Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್- ಹಜ್ಜ್   ಶ್ಲೋಕ:
وَیَسْتَعْجِلُوْنَكَ بِالْعَذَابِ وَلَنْ یُّخْلِفَ اللّٰهُ وَعْدَهٗ ؕ— وَاِنَّ یَوْمًا عِنْدَ رَبِّكَ كَاَلْفِ سَنَةٍ مِّمَّا تَعُدُّوْنَ ۟
ಅವರು ಯಾತನೆಗೆ ಆತುರಪಟ್ಟುಕೊಳ್ಳುತ್ತಿದ್ದಾರೆ. ಆದರೆ ಅಲ್ಲಾಹನು ತನ್ನ ವಾಗ್ದನವನ್ನೆಂದೂ ಉಲ್ಲಂಘಿಸುವುದಿಲ್ಲ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಬಳಿ ಒಂದು ದಿನವೆಂದರೆ ನೀವು ಎಣಿಸುವ ಒಂದು ಸಾವಿರ ವರ್ಷಗಳದ್ದಾಗಿರುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
وَكَاَیِّنْ مِّنْ قَرْیَةٍ اَمْلَیْتُ لَهَا وَهِیَ ظَالِمَةٌ ثُمَّ اَخَذْتُهَا ۚ— وَاِلَیَّ الْمَصِیْرُ ۟۠
ಅದೆಷ್ಟೋ ಅಕ್ರಮಿ ನಾಡುಗಳಿಗೆ ನಾನು ಕಾಲಾವಕಾಶವನ್ನು ನೀಡಿದೆನು. ಅನಂತರ ನಾನು ಅವರನ್ನು ಹಿಡಿದುಬಿಟ್ಟೆನು ಮತ್ತು ನನ್ನೆಡೆಗೇ ಮರಳುವಿಕೆಯಿರುವುದು.
ಅರಬ್ಬಿ ವ್ಯಾಖ್ಯಾನಗಳು:
قُلْ یٰۤاَیُّهَا النَّاسُ اِنَّمَاۤ اَنَا لَكُمْ نَذِیْرٌ مُّبِیْنٌ ۟ۚ
(ಓ ಪೈಗಂಬರರೇ) ಹೇಳಿರಿ: ಓ ಜನರೇ, ನಾನು ನಿಮಗೆ ಬಹಿರಂಗವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
ಅರಬ್ಬಿ ವ್ಯಾಖ್ಯಾನಗಳು:
فَالَّذِیْنَ اٰمَنُوْا وَعَمِلُوا الصّٰلِحٰتِ لَهُمْ مَّغْفِرَةٌ وَّرِزْقٌ كَرِیْمٌ ۟
ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವರೋ ಅವರಿಗೆ ಕ್ಷಮೆಯೂ, ಗೌರವಪೂರ್ಣ ಜೀವನಾಧಾರವು ಇರುವುದು.
ಅರಬ್ಬಿ ವ್ಯಾಖ್ಯಾನಗಳು:
وَالَّذِیْنَ سَعَوْا فِیْۤ اٰیٰتِنَا مُعٰجِزِیْنَ اُولٰٓىِٕكَ اَصْحٰبُ الْجَحِیْمِ ۟
ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.
ಅರಬ್ಬಿ ವ್ಯಾಖ್ಯಾನಗಳು:
وَمَاۤ اَرْسَلْنَا مِنْ قَبْلِكَ مِنْ رَّسُوْلٍ وَّلَا نَبِیٍّ اِلَّاۤ اِذَا تَمَنّٰۤی اَلْقَی الشَّیْطٰنُ فِیْۤ اُمْنِیَّتِهٖ ۚ— فَیَنْسَخُ اللّٰهُ مَا یُلْقِی الشَّیْطٰنُ ثُمَّ یُحْكِمُ اللّٰهُ اٰیٰتِهٖ ؕ— وَاللّٰهُ عَلِیْمٌ حَكِیْمٌ ۟ۙ
ನಾವು ನಿಮಗಿಂತ ಮೊದಲು ಯಾವೊಬ್ಬ ಸಂದೇಶವಾಹಕನನ್ನಾಗಲಿ, ಪ್ರವಾದಿಯನ್ನಾಗಲೀ ಕಳುಹಿಸಿರುತ್ತೇವೆಯೋ ಅವನು ಏನೇ ಉದ್ದೇಶಿಸಿದರೂ ಅವನ ಉದ್ದೇಶ ಮಾರ್ಗದಲ್ಲಿ ಶೈತಾನನು ದುಷ್ಪೆçÃರಣೆಗಳನ್ನು ಹಾಕಿದನು. ಆದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ನೀಗಿಸುತ್ತಾನೆ. ಮತ್ತು ತನ್ನ ವಚನಗಳನ್ನು ಸದೃಢಗೊಳಿಸುತ್ತಾನೆ. ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿರುವನು.
ಅರಬ್ಬಿ ವ್ಯಾಖ್ಯಾನಗಳು:
لِّیَجْعَلَ مَا یُلْقِی الشَّیْطٰنُ فِتْنَةً لِّلَّذِیْنَ فِیْ قُلُوْبِهِمْ مَّرَضٌ وَّالْقَاسِیَةِ قُلُوْبُهُمْ ؕ— وَاِنَّ الظّٰلِمِیْنَ لَفِیْ شِقَاقٍ بَعِیْدٍ ۟ۙ
ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ ಸಾಧನವನ್ನಾಗಿ ಮಾಡಲೆಂದಾಗಿದೆ ಮತ್ತು ನಿಸ್ಸಂದೇಹವಾಗಿಯೂ ಅಕ್ರಮಿಗಳು ವಿರೋಧದಲ್ಲಿ ಬಹುದೂರ ಸರಿದಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
وَّلِیَعْلَمَ الَّذِیْنَ اُوْتُوا الْعِلْمَ اَنَّهُ الْحَقُّ مِنْ رَّبِّكَ فَیُؤْمِنُوْا بِهٖ فَتُخْبِتَ لَهٗ قُلُوْبُهُمْ ؕ— وَاِنَّ اللّٰهَ لَهَادِ الَّذِیْنَ اٰمَنُوْۤا اِلٰی صِرَاطٍ مُّسْتَقِیْمٍ ۟
ಮತ್ತು ಜ್ಞಾನ ಪಡೆದವರು ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವೇ ಆಗಿದೆಯೆಂದು ದೃಢವಾಗಿ ತಿಳಿಯಲೆಂದಾಗಿದೆ. ಆ ಬಳಿಕ ಅವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲಿ. ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸವಿರಿಸಿದವರಿಗೆ ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
وَلَا یَزَالُ الَّذِیْنَ كَفَرُوْا فِیْ مِرْیَةٍ مِّنْهُ حَتّٰی تَاْتِیَهُمُ السَّاعَةُ بَغْتَةً اَوْ یَاْتِیَهُمْ عَذَابُ یَوْمٍ عَقِیْمٍ ۟
ಸತ್ಯನಿಷೇಧಿಸಿದವರು ದಿವ್ಯವಾಣಿಯ ಕುರಿತು ಸದಾ ಸಂದೇಹದಲ್ಲೇ ಇರುವರು. ಕೊನೆಗೆ ಅವರ ಮೇಲೆ ಅಂತ್ಯ ಗಳಿಗೆಯು ಹಠಾತ್ತನೆ ಬಂದುಬಿಡುವುದು ಅಥವಾ ಅಶುಭದಿನದ ಯಾತನೆಯು ಅವರ ಬಳಿ ಬಂದು ಬಿಡುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್- ಹಜ್ಜ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ