Check out the new design

ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ហាំហ្សះ បេតួរ * - មាតិកានៃការបកប្រែ

PDF XML CSV Excel API
Please review the Terms and Policies

ការបកប្រែអត្ថន័យ ជំពូក​: យូសុហ្វ   វាក្យខណ្ឌ:
وَمَاۤ اُبَرِّئُ نَفْسِیْ ۚ— اِنَّ النَّفْسَ لَاَمَّارَةٌ بِالسُّوْٓءِ اِلَّا مَا رَحِمَ رَبِّیْ ؕ— اِنَّ رَبِّیْ غَفُوْرٌ رَّحِیْمٌ ۟
ನನ್ನ ಮನಸ್ಸು ಪರಿಶುದ್ಧವಾಗಿದೆಯೆಂದು ನಾನು ಹೇಳುವುದಿಲ್ಲ. ನಿಶ್ಚಯವಾಗಿಯೂ ಮನಸ್ಸು ಕೆಡುಕು ಮಾಡಲು ಉತ್ತೇಜಿಸುತ್ತಲೇ ಇರುತ್ತದೆ. ನನ್ನ ಪರಿಪಾಲಕನು (ಅಲ್ಲಾಹು) ದಯೆ ತೋರಿದವರ ಹೊರತು. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
ការបកស្រាយជាភាសា​អារ៉ាប់:
وَقَالَ الْمَلِكُ ائْتُوْنِیْ بِهٖۤ اَسْتَخْلِصْهُ لِنَفْسِیْ ۚ— فَلَمَّا كَلَّمَهٗ قَالَ اِنَّكَ الْیَوْمَ لَدَیْنَا مَكِیْنٌ اَمِیْنٌ ۟
ಅರಸ ಹೇಳಿದನು: “ಅವರನ್ನು ನನ್ನ ಬಳಿಗೆ ತನ್ನಿ. ನಾನು ಅವರನ್ನು ನನ್ನ ಆಪ್ತ ಸಲಹೆಗಾರನಾಗಿ ನೇಮಿಸುತ್ತೇನೆ.” ನಂತರ ಅವರೊಡನೆ ಮಾತನಾಡಿದಾಗ ಅರಸ ಹೇಳಿದನು: “ನೀವು ಇಂದಿನಿಂದ ನಮ್ಮ ಬಳಿ ಗೌರವಾನ್ವಿತ ಮತ್ತು ವಿಶ್ವಾಸಾರ್ಹ ವ್ಯಕ್ತಿಯಾಗಿದ್ದೀರಿ.”
ការបកស្រាយជាភាសា​អារ៉ាប់:
قَالَ اجْعَلْنِیْ عَلٰی خَزَآىِٕنِ الْاَرْضِ ۚ— اِنِّیْ حَفِیْظٌ عَلِیْمٌ ۟
ಯೂಸುಫ್ ಹೇಳಿದರು: “ನನ್ನನ್ನು ರಾಜ್ಯದ ಬೊಕ್ಕಸಗಳ ಅಧಿಕಾರಿಯನ್ನಾಗಿ ನೇಮಿಸಿ. ನಾನು ರಕ್ಷಣೆ ಮಾಡುವವನು ಮತ್ತು ತಿಳುವಳಿಕೆಯುಳ್ಳವನಾಗಿದ್ದೇನೆ.”
ការបកស្រាយជាភាសា​អារ៉ាប់:
وَكَذٰلِكَ مَكَّنَّا لِیُوْسُفَ فِی الْاَرْضِ ۚ— یَتَبَوَّاُ مِنْهَا حَیْثُ یَشَآءُ ؕ— نُصِیْبُ بِرَحْمَتِنَا مَنْ نَّشَآءُ وَلَا نُضِیْعُ اَجْرَ الْمُحْسِنِیْنَ ۟
ಈ ರೀತಿ ನಾವು ಯೂಸುಫರಿಗೆ ಆ ರಾಜ್ಯದಲ್ಲಿ ಅಧಿಕಾರವನ್ನು ನೀಡಿದೆವು—ಅಲ್ಲಿ ಅವರಿಗೆ ಇಷ್ಟ ಬಂದ ಕಡೆ ಅವರು ವಾಸಿಸಲಿ ಎಂದು. ನಾವು ಇಚ್ಛಿಸುವವರಿಗೆ ನಾವು ನಮ್ಮ ದಯೆಯನ್ನು ದಯಪಾಲಿಸುತ್ತೇವೆ. ಒಳಿತು ಮಾಡುವವರ ಪ್ರತಿಫಲವನ್ನು ನಾವು ವ್ಯರ್ಥಗೊಳಿಸುವುದಿಲ್ಲ.
ការបកស្រាយជាភាសា​អារ៉ាប់:
وَلَاَجْرُ الْاٰخِرَةِ خَیْرٌ لِّلَّذِیْنَ اٰمَنُوْا وَكَانُوْا یَتَّقُوْنَ ۟۠
ಸತ್ಯವಿಶ್ವಾಸಿಗಳಿಗೆ ಮತ್ತು ದೇವಭಯವುಳ್ಳವರಿಗೆ ಪರಲೋಕದ ಪ್ರತಿಫಲವೇ ಅತಿಶ್ರೇಷ್ಠವಾಗಿದೆ.
ការបកស្រាយជាភាសា​អារ៉ាប់:
وَجَآءَ اِخْوَةُ یُوْسُفَ فَدَخَلُوْا عَلَیْهِ فَعَرَفَهُمْ وَهُمْ لَهٗ مُنْكِرُوْنَ ۟
ಯೂಸುಫರ ಸಹೋದರರು (ಈಜಿಪ್ಟಿಗೆ) ಬಂದರು.[1] ಅವರು ಯೂಸುಫರ ಬಳಿಗೆ ತೆರಳಿದಾಗ, ಯೂಸುಫ್ ಅವರನ್ನು ಗುರುತಿಸಿದರು. ಆದರೆ ಅವರಿಗೆ ಯೂಸುಫರನ್ನು ಗುರುತಿಸಲಾಗಲಿಲ್ಲ.
[1] ಏಳು ಸಮೃದ್ಧಪೂರ್ಣ ವರ್ಷಗಳು ಕಳೆದ ಬಳಿಕ ಏಳು ಬರಗಾಲದ ವರ್ಷಗಳು ಬಂದವು. ಈ ವರ್ಷಗಳಲ್ಲಿ ಬರಗಾಲವು ಎಷ್ಟು ತೀವ್ರವಾಗಿತ್ತೆಂದರೆ ಈಜಿಪ್ಚ್ ದೇಶವು ಸಂಪೂರ್ಣವಾಗಿ ಬರ ಪೀಡಿತವಾಯಿತು. ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ಮತ್ತು ಅವರ ಮಕ್ಕಳು ವಾಸವಾಗಿದ್ದ ಕನ್‌ಆನ್ ದೇಶವು ಕೂಡ ಬರಗಾಲಕ್ಕೆ ತುತ್ತಾಯಿತು. ಯೂಸುಫ್ (ಅವರ ಮೇಲೆ ಶಾಂತಿಯಿರಲಿ) ಮೊದಲೇ ಯೋಜನೆಗಳನ್ನು ರಚಿಸಿ ಬರಗಾಲವನ್ನು ಅತ್ಯಂತ ನಾಜೂಕಾಗಿ ನಿರ್ವಹಿಸಿದರು. ಈಜಿಪ್ಟಿನಲ್ಲಿ ಧಾನ್ಯ ಸಿಗುತ್ತದೆಯೆಂಬ ಸುದ್ದಿ ತಿಳಿದಾಗ ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ತಮ್ಮ ಮಕ್ಕಳನ್ನು ಧಾನ್ಯ ಖರೀದಿಸಲು ಈಜಿಪ್ಟಿಗೆ ಕಳುಹಿಸಿದರು.
ការបកស្រាយជាភាសា​អារ៉ាប់:
وَلَمَّا جَهَّزَهُمْ بِجَهَازِهِمْ قَالَ ائْتُوْنِیْ بِاَخٍ لَّكُمْ مِّنْ اَبِیْكُمْ ۚ— اَلَا تَرَوْنَ اَنِّیْۤ اُوْفِی الْكَیْلَ وَاَنَا خَیْرُ الْمُنْزِلِیْنَ ۟
ಅವರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಸಜ್ಜುಗೊಳಿಸಿದಾಗ ಯೂಸುಫ್ ಹೇಳಿದರು: “ನಿಮ್ಮ ತಂದೆಯ ಕಡೆಯ ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ. ನಾನು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ಕೊಡುವುದನ್ನು ಮತ್ತು ನಾನು ಆತಿಥ್ಯ ನೀಡುವವರಲ್ಲಿ ಅತ್ಯುತ್ತಮನೆಂದು ನೀವು ನೋಡುತ್ತಿಲ್ಲವೇ?
ការបកស្រាយជាភាសា​អារ៉ាប់:
فَاِنْ لَّمْ تَاْتُوْنِیْ بِهٖ فَلَا كَیْلَ لَكُمْ عِنْدِیْ وَلَا تَقْرَبُوْنِ ۟
ನೀವು ಅವನನ್ನು ಕರೆದುಕೊಂಡು ಬರದಿದ್ದರೆ, ನನ್ನಿಂದ ನಿಮಗೆ (ಇನ್ನು ಮುಂದೆ ಯಾವುದೇ ಧಾನ್ಯವನ್ನು) ಅಳೆದು ಕೊಡಲಾಗುವುದಿಲ್ಲ ಮತ್ತು ನೀವು ನನ್ನ ಬಳಿಗೆ ಬರಬೇಕಾಗಿಯೂ ಇಲ್ಲ.”[1]
[1] ಯೂಸುಫ್ (ಅವರ ಮೇಲೆ ಶಾಂತಿಯಿರಲಿ) ತನ್ನ ಸಹೋದರರನ್ನು ಅತ್ಯುತ್ತಮವಾಗಿ ಸತ್ಕರಿಸಿದರು. ಅವರಿಗೆ ಬೇಕಾದ ಎಲ್ಲಾ ಆಹಾರ ಸಾಮಗ್ರಿಗಳನ್ನು ಒದಗಿಸಿದರು. ನಮಗೊಬ್ಬ ತಂದೆ ಮತ್ತು ಇಬ್ಬರು ತಮ್ಮಂದಿರಿದ್ದಾರೆ. ಒಬ್ಬ ತಮ್ಮ ಕಳೆದುಹೋಗಿದ್ದಾನೆ. ಇನ್ನೊಬ್ಬ ತಮ್ಮನನ್ನು ತಂದೆಯವರು ಎಲ್ಲಿಗೂ ಕಳಿಸುವುದಿಲ್ಲ. ಆದ್ದರಿಂದ ಅವನು ನಮ್ಮ ಜೊತೆಗೆ ಬಂದಿಲ್ಲವೆಂದು ಸಹೋದರರು ಹೇಳಿದರು. ಆಗ ಯೂಸುಫ್ (ಅವರ ಮೇಲೆ ಶಾಂತಿಯಿರಲಿ) ಮುಂದೆ ನೀವು ಇಲ್ಲಿಗೆ ಆಹಾರ ಸಾಮಗ್ರಿಗಳಿಗಾಗಿ ಬರುವಾಗ ತಮ್ಮನನ್ನೂ ಕರೆದುಕೊಂಡು ಬನ್ನಿ. ಇಲ್ಲದಿದ್ದರೆ ನಿಮಗೆ ನಾನು ಆಹಾರ ಸಾಮಗ್ರಿಗಳನ್ನು ಕೊಡುವುದಿಲ್ಲವೆಂದು ಹೇಳಿದರು.
ការបកស្រាយជាភាសា​អារ៉ាប់:
قَالُوْا سَنُرَاوِدُ عَنْهُ اَبَاهُ وَاِنَّا لَفٰعِلُوْنَ ۟
ಅವರು ಹೇಳಿದರು: “ನಾನು ಅವನ ತಂದೆಯನ್ನು ಪುಸಲಾಯಿಸುವೆವು. ನಾವು ಅದನ್ನು ಖಂಡಿತ ಮಾಡುವೆವು.”
ការបកស្រាយជាភាសា​អារ៉ាប់:
وَقَالَ لِفِتْیٰنِهِ اجْعَلُوْا بِضَاعَتَهُمْ فِیْ رِحَالِهِمْ لَعَلَّهُمْ یَعْرِفُوْنَهَاۤ اِذَا انْقَلَبُوْۤا اِلٰۤی اَهْلِهِمْ لَعَلَّهُمْ یَرْجِعُوْنَ ۟
ಯೂಸುಫ್ ತಮ್ಮ ಆಳುಗಳೊಂದಿಗೆ ಹೇಳಿದರು: “ಅವರು (ಧಾನ್ಯ ಖರೀದಿಸಲು ತಂದ) ಸರಕುಗಳನ್ನು ಅವರ ಹಸುಬೆಗಳಲ್ಲೇ (ಗುಟ್ಟಾಗಿ) ಹಾಕಿಬಿಡಿ. ಅವರು ತಮ್ಮ ಮನೆಯವರ ಬಳಿಗೆ ಮರಳಿದಾಗ ಅವುಗಳನ್ನು ಗುರುತಿಸುವರು. ಇದರಿಂದ ಅವರು ಮರಳಿ ಬರುವ ಸಾಧ್ಯತೆ ಹೆಚ್ಚಿದೆ.”
ការបកស្រាយជាភាសា​អារ៉ាប់:
فَلَمَّا رَجَعُوْۤا اِلٰۤی اَبِیْهِمْ قَالُوْا یٰۤاَبَانَا مُنِعَ مِنَّا الْكَیْلُ فَاَرْسِلْ مَعَنَاۤ اَخَانَا نَكْتَلْ وَاِنَّا لَهٗ لَحٰفِظُوْنَ ۟
ಅವರು ತಮ್ಮ ತಂದೆಯ ಬಳಿಗೆ ಮರಳಿದಾಗ ಹೇಳಿದರು: “ಅಪ್ಪಾ! ನಮಗೆ (ಧಾನ್ಯಗಳನ್ನು) ಅಳೆದುಕೊಡುವುದನ್ನು ತಡೆಹಿಡಿಯಲಾಗಿದೆ. ಆದ್ದರಿಂದ ನಮ್ಮ ಜೊತೆಗೆ ನಮ್ಮ ತಮ್ಮನನ್ನು ಕಳುಹಿಸಿ. ನಾವು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ತರುವೆವು. ನಾವು ಇವನನ್ನು ಸುರಕ್ಷಿತವಾಗಿ ಕಾಪಾಡುವೆವು.”
ការបកស្រាយជាភាសា​អារ៉ាប់:
 
ការបកប្រែអត្ថន័យ ជំពូក​: យូសុហ្វ
មាតិកានៃជំពូក លេខ​ទំព័រ
 
ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ហាំហ្សះ បេតួរ - មាតិកានៃការបកប្រែ

បានបកប្រែដោយ​មូហាម៉ាត់ ហាំហ្សះ បេតួរ។ បានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ