾರಿಗಳಾಗಿದ್ದಾರೆ,
Tafsiraaɗe Aarabu ɗen:
لَا یَسْتَوِیْۤ اَصْحٰبُ النَّارِ وَاَصْحٰبُ الْجَنَّةِ ؕ— اَصْحٰبُ الْجَنَّةِ هُمُ الْفَآىِٕزُوْنَ ۟
ನರಕವಾಸಿಗಳು, ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳು ಯಶಸ್ಸು ಪಡೆದವರಾಗಿರುವರು.
Tafsiraaɗe Aarabu ɗen:
لَوْ اَنْزَلْنَا هٰذَا الْقُرْاٰنَ عَلٰی جَبَلٍ لَّرَاَیْتَهٗ خَاشِعًا مُّتَصَدِّعًا مِّنْ خَشْیَةِ اللّٰهِ ؕ— وَتِلْكَ الْاَمْثَالُ نَضْرِبُهَا لِلنَّاسِ لَعَلَّهُمْ یَتَفَكَّرُوْنَ ۟
ನಾವು ಈ ಕುರ್‌ಆನನ್ನು ಪರ್ವತದ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ ಅದು ಅಲ್ಲಾಹನ ಭಯದಿಂದ ಕುಸಿದು ನುಚ್ಚುನೂರಾಗುವುದನ್ನು ನೀವು ಕಾಣುತ್ತಿದ್ದೀರಿ ಜನರು ಚಿಂತಿಸಲೆAದು ನಾವು ಉಪಮೆಗಳನ್ನು ಅವರಿಗೆ ವಿವರಿಸಿಕೊಡುತ್ತೇವೆ.
Tafsiraaɗe Aarabu ɗen:
هُوَ اللّٰهُ الَّذِیْ لَاۤ اِلٰهَ اِلَّا هُوَ ۚ— عٰلِمُ الْغَیْبِ وَالشَّهَادَةِ ۚ— هُوَ الرَّحْمٰنُ الرَّحِیْمُ ۟
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ, ಗೋಚರ ಅಗೋಚರಗಳ ಜ್ಞಾನಿಯವನು ಅವನು ಪರಮದಯಾ ಮಯನು ಕರುಣಾನಿಧಿಯೂ ಆಗಿರುವನು.
Tafsiraaɗe Aarabu ɗen:
هُوَ اللّٰهُ الَّذِیْ لَاۤ اِلٰهَ اِلَّا هُوَ ۚ— اَلْمَلِكُ الْقُدُّوْسُ السَّلٰمُ الْمُؤْمِنُ الْمُهَیْمِنُ الْعَزِیْزُ الْجَبَّارُ الْمُتَكَبِّرُ ؕ— سُبْحٰنَ اللّٰهِ عَمَّا یُشْرِكُوْنَ ۟
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ. ಅವನು ಅಧಿಪತಿಯೂ, ಪರಮಪಾವನನೂ, ಸಕಲ ನ್ಯೂನತೆಗಳಿಂದ ಮುಕ್ತನೂ, ಆಶ್ರಯದಾತನೂ, ಮೇಲ್ವಿಚಾರಕನೂ, ಪ್ರಬಲನೂ, ಸ್ವೇಚ್ಛಾಧಿಪತಿಯೂ, ಮಹಾನತೆಯುಳ್ಳವನೂ, ಅವರು ಸಹಭಾಗಿಗಳಾಗಿ ನಿಶ್ಚಯಿಸುವ ವಸ್ತುಗಳಿಂದ ಅವನು ಅದೆಷ್ಟೋ ಪರಿಶುದ್ಧನು.
Tafsiraaɗe Aarabu ɗen:
هُوَ اللّٰهُ الْخَالِقُ الْبَارِئُ الْمُصَوِّرُ لَهُ الْاَسْمَآءُ الْحُسْنٰی ؕ— یُسَبِّحُ لَهٗ مَا فِی السَّمٰوٰتِ وَالْاَرْضِ ۚ— وَهُوَ الْعَزِیْزُ الْحَكِیْمُ ۟۠
ಅವನೇ ಅಲ್ಲಾಹನು; ಸೃಷ್ಟಿಕರ್ತನೂ ಅಸ್ತಿತ್ವವನ್ನು ನೀಡುವವನೂ, ರೂಪ ನೀಡುವವನೂ, ಆಗಿರುವ. ಅವನಿಗೆ ಅತ್ಯುತ್ತಮ ನಾಮಗಳಿವೆ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವ ಸಕಲ ವಸ್ತುಗಳು ಅವನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಸುಜ್ಞಾನಿಯೂ ಆಗಿರುವನು.
Tafsiraaɗe Aarabu ɗen:
 
Firo maanaaji Simoore.: Simoore denndal
Loowdi cimooje ɗe Tonngoode hello ngon
 
Firo maanaaji Alqur'aana Teddunde nden - Eggo Kannada ngol - Bashiir Maisoori - Loowdi firooji ɗi

Eggo (lapito) mum ko Seyko Bashir Misuri. Nde woni ko e ñiiɓirde Ruwwad ngam eggude.

Uddu