Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ಸೂಚಿ


ಅರ್ಥಗಳ ಅನುವಾದ ಸೂರಾ: ಅಝ್ಝುಮರ್   ವಚನ:

ಅಝ್ಝುಮರ್

تَنْزِیْلُ الْكِتٰبِ مِنَ اللّٰهِ الْعَزِیْزِ الْحَكِیْمِ ۟
ಇದು ಪ್ರಚಂಡನೂ ಸುಜ್ಞಾನಿಯೂ ಆದ ಅಲ್ಲಾಹನ ವತಿಯಿಂದ ಅವತೀರ್ಣವಾದ ಗ್ರಂಥ.
ಅರಬ್ಬಿ ವ್ಯಾಖ್ಯಾನಗಳು:
اِنَّاۤ اَنْزَلْنَاۤ اِلَیْكَ الْكِتٰبَ بِالْحَقِّ فَاعْبُدِ اللّٰهَ مُخْلِصًا لَّهُ الدِّیْنَ ۟ؕ
ನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮ್ಮಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ನೀವು ಏಕನಿಷ್ಠರಾಗಿ, ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಆರಾಧಿಸಿರಿ.
ಅರಬ್ಬಿ ವ್ಯಾಖ್ಯಾನಗಳು:
اَلَا لِلّٰهِ الدِّیْنُ الْخَالِصُ ؕ— وَالَّذِیْنَ اتَّخَذُوْا مِنْ دُوْنِهٖۤ اَوْلِیَآءَ ۘ— مَا نَعْبُدُهُمْ اِلَّا لِیُقَرِّبُوْنَاۤ اِلَی اللّٰهِ زُلْفٰی ؕ— اِنَّ اللّٰهَ یَحْكُمُ بَیْنَهُمْ فِیْ مَا هُمْ فِیْهِ یَخْتَلِفُوْنَ ؕ۬— اِنَّ اللّٰهَ لَا یَهْدِیْ مَنْ هُوَ كٰذِبٌ كَفَّارٌ ۟
ಎಚ್ಚರಿಕೆ ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನಿಗೇ ಮೀಸಲಾಗಿದೆ ಮತ್ತು ಯಾರು ಅವನ ಹೊರತು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುತ್ತಾರೋ ಅವರು ನಮ್ಮನ್ನು 'ಅಲ್ಲಾಹನ ಬಳಿ ನಿಕಟಗೊಳಿಸಲೆಂದು ಮಾತ್ರ ನಾವು ಅವರನ್ನು ಆರಾಧಿಸುತ್ತೇವೆ (ಎಂದು ಹೇಳುತ್ತಾರೆ). ಅವರು ಭಿನ್ನತೆ ತೋರುತ್ತಿದ್ದ ವಿಚಾರಗಳ ತೀರ್ಮಾನವನ್ನು ಅಲ್ಲಾಹನು ಮಾಡಲಿದ್ದಾನೆ. ನಿಶ್ಚಯವಾಗಿಯು ಸುಳ್ಳರೂ, ಕೃತಘ್ನರೂ ಆದವರನ್ನು ಅಲ್ಲಾಹನು ಸನ್ಮಾರ್ಗಕ್ಕೆ ಮುನ್ನಡೆಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
لَوْ اَرَادَ اللّٰهُ اَنْ یَّتَّخِذَ وَلَدًا لَّاصْطَفٰی مِمَّا یَخْلُقُ مَا یَشَآءُ ۙ— سُبْحٰنَهٗ ؕ— هُوَ اللّٰهُ الْوَاحِدُ الْقَهَّارُ ۟
ಅಲ್ಲಾಹನು ಯಾರನ್ನಾದರೂ ಪುತ್ರನನ್ನಾಗಿ ಮಾಡಿಕೊಳ್ಳಲು ಇಚ್ಛಿಸಿರುತ್ತಿದ್ದರೆ ಅವನು ಸೃಷ್ಟಿಸಿದವುಗಳಲ್ಲಿಂದ ತಾನಿಚ್ಛಿಸಿದ್ದನ್ನು ಆರಿಸಿಕೊಳ್ಳುತ್ತಿದ್ದನು. (ಆದರೆ) ಅವನು ಪರಮಪಾನನನು. ಅವನು ಏಕÉÊಕನೂ, ಸರ್ವರ ಮೇಲೆ ಪ್ರಾಬಲ್ಯವುಳ್ಳವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
خَلَقَ السَّمٰوٰتِ وَالْاَرْضَ بِالْحَقِّ ۚ— یُكَوِّرُ الَّیْلَ عَلَی النَّهَارِ وَیُكَوِّرُ النَّهَارَ عَلَی الَّیْلِ وَسَخَّرَ الشَّمْسَ وَالْقَمَرَ ؕ— كُلٌّ یَّجْرِیْ لِاَجَلٍ مُّسَمًّی ؕ— اَلَا هُوَ الْعَزِیْزُ الْغَفَّارُ ۟
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯದೊಂದಿಗೆ ಸೃಷ್ಟಿಸಿರುತ್ತಾನೆ. ಅವನು ರಾತ್ರಿಯನ್ನು ಹಗಲಿನ ಮೇಲೆ ಹಾಗೂ ಹಗಲನ್ನುರಾತ್ರಿಯ ಮೇಲೆ ಸುತ್ತುತ್ತಾನೆ ಮತ್ತು ಸೂರ್ಯ ಹಾಗೂ ಚಂದ್ರರನ್ನು ನಿಯಂತ್ರಿಸುತ್ತಾನೆ. ಪ್ರತಿಯೊಂದೂ ಸಹ ಒಂದು ನಿಶ್ಚಿತ ಅವಧಿಯವರೆಗೆ ಸಂಚರಿಸುತ್ತಿರುತ್ತವೆ. ತಿಳಿಯಿರಿ! ಅವನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
خَلَقَكُمْ مِّنْ نَّفْسٍ وَّاحِدَةٍ ثُمَّ جَعَلَ مِنْهَا زَوْجَهَا وَاَنْزَلَ لَكُمْ مِّنَ الْاَنْعَامِ ثَمٰنِیَةَ اَزْوَاجٍ ؕ— یَخْلُقُكُمْ فِیْ بُطُوْنِ اُمَّهٰتِكُمْ خَلْقًا مِّنْ بَعْدِ خَلْقٍ فِیْ ظُلُمٰتٍ ثَلٰثٍ ؕ— ذٰلِكُمُ اللّٰهُ رَبُّكُمْ لَهُ الْمُلْكُ ؕ— لَاۤ اِلٰهَ اِلَّا هُوَ ۚ— فَاَنّٰی تُصْرَفُوْنَ ۟
ಅವನು ನಿಮ್ಮೆಲ್ಲರನ್ನು ಒಂದೇ ಜೀವದಿಂದ ಸೃಷ್ಟಿಸಿರುವನು. ತರುವಾಯ ಅದರಿಂದ ಅದರ ಜೋಡಿಯನ್ನು ಉಂಟು ಮಾಡಿದನು ಹಾಗೂ ನಿಮಗಾಗಿ ಜಾನುವಾರುಗಳಿಂದ ಎಂಟು ವರ್ಗ ಗಂಡು ಹೆಣ್ಣುಗಳನ್ನು ಇಳಿಸಿರುವನು. ಅವನು ನಿಮ್ಮನ್ನು ನಿಮ್ಮ ತಾಯಂದಿರ ಹೊಟ್ಟೆಗಳಲ್ಲಿ ಒಂದು ಸೃಷ್ಟಿ ಹಂತದ ಬಳಿಕ ಮತ್ತೊಂದು ಸೃಷ್ಟಿ ಹಂತವನ್ನಾಗಿ ಮೂರು ಅಂಧಕಾರಗಳಲ್ಲಿ ಸೃಷ್ಟಿಸುವನು. ಅವನೇ ನಿಮ್ಮ ಪ್ರಭುವು ಅಲ್ಲಾಹನಾಗಿದ್ದಾನೆ. ಅಧಿಪತ್ಯವು ಅವನದೇ ಆಗಿರುವುದು. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಹಾಗಿದ್ದೂ ನೀವೆತ್ತ ಅಲೆದಾಡುತ್ತಿರುವಿರಿ?
ಅರಬ್ಬಿ ವ್ಯಾಖ್ಯಾನಗಳು:
اِنْ تَكْفُرُوْا فَاِنَّ اللّٰهَ غَنِیٌّ عَنْكُمْ ۫— وَلَا یَرْضٰی لِعِبَادِهِ الْكُفْرَ ۚ— وَاِنْ تَشْكُرُوْا یَرْضَهُ لَكُمْ ؕ— وَلَا تَزِرُ وَازِرَةٌ وِّزْرَ اُخْرٰی ؕ— ثُمَّ اِلٰی رَبِّكُمْ مَّرْجِعُكُمْ فَیُنَبِّئُكُمْ بِمَا كُنْتُمْ تَعْمَلُوْنَ ؕ— اِنَّهٗ عَلِیْمٌۢ بِذَاتِ الصُّدُوْرِ ۟
ನೀವು ಕೃತಘ್ನತೆ ತೋರುವುದಾದರೆ ಅಲ್ಲಾಹನು ನಿಮ್ಮಿಂದ ನಿರಪೇಕ್ಷನಾಗಿದ್ದಾನೆ ಹಾಗೂ ಅವನು ತನ್ನ ದಾಸರ ಪಾಲಿಗೆ ಕೃತಘ್ನತೆಯನ್ನು ಮೆಚ್ಚುವುದಿಲ್ಲ ಮತ್ತು ನೀವು ಕೃತಜ್ಞತೆ ತೋರುವುದಾದರೆ ಅದನ್ನು ಅವನು ನಿಮ್ಮ ಪಾಲಿಗೆ ಮೆಚ್ಚುತ್ತಾನೆ ಮತ್ತು ಪಾಪ ಭಾರ ಹೊರುವವನು ಮತ್ತೊಬ್ಬನ ಭಾರವನ್ನು ಹೊರಲಾರನು. ತರುವಾಯ ನಿಮ್ಮೆಲ್ಲರ ಮರಳುವಿಕೆಯು ನಿಮ್ಮ ಪ್ರಭುವಿನೆಡೆಗೇ ಆಗಿದೆ. ನೀವು ಮಾಡುತ್ತಿದ್ದಿದ್ದನ್ನು ಅವನು ನಿಮಗೆ ತಿಳಿಸಿಕೊಡುವನು. ಖಂಡಿತವಾಗಿಯು ಅವನು ಮನಸ್ಸಿನಲ್ಲಿರುವ ಸಂಗತಿಗಳನ್ನು ಚೆನ್ನಾಗಿಬಲ್ಲನು.
ಅರಬ್ಬಿ ವ್ಯಾಖ್ಯಾನಗಳು:
وَاِذَا مَسَّ الْاِنْسَانَ ضُرٌّ دَعَا رَبَّهٗ مُنِیْبًا اِلَیْهِ ثُمَّ اِذَا خَوَّلَهٗ نِعْمَةً مِّنْهُ نَسِیَ مَا كَانَ یَدْعُوْۤا اِلَیْهِ مِنْ قَبْلُ وَجَعَلَ لِلّٰهِ اَنْدَادًا لِّیُضِلَّ عَنْ سَبِیْلِهٖ ؕ— قُلْ تَمَتَّعْ بِكُفْرِكَ قَلِیْلًا ۖۗ— اِنَّكَ مِنْ اَصْحٰبِ النَّارِ ۟
ಮನುಷ್ಯನಿಗೆ ಯಾವುದಾದರೂ ವಿಪತ್ತು ಬಾಧಿಸಿದಾಗ ಅವನು ತನ್ನ ಪ್ರಭುವಿನೆಡೆಗೆ ಮರಳಿ ವಿನಮ್ರತೆಯಿಂದ ಅವನನ್ನು ಕರೆದುಬೇಡುತ್ತಾನೆ. ತರುವಾಯ ಅಲ್ಲಾಹನು ತನ್ನ ವತಿಯಿಂದ ಯಾವುದಾದರೂ ಅನುಗ್ರಹವನ್ನು ಅವನಿಗೆ ದಯಪಾಲಿಸಿದರೆ. ಅವನು ಇದಕ್ಕೆ ಮೊದಲು ತಾನು ಅವನೆಡೆಗೆ ಮೊರೆಯಿಟ್ಟಿರುವುದನ್ನು (ಸಂಪೂರ್ಣವಾಗಿ) ಮರೆತು ಬಿಡುತ್ತಾನೆ ಮತ್ತು ಇತರರನ್ನು ಅವನ ಮಾರ್ಗದಿಂದ ಭ್ರಷ್ಟಗೊಳಿಸಲು ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸುತ್ತಾನೆ. ಓ ಪೈಗಂಬರರೇ, ಹೇಳಿರಿ ಈ ಸತ್ಯನಿಷೇಧದ ಲಾಭವನ್ನು ಅಲ್ಪ ಕಾಲ ಭೋಗಿಸು. ಖಂಡಿತವಾಗಿಯು ನೀನು ನರಕವಾಸಿಗಳಲ್ಲಿ ಸೇರಲಿರುವೆ.
ಅರಬ್ಬಿ ವ್ಯಾಖ್ಯಾನಗಳು:
اَمَّنْ هُوَ قَانِتٌ اٰنَآءَ الَّیْلِ سَاجِدًا وَّقَآىِٕمًا یَّحْذَرُ الْاٰخِرَةَ وَیَرْجُوْا رَحْمَةَ رَبِّهٖ ؕ— قُلْ هَلْ یَسْتَوِی الَّذِیْنَ یَعْلَمُوْنَ وَالَّذِیْنَ لَا یَعْلَمُوْنَ ؕ— اِنَّمَا یَتَذَكَّرُ اُولُوا الْاَلْبَابِ ۟۠
ಪರಲೋಕವನ್ನು ಭಯಪಟ್ಟು, ತನ್ನ ಪ್ರಭುವಿನ ಕಾರುಣ್ಯವನ್ನು ಆಶಿಸಿ ರಾತ್ರಿ ಆಯಾಮಗಳಲ್ಲಿ ಸಾಷ್ಟಾಂಗವೆರಗುತ್ತಾ ಮತ್ತÄ ನಿಂತುಕೊAಡು ತನ್ನ ಪ್ರಭುವನ್ನು ಆರಾಧಿಸುವವನು ಇದಕ್ಕೆ ವ್ಯತಿರಿಕ್ತವಾಗಿರುವವನಿಗೆ ಸಮಾನನೇ? ಹೇಳಿರಿ: ಜ್ಞಾನವುಳ್ಳವರೂ, ಅಜ್ಞಾನಿಗಳೂ ಸರಿಸಮಾನರಾಗುವರೇ? ನಿಜವಾಗಿಯು ಬುದ್ಧಿಜೀವಿಗಳು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
قُلْ یٰعِبَادِ الَّذِیْنَ اٰمَنُوا اتَّقُوْا رَبَّكُمْ ؕ— لِلَّذِیْنَ اَحْسَنُوْا فِیْ هٰذِهِ الدُّنْیَا حَسَنَةٌ ؕ— وَاَرْضُ اللّٰهِ وَاسِعَةٌ ؕ— اِنَّمَا یُوَفَّی الصّٰبِرُوْنَ اَجْرَهُمْ بِغَیْرِ حِسَابٍ ۟
ಹೇಳಿರಿ: ಓ ನನ್ನ ಸತ್ಯವಿಶ್ವಾಸಿ ದಾಸರೇ, ನೀವು ನಿಮ್ಮ ಪ್ರಭುವನ್ನು ಭಯಪಡುತ್ತಿರಿ. ಇಹಲೋಕದಲ್ಲಿ ಒಳಿತನ್ನು ಮಾಡುವವರಿಗೇ ಸತ್ಫಲವಿರುವುದು ಮತ್ತು ಅಲ್ಲಾಹನ ಭೂಮಿಯು ವಿಶಾಲವಾಗಿರುವುದು. ಖಂಡಿತವಾಗಿಯು ಸಹನಶೀಲರಿಗೆ ಅವರ ಪ್ರತಿಫಲವನ್ನು ಲೆಕ್ಕಾತೀತವಾಗಿ ನೀಡಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
قُلْ اِنِّیْۤ اُمِرْتُ اَنْ اَعْبُدَ اللّٰهَ مُخْلِصًا لَّهُ الدِّیْنَ ۟ۙ
ಹೇಳಿರಿ: ಏಕನಿಷ್ಠನಾಗಿ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಅವನನ್ನು ಆರಾಧಿಸಬೇಕೆಂದು ನನಗೆ ಆದೇಶ ನೀಡಲಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
وَاُمِرْتُ لِاَنْ اَكُوْنَ اَوَّلَ الْمُسْلِمِیْنَ ۟
ಮತ್ತು ಎಲ್ಲರಿಗಿಂತ ಮೊದಲು ವಿಧೇಯನಾಗಿರಬೇಕೆಂದು ನನಗೆ ಆದೇಶ ನೀಡಲಾಗಿರುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
قُلْ اِنِّیْۤ اَخَافُ اِنْ عَصَیْتُ رَبِّیْ عَذَابَ یَوْمٍ عَظِیْمٍ ۟
ಹೇಳಿರಿ: ನಾನು ನನ್ನ ಪ್ರಭುವಿನ ಆಜ್ಞಾಲ್ಲೋಂಘನೆ ಮಾಡುವುದಾದರೆ ಖಂಡಿತವಾಗಿಯು ಮಹಾದಿನದ ಯಾತನೆಯಿಂದ ಭಯಪಡುತ್ತೇನೆ.
ಅರಬ್ಬಿ ವ್ಯಾಖ್ಯಾನಗಳು:
قُلِ اللّٰهَ اَعْبُدُ مُخْلِصًا لَّهٗ دِیْنِیْ ۟ۙۚ
ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ.
ಅರಬ್ಬಿ ವ್ಯಾಖ್ಯಾನಗಳು:
فَاعْبُدُوْا مَا شِئْتُمْ مِّنْ دُوْنِهٖ ؕ— قُلْ اِنَّ الْخٰسِرِیْنَ الَّذِیْنَ خَسِرُوْۤا اَنْفُسَهُمْ وَاَهْلِیْهِمْ یَوْمَ الْقِیٰمَةِ ؕ— اَلَا ذٰلِكَ هُوَ الْخُسْرَانُ الْمُبِیْنُ ۟
ನೀವು ಅವನ ಹೊರತು ನೀವಿಚ್ಛಿಸಿದವರನ್ನು ಆರಾಧಿಸುತ್ತಿರಿ, ಹೇಳಿರಿ: ಪುನರುತ್ಥಾನದÀ ದಿನ ತಮ್ಮನ್ನು ತಮ್ಮ ಕುಟುಂಬದವರನ್ನು ನಷ್ಟಕ್ಕೀಡು ಮಾಡಿದವರೇ ನಿಜವಾಗಿಯು ನಷ್ಟ ಹೊಂದಿದವರಾಗಿರುತ್ತಾರೆ. ನೆನಪಿರಲಿ: ಇದೇ ಸುಸ್ಪಷ್ಟವಾದ ನಷ್ಟವಾಗಿರುವುದು.
ಅರಬ್ಬಿ ವ್ಯಾಖ್ಯಾನಗಳು:
لَهُمْ مِّنْ فَوْقِهِمْ ظُلَلٌ مِّنَ النَّارِ وَمِنْ تَحْتِهِمْ ظُلَلٌ ؕ— ذٰلِكَ یُخَوِّفُ اللّٰهُ بِهٖ عِبَادَهٗ ؕ— یٰعِبَادِ فَاتَّقُوْنِ ۟
ಅವರಿಗೆ ಅವರ ಮೇಲ್ಭಾಗದಿಂದಲೂ, ಅವರ ಕೆಳಭಾಗದಿಂದಲೂ ಅಗ್ನಿಯ ಆಚ್ಛಾದನೆಯಿರುವುದು. ಅಲ್ಲಾಹನು ತನ್ನ ದಾಸರನ್ನು ಭಯಪಡಿಸುತ್ತಿರುವುದು (ಶಿಕ್ಷೆಯು) ಇದೇ ಆಗಿದೆ. ಆದುದರಿಂದ ಓ ನನ್ನ ದಾಸರೇ, ನನ್ನನ್ನೇ ಭಯಪಡುತ್ತಿರಿ.
ಅರಬ್ಬಿ ವ್ಯಾಖ್ಯಾನಗಳು:
وَالَّذِیْنَ اجْتَنَبُوا الطَّاغُوْتَ اَنْ یَّعْبُدُوْهَا وَاَنَابُوْۤا اِلَی اللّٰهِ لَهُمُ الْبُشْرٰی ۚ— فَبَشِّرْ عِبَادِ ۟ۙ
ಮತ್ತು ಮಿಥ್ಯಾರಾಧ್ಯರನ್ನು ತೊರೆದು ಅಲ್ಲಾಹನೆಡೆಗೆ ಮರಳುವವರಿಗೆ ಸುವಾರ್ತೆ ಇದೆ. ಆದುದರಿಂದ ನನ್ನ ದಾಸರಿಗೆ ಸುವಾರ್ತೆಯನ್ನು ನೀಡಿರಿ.
ಅರಬ್ಬಿ ವ್ಯಾಖ್ಯಾನಗಳು:
الَّذِیْنَ یَسْتَمِعُوْنَ الْقَوْلَ فَیَتَّبِعُوْنَ اَحْسَنَهٗ ؕ— اُولٰٓىِٕكَ الَّذِیْنَ هَدٰىهُمُ اللّٰهُ وَاُولٰٓىِٕكَ هُمْ اُولُوا الْاَلْبَابِ ۟
ಇವರು ಕುರ್‌ಆನನ್ನು ಗಮನವಿಟ್ಟು ಆಲಿಸುತ್ತಾರೆ. ತರುವಾಯ ಅದರಿಂದ ಅತ್ಯುತ್ತಮವಾಗಿರುವುದನ್ನು ಅನುಸರಿಸುತ್ತಾರೆ. ಇವರೇ ಅಲ್ಲಾಹನಕಡೆಯಿಂದ ಸನ್ಮಾರ್ಗ ಪಡೆದವರಾಗಿರುತ್ತಾರೆ ಮತ್ತು ಇವರೇ ಬುದ್ಧಿವಂತರಾಗಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
اَفَمَنْ حَقَّ عَلَیْهِ كَلِمَةُ الْعَذَابِ ؕ— اَفَاَنْتَ تُنْقِذُ مَنْ فِی النَّارِ ۟ۚ
ಇನ್ನು ಯಾರ ಮೇಲೆ ಯಾತನೆಯ ವಚನವು ಸಾಬೀತಾಗಿದೆಯೋ ಏನು ನರಕಾಗ್ನಿಯಲ್ಲಿರುವವನನ್ನು ನೀವು ವಿಮೋಚಿಸಬಲ್ಲಿರಾ?
ಅರಬ್ಬಿ ವ್ಯಾಖ್ಯಾನಗಳು:
لٰكِنِ الَّذِیْنَ اتَّقَوْا رَبَّهُمْ لَهُمْ غُرَفٌ مِّنْ فَوْقِهَا غُرَفٌ مَّبْنِیَّةٌ ۙ— تَجْرِیْ مِنْ تَحْتِهَا الْاَنْهٰرُ ؕ۬— وَعْدَ اللّٰهِ ؕ— لَا یُخْلِفُ اللّٰهُ الْمِیْعَادَ ۟
ಆದರೆ ತಮ್ಮ ಪ್ರಭುವನ್ನು ಭಯಪಡುವವರಿಗೆ ಅಂತಸ್ತಿನ ಮೇಲೆ ಅಂತಸ್ತಿನ ಉನ್ನತ ಭವನಗಳಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಇದು ಅಲ್ಲಾಹನ ವಾಗ್ದಾನ ಮತ್ತು ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَلَمْ تَرَ اَنَّ اللّٰهَ اَنْزَلَ مِنَ السَّمَآءِ مَآءً فَسَلَكَهٗ یَنَابِیْعَ فِی الْاَرْضِ ثُمَّ یُخْرِجُ بِهٖ زَرْعًا مُّخْتَلِفًا اَلْوَانُهٗ ثُمَّ یَهِیْجُ فَتَرٰىهُ مُصْفَرًّا ثُمَّ یَجْعَلُهٗ حُطَامًا ؕ— اِنَّ فِیْ ذٰلِكَ لَذِكْرٰی لِاُولِی الْاَلْبَابِ ۟۠
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿದ್ದನ್ನು ನೀವು ನೋಡುವುದಿಲ್ಲವೇ? ಮತ್ತು ಅದನ್ನು ಭೂಮಿಯ ಚಿಲುಮೆಗಳಿಗೆ ತಲುಪಿಸುತ್ತಾನೆ. ತರುವಾಯ ಅದರ ಮೂಲಕ ವಿಭಿನ್ನ ಬಣ್ಣಗಳ ಕೃಷಿಗಳನ್ನು ಹೊರತರುತ್ತಾನೆ. ಅನಂತರ ಅವು ಒಣಗಿ ಹಳದಿ ಬಣ್ಣಕÉ್ಕತಿರುಗಿರುವುದಾಗಿ ನೀವು ಕಾಣುವಿರಿ. ಆ ಬಳಿಕ ಅವನು ಅವುಗಳನ್ನು ಹೊಟ್ಟಾಗಿ ಮಾಡಿಬಿಡುವನು. ಇದರಲ್ಲಿ ಬುದ್ಧಿವಂತರಿಗೆ ಅನೇಕ ಉದ್ಭೋಧೆಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
اَفَمَنْ شَرَحَ اللّٰهُ صَدْرَهٗ لِلْاِسْلَامِ فَهُوَ عَلٰی نُوْرٍ مِّنْ رَّبِّهٖ ؕ— فَوَیْلٌ لِّلْقٰسِیَةِ قُلُوْبُهُمْ مِّنْ ذِكْرِ اللّٰهِ ؕ— اُولٰٓىِٕكَ فِیْ ضَلٰلٍ مُّبِیْنٍ ۟
ಇನ್ನು ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗೆಂದು ತೆÉರೆದಿರುವನೋ ಅವನು ತನ್ನ ಪ್ರಭುವಿನ ವತಿಯಿಂದ ಒಂದು ಪ್ರಕಾಶದಲ್ಲಿರುವನು ಮತ್ತÄ ಯಾರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಕಠಿಣವಾಗಿವೆಯೋ ಅಂತಹವರಿಗೆ ವಿನಾಶವಿದೆ. ಇವರೇ ಸುಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
اَللّٰهُ نَزَّلَ اَحْسَنَ الْحَدِیْثِ كِتٰبًا مُّتَشَابِهًا مَّثَانِیَ تَقْشَعِرُّ مِنْهُ جُلُوْدُ الَّذِیْنَ یَخْشَوْنَ رَبَّهُمْ ۚ— ثُمَّ تَلِیْنُ جُلُوْدُهُمْ وَقُلُوْبُهُمْ اِلٰی ذِكْرِ اللّٰهِ ؕ— ذٰلِكَ هُدَی اللّٰهِ یَهْدِیْ بِهٖ مَنْ یَّشَآءُ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟
ಅಲ್ಲಾಹನು ಅತ್ಯುತ್ತಮ ವಚನವನ್ನು ಅವತೀರ್ಣಗೊಳಿಸಿದ್ದಾನೆ. ಅದು ಪರಸ್ಪರ ಸಾದೃಶ್ಯವಿರುವಂತಹ ಮತ್ತು ಪುನರಾವರ್ತಿಸಿ ಓದಲಾಗುವಂತಹ ಗ್ರಂಥವಾಗಿದೆ. ಅದರಿಂದಾಗಿ ತಮ್ಮ ಪ್ರಭುವನ್ನು ಭಯಪಟ್ಟುಕೊಳ್ಳುವವರ ರೋಮಗಳು ಸಟೆದು ನಿಲ್ಲುವುವು. ಕೊನೆಗೆ ಅವರ ಚರ್ಮಗಳು ಹಾಗೂ ಹೃದಯಗಳು ಅಲ್ಲಾಹನ ಸ್ಮರಣೆಯೆಡೆಗೆ ಮೃದುವಾಗಿ ಬಿಡುವುವು. ಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅದರ ಮೂಲಕ ಅವನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ ಮತ್ತು ಅಲ್ಲಾಹನು ಮಾರ್ಗಭ್ರಷ್ಟಗೊಳಿಸಿದವನಿಗೆ ಮಾರ್ಗದರ್ಶಕನಾರೂ ಇರಲಾರನು.
ಅರಬ್ಬಿ ವ್ಯಾಖ್ಯಾನಗಳು:
اَفَمَنْ یَّتَّقِیْ بِوَجْهِهٖ سُوْٓءَ الْعَذَابِ یَوْمَ الْقِیٰمَةِ ؕ— وَقِیْلَ لِلظّٰلِمِیْنَ ذُوْقُوْا مَا كُنْتُمْ تَكْسِبُوْنَ ۟
ಪುನರುತ್ಧಾನದ ದಿನ ತನ್ನ ಮುಖವನ್ನು ನಿಕೃಷ್ಟ ಯಾತನೆಗೆ ಒಡ್ಡುವವನು (ಸ್ವರ್ಗವಾಸಿಗಳಿಗೆ ಸಮವಾಗುವನೇ) ನೀವು ನಿಮ್ಮ ಸಂಪಾದನೆಯ (ವಿಪತ್ತ)ನ್ನು ಸವಿಯಿರಿ ಎಂದು ಅಕ್ರಮಿಗಳೊಡನೆ ಹೇಳಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
كَذَّبَ الَّذِیْنَ مِنْ قَبْلِهِمْ فَاَتٰىهُمُ الْعَذَابُ مِنْ حَیْثُ لَا یَشْعُرُوْنَ ۟
ಇವರಿಗಿಂತ ಮುಂಚಿನವರು ಸಹ ಸುಳ್ಳಾಗಿಸಿದ್ದಾರೆ. ಅನಂತರ ಅವರು ಊಹಿಸದಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದೆರಗಿತು.
ಅರಬ್ಬಿ ವ್ಯಾಖ್ಯಾನಗಳು:
فَاَذَاقَهُمُ اللّٰهُ الْخِزْیَ فِی الْحَیٰوةِ الدُّنْیَا ۚ— وَلَعَذَابُ الْاٰخِرَةِ اَكْبَرُ ۘ— لَوْ كَانُوْا یَعْلَمُوْنَ ۟
ತರುವಾಯ ಅಲ್ಲಾಹನು ಅವರಿಗೆ ಇಹಲೋಕದಲ್ಲೇ ಅಪಮಾನದ ರುಚಿಯನ್ನು ಸವಿಸಿದನು ಮತ್ತು ಪರಲೋಕದ ಯಾತನೆಯು ಇದಕ್ಕಿಂತಲೂ ಹೆಚ್ಚು ಘೋರವಾದುದಾಗಿದೆ ಅವರು ಅರಿತುಕೊಳ್ಳುತ್ತಿದ್ದರೆ!
ಅರಬ್ಬಿ ವ್ಯಾಖ್ಯಾನಗಳು:
وَلَقَدْ ضَرَبْنَا لِلنَّاسِ فِیْ هٰذَا الْقُرْاٰنِ مِنْ كُلِّ مَثَلٍ لَّعَلَّهُمْ یَتَذَكَّرُوْنَ ۟ۚ
ಖಂಡಿತವಾಗಿಯು ಜನರಿಗೆ ಮನದಟ್ಟಾಗಲೆಂದು ನಾವು ಈ ಖುರ್‌ಆನಿನಲ್ಲಿ ಸರ್ವ ವಿಧದ ಉಪಮೆಗಳನ್ನು ವಿವರಿಸಿರುತ್ತೇವೆ.
ಅರಬ್ಬಿ ವ್ಯಾಖ್ಯಾನಗಳು:
قُرْاٰنًا عَرَبِیًّا غَیْرَ ذِیْ عِوَجٍ لَّعَلَّهُمْ یَتَّقُوْنَ ۟
ಕುರ್‌ಆನ್ ಇರುವುದು ಅರಬೀ ಭಾಷೆಯಲ್ಲಿ: ಅದರಲ್ಲಿ ಯಾವುದೇ ವಕ್ರತೆಯಿಲ್ಲ. ಬಹುಶಃ ಅವರು ಭಯಭಕ್ತಿ ಹೊಂದ ಬಹುದು.
ಅರಬ್ಬಿ ವ್ಯಾಖ್ಯಾನಗಳು:
ضَرَبَ اللّٰهُ مَثَلًا رَّجُلًا فِیْهِ شُرَكَآءُ مُتَشٰكِسُوْنَ وَرَجُلًا سَلَمًا لِّرَجُلٍ ؕ— هَلْ یَسْتَوِیٰنِ مَثَلًا ؕ— اَلْحَمْدُ لِلّٰهِ ۚ— بَلْ اَكْثَرُهُمْ لَا یَعْلَمُوْنَ ۟
ಅಲ್ಲಾಹನು ಒಂದು ಉಪಮೆಯನ್ನು ನೀಡುತ್ತಾನೆ. ಒಬ್ಬವ್ಯಕ್ತಿ : ಪರಸ್ಪರ ಕಚ್ಚಾಡುವ ಅನೇಕ ಪಾಲುದಾರರ ಗುಲಾಮನಾಗಿದ್ದಾನೆ. ಮತ್ತೊಬ್ಬ ವ್ಯಕ್ತಿಯು ಕೇವಲ ಒಬ್ಬ ವ್ಯಕ್ತಿಯ ಗುಲಾಮನಾಗಿದ್ದಾನೆ. ಇಬರಿಬ್ಬರ ಸ್ಥಿತಿ ಸಮಾನವಾಗಿದೆಯೇ ? ಸರ್ವಸ್ತುತಿಗಳು ಅಲ್ಲಾಹನಿಗೇ ಮೀಸಲು. ವಾಸ್ತವದಲ್ಲಿ ಅವರಲ್ಲಿನ ಹೆಚ್ಚಿನವರು ಅರಿಯುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اِنَّكَ مَیِّتٌ وَّاِنَّهُمْ مَّیِّتُوْنَ ۟ؗ
ಖಂಡಿತವಾಗಿಯೂ ನಿಮಗೂ ಮರಣ ಬರಲಿದೆ. ನಿಶ್ಚಯವಾಗಿಯು ಅವರಿಗೂ ಮರಣ ಬರಲಿದೆ.
ಅರಬ್ಬಿ ವ್ಯಾಖ್ಯಾನಗಳು:
ثُمَّ اِنَّكُمْ یَوْمَ الْقِیٰمَةِ عِنْدَ رَبِّكُمْ تَخْتَصِمُوْنَ ۟۠
ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.
ಅರಬ್ಬಿ ವ್ಯಾಖ್ಯಾನಗಳು:
فَمَنْ اَظْلَمُ مِمَّنْ كَذَبَ عَلَی اللّٰهِ وَكَذَّبَ بِالصِّدْقِ اِذْ جَآءَهٗ ؕ— اَلَیْسَ فِیْ جَهَنَّمَ مَثْوًی لِّلْكٰفِرِیْنَ ۟
ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡುವ ಮತ್ತು ತನ್ನ ಬಳಿ ಸತ್ಯವು ಬಂದಾಗ ಅದನ್ನು ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ ? ಇಂತಹ ಸತ್ಯನಿಷೇಧಿಗಳ ನೆಲೆ ನರಕದಲ್ಲೇ ಅಲ್ಲವೇ?
ಅರಬ್ಬಿ ವ್ಯಾಖ್ಯಾನಗಳು:
وَالَّذِیْ جَآءَ بِالصِّدْقِ وَصَدَّقَ بِهٖۤ اُولٰٓىِٕكَ هُمُ الْمُتَّقُوْنَ ۟
ಮತ್ತು ಪ್ರವಾದಿಯು ಸತ್ಯವನ್ನು ತಂದಿದ್ದು ಯಾರು ಅದನ್ನು ಸತ್ಯವೆಂದು ಒಪ್ಪಿಕೊಂಡರೋ ಅಂತಹವರೇ ಭಯಭಕ್ತಿಯುಳ್ಳವರು.
ಅರಬ್ಬಿ ವ್ಯಾಖ್ಯಾನಗಳು:
لَهُمْ مَّا یَشَآءُوْنَ عِنْدَ رَبِّهِمْ ؕ— ذٰلِكَ جَزٰٓؤُا الْمُحْسِنِیْنَ ۟ۚۖ
ಅವರಿಗೆ ತಮ್ಮ ಪ್ರಭುವಿನ ಬಳಿ ಅವರು ಬಯಸಿದ್ದೆಲ್ಲವೂ ಇರುವುದು. ಇದುವೇ ಸಜ್ಜನರ ಪ್ರತಿಫಲವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
لِیُكَفِّرَ اللّٰهُ عَنْهُمْ اَسْوَاَ الَّذِیْ عَمِلُوْا وَیَجْزِیَهُمْ اَجْرَهُمْ بِاَحْسَنِ الَّذِیْ كَانُوْا یَعْمَلُوْنَ ۟
ಇದೇಕೆಂದರೆ ಅವರು ಮಾಡಿದ ಕೆಡುಕುಗಳನ್ನು ಅಲ್ಲಾಹನು ಅವರಿಂದ ಅಳಿಸಲೆಂದೂ, ಮತ್ತು ಅವರು ಮಾಡಿರುವಂತಹ ಅತ್ಯುತ್ತಮ ಕರ್ಮಗಳಿಗೆ ಪ್ರತಿಫಲ ನೀಡಲೆಂದು ಆಗಿರುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
اَلَیْسَ اللّٰهُ بِكَافٍ عَبْدَهٗ ؕ— وَیُخَوِّفُوْنَكَ بِالَّذِیْنَ مِنْ دُوْنِهٖ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟ۚ
ಅಲ್ಲಾಹನು ತನ್ನ ದಾಸರಿಗೆ (ಮುಹಮ್ಮದ್) ಸಾಕಾಗಲಾರನೇ ಮತ್ತು ಇವರು (ಬಹುದೇವರಾಧಕರು) ಅಲ್ಲಾಹನ ಹೊರತು ಇತರ ಮಿಥ್ಯಾ ಆರಾಧ್ಯಾರಿಂದ ನಿಮ್ಮನ್ನು ಹೆದರಿಸುತ್ತಾರೆ ಮತ್ತು ಅಲ್ಲಾಹನು ದಾರಿತಪ್ಪಿಸಿದವನಿಗೆ ಯಾರು ಮಾರ್ಗದರ್ಶಕ ಇರಲಾರನು.
ಅರಬ್ಬಿ ವ್ಯಾಖ್ಯಾನಗಳು:
وَمَنْ یَّهْدِ اللّٰهُ فَمَا لَهٗ مِنْ مُّضِلٍّ ؕ— اَلَیْسَ اللّٰهُ بِعَزِیْزٍ ذِی انْتِقَامٍ ۟
ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ?
ಅರಬ್ಬಿ ವ್ಯಾಖ್ಯಾನಗಳು:
وَلَىِٕنْ سَاَلْتَهُمْ مَّنْ خَلَقَ السَّمٰوٰتِ وَالْاَرْضَ لَیَقُوْلُنَّ اللّٰهُ ؕ— قُلْ اَفَرَءَیْتُمْ مَّا تَدْعُوْنَ مِنْ دُوْنِ اللّٰهِ اِنْ اَرَادَنِیَ اللّٰهُ بِضُرٍّ هَلْ هُنَّ كٰشِفٰتُ ضُرِّهٖۤ اَوْ اَرَادَنِیْ بِرَحْمَةٍ هَلْ هُنَّ مُمْسِكٰتُ رَحْمَتِهٖ ؕ— قُلْ حَسْبِیَ اللّٰهُ ؕ— عَلَیْهِ یَتَوَكَّلُ الْمُتَوَكِّلُوْنَ ۟
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು. ಅವರೊಂದಿಗೆ ಕೇಳಿರಿ: ಅಲ್ಲಾಹನೇನಾದರೂ ನನಗೆ ಹಾನಿಯುನ್ನುಂಟು ಮಾಡಲು ಇಚ್ಚಿಸಿದರೆ ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರು ಅವನ ಹಾನಿಯಿಂದ ತಡೆಯಬಲ್ಲರೇ? ಅಥವಾ ಅಲ್ಲಾಹನು ನನ್ನ ಮೇಲೆ ಕರುಣೆ ತೋರಲು ಬಯಸಿದರೆ ಇವರು ಅವನ ಕರುಣೆಯನ್ನು ತಡೆಯಬಲ್ಲರೇ ಹೇಳಿರಿ: ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆ ಭರವಸೆಯನ್ನಿಡಲಿ.
ಅರಬ್ಬಿ ವ್ಯಾಖ್ಯಾನಗಳು:
قُلْ یٰقَوْمِ اعْمَلُوْا عَلٰی مَكَانَتِكُمْ اِنِّیْ عَامِلٌ ۚ— فَسَوْفَ تَعْلَمُوْنَ ۟ۙ
ಹೇಳಿರಿ: ಓ ನನ್ನ ಜನಾಂಗದವರೇ, ನೀವು ನಿಮ್ಮ ನಿಲುವಿನ ಪ್ರಕಾರ ಕಾರ್ಯವೆಸಗಿರಿ. ನಾನೂ ಸಹ ಕಾರ್ಯವೆಸಗುತ್ತಿದ್ದೇನೆ. ಸದ್ಯದಲ್ಲೇ ನೀವು ಅರಿತುಕೊಳ್ಳುವಿರಿ.
ಅರಬ್ಬಿ ವ್ಯಾಖ್ಯಾನಗಳು:
مَنْ یَّاْتِیْهِ عَذَابٌ یُّخْزِیْهِ وَیَحِلُّ عَلَیْهِ عَذَابٌ مُّقِیْمٌ ۟
ಯಾರ ಮೇಲೆ ಅಪಮಾನಕರ ಯಾತನೆಯು ಬರಲಿದೆಯೆಂದು ಮತ್ತು ಯಾರ ಮೇಲೆ ಶಾಶ್ವತ ಯಾತನೆಯು ಎರಗಲಿದೆಯೆಂದು. (ನೀವು ಅರಿತುಕೊಳ್ಳುವಿರಿ)
ಅರಬ್ಬಿ ವ್ಯಾಖ್ಯಾನಗಳು:
اِنَّاۤ اَنْزَلْنَا عَلَیْكَ الْكِتٰبَ لِلنَّاسِ بِالْحَقِّ ۚ— فَمَنِ اهْتَدٰی فَلِنَفْسِهٖ ۚ— وَمَنْ ضَلَّ فَاِنَّمَا یَضِلُّ عَلَیْهَا ۚ— وَمَاۤ اَنْتَ عَلَیْهِمْ بِوَكِیْلٍ ۟۠
ಸಂದೇಶವಾಹಕರೇ, ಖಂಡಿತವಾಗಿಯೂ ನಾವು ಸಕಲ ಮಾನವರಿಗಾಗಿ ಸತ್ಯಪೂರ್ಣಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ. ಯಾರು ಸನ್ಮಾರ್ಗ ಪಡೆಯುತ್ತಾನೋ ಅದು ಅವನ ಹಿತಕ್ಕಾಗಿಯೇ ಆಗಿದೆ. ಮತ್ತು ಯಾರು ಮಾರ್ಗಭ್ರಷ್ಟನಾಗುತ್ತಾನೋ ಅವನ ಮಾರ್ಗಭ್ರಷ್ಟತೆಯ ದೋಷವು ಅವನ ಮೇಲೆಯೇ ಇರುವುದು. ನೀವು ಅವರ ಮೇಲ್ವಿಚಾರಕರೇನು ಅಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَللّٰهُ یَتَوَفَّی الْاَنْفُسَ حِیْنَ مَوْتِهَا وَالَّتِیْ لَمْ تَمُتْ فِیْ مَنَامِهَا ۚ— فَیُمْسِكُ الَّتِیْ قَضٰی عَلَیْهَا الْمَوْتَ وَیُرْسِلُ الْاُخْرٰۤی اِلٰۤی اَجَلٍ مُّسَمًّی ؕ— اِنَّ فِیْ ذٰلِكَ لَاٰیٰتٍ لِّقَوْمٍ یَّتَفَكَّرُوْنَ ۟
ಅಲ್ಲಾಹನು ಆತ್ಮಗಳನ್ನು ಅವುಗಳ ಮರಣದ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಮತ್ತು ಮರಣ ಹೊಂದದ ಆತ್ಮವನ್ನು ಅದರ ನಿದ್ರೆಯ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಅನಂತರ ಯಾವುದರ ಮೇಲೆ ಮರಣದ ಆದೇಶವು ನಿಶ್ಚಿತವಾಗಿದೆಯೋ ಅವುಗಳನ್ನು ತಡೆದಿರಿಸಿಕೊಳ್ಳುತ್ತಾನೆ ಹಾಗೂ ಉಳಿದವುಗಳನ್ನು ಒಂದು ನಿರ್ಧಿಷ್ಟಾವಧಿಯವರೆಗೆ ಬಿಟ್ಟು ಬಿಡುತ್ತಾನೆ. ನಿಸ್ಸಂದೇಹವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ಹಲವಾರು ದೃಷ್ಠಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
اَمِ اتَّخَذُوْا مِنْ دُوْنِ اللّٰهِ شُفَعَآءَ ؕ— قُلْ اَوَلَوْ كَانُوْا لَا یَمْلِكُوْنَ شَیْـًٔا وَّلَا یَعْقِلُوْنَ ۟
ಅವರು ಅಲ್ಲಾಹನ ಹೊರತು ಇತರರನ್ನು ತಮ್ಮ ಶಿಫಾರಸ್ಸುದಾರರನ್ನಾಗಿ ಮಾಡಿಕೊಂಡಿದ್ದಾರೆಯೇ? ಹೇಳಿರಿ: ಅವರು ಯಾವ ಅಧಿಕಾರವನ್ನು ಹೊಂದಿಲ್ಲದಿದÀ್ದರೂ ಮತ್ತು ಅವಿವೇಕಿಗಳಾಗಿದ್ದರೂ ಸರಿಯೇ?
ಅರಬ್ಬಿ ವ್ಯಾಖ್ಯಾನಗಳು:
قُلْ لِّلّٰهِ الشَّفَاعَةُ جَمِیْعًا ؕ— لَهٗ مُلْكُ السَّمٰوٰتِ وَالْاَرْضِ ؕ— ثُمَّ اِلَیْهِ تُرْجَعُوْنَ ۟
ಹೇಳಿರಿ: ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಆಕಾಶಗಳ ಹಾಗೂ ಭೂಮಿಯ ಅಧಿಪತ್ಯವು ಅವನದ್ದಾಗಿರುವುದು. ನಂತರ ನೀವು ಅವನೆಡೆಗೆ ಮರಳಿಸಲಾಗುವಿರಿ.
ಅರಬ್ಬಿ ವ್ಯಾಖ್ಯಾನಗಳು:
وَاِذَا ذُكِرَ اللّٰهُ وَحْدَهُ اشْمَاَزَّتْ قُلُوْبُ الَّذِیْنَ لَا یُؤْمِنُوْنَ بِالْاٰخِرَةِ ۚ— وَاِذَا ذُكِرَ الَّذِیْنَ مِنْ دُوْنِهٖۤ اِذَا هُمْ یَسْتَبْشِرُوْنَ ۟
ಏಕÉÊಕ ಅಲ್ಲಾಹನ ಪ್ರಸ್ತಾಪನೆ ಮಾಡಲಾದಾಗ ಪರಲೋಕದಲ್ಲಿ ನಂಬಿಕೆಯಿಡದವರ ಹೃದಯಗಳು ಅಸಹ್ಯಪಡತೊಡಗುತ್ತವೆ. ಮತ್ತು ಅವನ ಹೊರತು ಇತರರನ್ನು ಪ್ರಸ್ತಾಪಿಸಲಾದರೆ ಅವರ ಹೃದಯಗಳು ಅರಳಿ ಹರುಷಭರಿತವಾಗುತ್ತವೆ.
ಅರಬ್ಬಿ ವ್ಯಾಖ್ಯಾನಗಳು:
قُلِ اللّٰهُمَّ فَاطِرَ السَّمٰوٰتِ وَالْاَرْضِ عٰلِمَ الْغَیْبِ وَالشَّهَادَةِ اَنْتَ تَحْكُمُ بَیْنَ عِبَادِكَ فِیْ مَا كَانُوْا فِیْهِ یَخْتَلِفُوْنَ ۟
ಹೇಳಿರಿ: ಓ ಅಲ್ಲಾಹ್, ಆಕಾಶಗಳ ಮತ್ತು ಭೂಮಿಯ ಸೃಷ್ಠಿಕರ್ತನೇ, ರಹಸ್ಯ-ಬಹಿರಂಗಗಳ ಜ್ಞಾನಿಯೇ, ನೀನೇ ನಿನ್ನದಾಸರ ನಡುವೆ ಅವರು ಭಿನ್ನತೆ ತೋರುತ್ತಿದ್ದಂತಹ ವಿಷಯಗಳ ತೀರ್ಮಾನ ಮಾಡಲಿರುವೆ.
ಅರಬ್ಬಿ ವ್ಯಾಖ್ಯಾನಗಳು:
وَلَوْ اَنَّ لِلَّذِیْنَ ظَلَمُوْا مَا فِی الْاَرْضِ جَمِیْعًا وَّمِثْلَهٗ مَعَهٗ لَافْتَدَوْا بِهٖ مِنْ سُوْٓءِ الْعَذَابِ یَوْمَ الْقِیٰمَةِ ؕ— وَبَدَا لَهُمْ مِّنَ اللّٰهِ مَا لَمْ یَكُوْنُوْا یَحْتَسِبُوْنَ ۟
ಅಕ್ರಮಿಗಳ ಬಳಿ ಭೂಮಿಯ ಸಕಲ ಸಂಪತ್ತೂ ಮಾತ್ರವಲ್ಲ ಅಷ್ಟೇ ಬೇರೆ ಇರುತ್ತಿದ್ದರೂ ಪುನರುತ್ಥಾನ ದಿನದ ಉಗ್ರಯಾತನೆಯಿಂದ ಪಾರಾಗಲಿಕ್ಕೆ ಪರಿಹಾರವಾಗಿ ಅವೆಲ್ಲವನ್ನೂ ನೀಡುತ್ತಿದ್ದರು ಮತ್ತು ಅಲ್ಲಾಹನ ಕಡೆಯಿಂದ ಅವರು ಊಹಿಸಿಯೂ ಇಲ್ಲದಿರುವಂತಹದ್ದು ಅವರ ಮುಂದೆ ಪ್ರಕಟವಾಗುವುದು.
ಅರಬ್ಬಿ ವ್ಯಾಖ್ಯಾನಗಳು:
وَبَدَا لَهُمْ سَیِّاٰتُ مَا كَسَبُوْا وَحَاقَ بِهِمْ مَّا كَانُوْا بِهٖ یَسْتَهْزِءُوْنَ ۟
ಅವರ ಕೃತ್ಯಗಳ ದುಷ್ಟರಿಣಾಮಗಳು ಅವರಿಗೆ ಪ್ರಕಟವಾಗಲಿದೆ ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದುದೇ ಅವರನ್ನು ಸುತ್ತುವರಿದು ಬಿಡುವುದು.
ಅರಬ್ಬಿ ವ್ಯಾಖ್ಯಾನಗಳು:
فَاِذَا مَسَّ الْاِنْسَانَ ضُرٌّ دَعَانَا ؗ— ثُمَّ اِذَا خَوَّلْنٰهُ نِعْمَةً مِّنَّا ۙ— قَالَ اِنَّمَاۤ اُوْتِیْتُهٗ عَلٰی عِلْمٍ ؕ— بَلْ هِیَ فِتْنَةٌ وَّلٰكِنَّ اَكْثَرَهُمْ لَا یَعْلَمُوْنَ ۟
ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ ನಮ್ಮ ಕಡೆಯಿಂದ ಯಾವುದಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಇದನ್ನು ನನಗೆ ನನ್ನಜ್ಞಾನದ ಆಧಾರದಲ್ಲಿ ಕೊಡಲಾಗಿದೆ ಎನ್ನುತ್ತಾನೆ ಅಲ್ಲ !ಇದು ಒಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
قَدْ قَالَهَا الَّذِیْنَ مِنْ قَبْلِهِمْ فَمَاۤ اَغْنٰی عَنْهُمْ مَّا كَانُوْا یَكْسِبُوْنَ ۟
ಇವರಿಗಿಂತ ಮುಂಚಿನವರೂ ಹೀಗೆ ಹೇಳಿದ್ದರು. ಆದರೆ ಅವರು ಗಳಿಸಿದ್ದು ಅವರ ಯಾವ ಪ್ರಯೋಜನಕ್ಕೂ ಬರಲಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
فَاَصَابَهُمْ سَیِّاٰتُ مَا كَسَبُوْا ؕ— وَالَّذِیْنَ ظَلَمُوْا مِنْ هٰۤؤُلَآءِ سَیُصِیْبُهُمْ سَیِّاٰتُ مَا كَسَبُوْا ۙ— وَمَا هُمْ بِمُعْجِزِیْنَ ۟
ಆದುದರಿಂದ ಅವರ ಕೃತ್ಯಗಳ ದುಷ್ಟರಿಣಾಮಗಳು ಅವರ ಮೇಲೆ ಎರಗಿದವು ಮತ್ತು ಅವರ ಪÉÊಕಿ ಅಪರಾಧಿಗಳಾಗಿರುವವರು ಶೀಘ್ರವೇ ಅವರ ಗಳಿಕೆಯ ದುಷ್ಪಲಕ್ಕೆ ಗುರಿಯಾಗಲಿರುವರು. ಮತ್ತು ಅವರು ನಮ್ಮನ್ನು (ಅಲ್ಲಾಹನನ್ನು) ಸೋಲಿಸುವವರಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَوَلَمْ یَعْلَمُوْۤا اَنَّ اللّٰهَ یَبْسُطُ الرِّزْقَ لِمَنْ یَّشَآءُ وَیَقْدِرُ ؕ— اِنَّ فِیْ ذٰلِكَ لَاٰیٰتٍ لِّقَوْمٍ یُّؤْمِنُوْنَ ۟۠
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಪರಿಮಿತಗೊಳಿಸುತ್ತಾನೆ ಎಂಬುದು ಇವರಿಗೆ ಗೊತ್ತಿಲ್ಲವೇ? ಖಂಡಿತವಾಗಿಯು ಇದರಲ್ಲಿ ವಿಶ್ವಾಸಿ ಜನರಿಗೆ ನಿದರ್ಶನಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
قُلْ یٰعِبَادِیَ الَّذِیْنَ اَسْرَفُوْا عَلٰۤی اَنْفُسِهِمْ لَا تَقْنَطُوْا مِنْ رَّحْمَةِ اللّٰهِ ؕ— اِنَّ اللّٰهَ یَغْفِرُ الذُّنُوْبَ جَمِیْعًا ؕ— اِنَّهٗ هُوَ الْغَفُوْرُ الرَّحِیْمُ ۟
ಹೇಳಿರಿ: ಸ್ವತಃ ತಮ್ಮ ಮೇಲೆಯೇ ಅನ್ಯಾಯ ಮಾಡಿದಂತ ಓ ನನ್ನದಾಸರೇ, ನೀವು ಅಲ್ಲಾಹನ ಕರುಣೆಯಿಂದ ನಿರಾಶರಾಗಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಸಕಲ ಪಾಪಗಳನ್ನು ಕ್ಷಮಿಸುತ್ತಾನೆ. ಖಂಡಿತವಾಗಿಯು ಅವನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
وَاَنِیْبُوْۤا اِلٰی رَبِّكُمْ وَاَسْلِمُوْا لَهٗ مِنْ قَبْلِ اَنْ یَّاْتِیَكُمُ الْعَذَابُ ثُمَّ لَا تُنْصَرُوْنَ ۟
ನಿಮ್ಮ ಮೇಲೆ ಯಾತನೆಯು ಬಂದೆರಗಿದ ಬಳಿಕ ನಿಮಗೆ ಸಹಾಯ ನೀಡಲಾಗದ ಸ್ಥಿತಿ ಬರುವುದಕ್ಕೂ ಮುನ್ನ ನೀವು ನಿಮ್ಮ ಪ್ರಭುವಿನೆಡೆಗೆ ಮರಳಿರಿ ಹಾಗೂ ಅವನ ಆಜ್ಞಾನುಸರಣೆ ಮಾಡಿರಿ.
ಅರಬ್ಬಿ ವ್ಯಾಖ್ಯಾನಗಳು:
وَاتَّبِعُوْۤا اَحْسَنَ مَاۤ اُنْزِلَ اِلَیْكُمْ مِّنْ رَّبِّكُمْ مِّنْ قَبْلِ اَنْ یَّاْتِیَكُمُ الْعَذَابُ بَغْتَةً وَّاَنْتُمْ لَا تَشْعُرُوْنَ ۟ۙ
ಮತ್ತÄ ನೀವು ಊಹಿಸಿರದಂತಹ ಸ್ಥಿತಿಯಲ್ಲಿ ಹಠಾತ್ತಾನೆ ಯಾತನೆಯು ಬಂದೆರಗುವ ಮುನ್ನ ನೀವು ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮಡೆಗೆ ಅವತೀರ್ಣಗೊಂಡ ಗ್ರಂಥದಿAದ ಅತ್ಯುತ್ತಮವಾದುದನ್ನು ಅನುಸರಿಸಿರಿ.
ಅರಬ್ಬಿ ವ್ಯಾಖ್ಯಾನಗಳು:
اَنْ تَقُوْلَ نَفْسٌ یّٰحَسْرَتٰی عَلٰی مَا فَرَّطْتُ فِیْ جَنْۢبِ اللّٰهِ وَاِنْ كُنْتُ لَمِنَ السّٰخِرِیْنَ ۟ۙ
ಅಯ್ಯೋ! ಅಲ್ಲಾಹನ ಅನುಸರಣೆಯಲ್ಲಿ ಪ್ರಮಾದವೆಸಗಿ ನಾನು ಗೇಲಿ ಮಾಡುವವರ ಸಾಲಿಗೆ ಸೇರಿದ್ದೇನಲ್ಲ ಎಂದು ಯಾವೊಬ್ಬ ವ್ಯಕ್ತಿಗೂ ಹೇಳುವಂತಾಗಬಾರದು.
ಅರಬ್ಬಿ ವ್ಯಾಖ್ಯಾನಗಳು:
اَوْ تَقُوْلَ لَوْ اَنَّ اللّٰهَ هَدٰىنِیْ لَكُنْتُ مِنَ الْمُتَّقِیْنَ ۟ۙ
ಅಥವಾ ಅಲ್ಲಾಹನೇನಾದರೂ ನನ್ನನ್ನು ಸನ್ಮಾರ್ಗದಲ್ಲಿ ಮುನ್ನಡೆಸಿರುತ್ತಿದ್ದರೆ ನಾನೂ ಸಹ ಭಯಭಕ್ತಿ ಹೊಂದುವವರಲ್ಲಿ ಸೇರಿರುತ್ತಿದ್ದೆ ಎಂದು ಹೇಳುವಂತಾಗ ಬಾರದು.
ಅರಬ್ಬಿ ವ್ಯಾಖ್ಯಾನಗಳು:
اَوْ تَقُوْلَ حِیْنَ تَرَی الْعَذَابَ لَوْ اَنَّ لِیْ كَرَّةً فَاَكُوْنَ مِنَ الْمُحْسِنِیْنَ ۟
ಅಥವಾ ಶಿಕ್ಷೆಯನ್ನು ಕಂಡು ನನಗೆ ಮತ್ತೊಮ್ಮೆ ಮರಳಿಸಲಾಗುತ್ತಿದÀ್ದರೆ ನಾನು ಸಹ ಸಜ್ಜನರಲ್ಲಿ ಸೇರಿಬಿಡುತ್ತಿದ್ದೆ ಎಂದು ಹೇಳುವಂತಾಗದಿರಲಿ.
ಅರಬ್ಬಿ ವ್ಯಾಖ್ಯಾನಗಳು:
بَلٰی قَدْ جَآءَتْكَ اٰیٰتِیْ فَكَذَّبْتَ بِهَا وَاسْتَكْبَرْتَ وَكُنْتَ مِنَ الْكٰفِرِیْنَ ۟
ಹೌದು! ನಿಸ್ಸಂಶಯವಾಗಿಯು ನನ್ನ ದೃಷ್ಟಾಂತಗಳು ನಿನ್ನ ಬಳಿಗೆ ಬಂದಿದ್ದವು. ಅವುಗಳನ್ನು ನೀನು ಸುಳ್ಳಾಗಿಸಿಬಿಟ್ಟೆ ಹಾಗೂ ಅಹಂಭಾವತೋರಿದೆ ಮತ್ತು ನೀನು ಸತ್ಯಷೇಧಿಗಳಲ್ಲಿ ಸೇರಿದ್ದೆ.
ಅರಬ್ಬಿ ವ್ಯಾಖ್ಯಾನಗಳು:
وَیَوْمَ الْقِیٰمَةِ تَرَی الَّذِیْنَ كَذَبُوْا عَلَی اللّٰهِ وُجُوْهُهُمْ مُّسْوَدَّةٌ ؕ— اَلَیْسَ فِیْ جَهَنَّمَ مَثْوًی لِّلْمُتَكَبِّرِیْنَ ۟
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದವರ ಮುಖಗಳು ಪುನರುತ್ಥಾನದ ದಿನ ಕಪ್ಪಾಗಿರುವುದನ್ನು ನೀವು ಕಾಣುವಿರಿ. ಅಹಂಕಾರಿಗಳ ವಾಸಸ್ಥಾನವು ನರಕದಲ್ಲೇ ಅಲ್ಲವೇ?
ಅರಬ್ಬಿ ವ್ಯಾಖ್ಯಾನಗಳು:
وَیُنَجِّی اللّٰهُ الَّذِیْنَ اتَّقَوْا بِمَفَازَتِهِمْ ؗ— لَا یَمَسُّهُمُ السُّوْٓءُ وَلَا هُمْ یَحْزَنُوْنَ ۟
ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ ಯಾವುದೇ ವಿಪತ್ತು ಬಾಧಿಸದು ಮತ್ತು ಅವರು ದುಃಖಿತರಾಗಲಾರರು.
ಅರಬ್ಬಿ ವ್ಯಾಖ್ಯಾನಗಳು:
اَللّٰهُ خَالِقُ كُلِّ شَیْءٍ ؗ— وَّهُوَ عَلٰی كُلِّ شَیْءٍ وَّكِیْلٌ ۟
ಅಲ್ಲಾಹನು ಸರ್ವ ವಸ್ತುಗಳ ಸೃಷ್ಟಿಕರ್ತನಾಗಿರುವನು ಮತ್ತು ಅವನು ಸಕಲ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
لَهٗ مَقَالِیْدُ السَّمٰوٰتِ وَالْاَرْضِ ؕ— وَالَّذِیْنَ كَفَرُوْا بِاٰیٰتِ اللّٰهِ اُولٰٓىِٕكَ هُمُ الْخٰسِرُوْنَ ۟۠
ಆಕಾಶಗಳ ಮತ್ತು ಭೂಮಿಯ ಕೀಲಿ ಕÉÊಗಳು ಅವನ ಬಳಿಯಿವೆ. ಮತ್ತು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರೇ ನಷ್ಟ ಹೊಂದಿದವರಾಗಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
قُلْ اَفَغَیْرَ اللّٰهِ تَاْمُرُوْٓنِّیْۤ اَعْبُدُ اَیُّهَا الْجٰهِلُوْنَ ۟
ಹೇಳಿರಿ: ಓ ಅಜ್ಞಾನಿಗಳೇ, ಅಲ್ಲಾಹನ ಹೊರತು ಇತರರನ್ನು ಆರಾಧಿಸಲು ನೀವು ನನಗೆ ಆದೇಶಿಸುತ್ತಿದ್ದೀರಾ?
ಅರಬ್ಬಿ ವ್ಯಾಖ್ಯಾನಗಳು:
وَلَقَدْ اُوْحِیَ اِلَیْكَ وَاِلَی الَّذِیْنَ مِنْ قَبْلِكَ ۚ— لَىِٕنْ اَشْرَكْتَ لَیَحْبَطَنَّ عَمَلُكَ وَلَتَكُوْنَنَّ مِنَ الْخٰسِرِیْنَ ۟
ನೀವೇನಾದರೂ ದೇವ ಸಹಭಾಗಿತ್ವವನ್ನು ನಿಶ್ಚಯಿಸಿದರೆ, ಖಂಡಿತವಾಗಿಯು ನಿಮ್ಮ ಕರ್ಮವು ನಿಷ್ಟಲಗೊಳ್ಳುವುದು ಹಾಗೂ ನಿಶ್ಚಯವಾಗಿಯು ನೀವು ನಷ್ಟಹೊಂದಿದವರಲ್ಲಿ ಆಗುವಿರಿ ಎಂದು ನಿಮ್ಮಡೆಗೂ, ನಿಮ್ಮ ಮುಂಚಿನ ಪ್ರವಾದಿಗಳೆಡೆಗೂ ದಿವ್ಯವಾಣಿ ಮಾಡಲಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
بَلِ اللّٰهَ فَاعْبُدْ وَكُنْ مِّنَ الشّٰكِرِیْنَ ۟
ಆದುದರಿಂದ ನೀವು ಅಲ್ಲಾಹನನ್ನು ಆರಾಧಿಸಿರಿ. ಹಾಗೂ ಕೃತಜ್ಞರಲ್ಲಿ ಸೇರಿರಿ.
ಅರಬ್ಬಿ ವ್ಯಾಖ್ಯಾನಗಳು:
وَمَا قَدَرُوا اللّٰهَ حَقَّ قَدْرِهٖ ۖۗ— وَالْاَرْضُ جَمِیْعًا قَبْضَتُهٗ یَوْمَ الْقِیٰمَةِ وَالسَّمٰوٰتُ مَطْوِیّٰتٌ بِیَمِیْنِهٖ ؕ— سُبْحٰنَهٗ وَتَعٰلٰی عَمَّا یُشْرِكُوْنَ ۟
ಮತ್ತು ಅವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು ಅವನ ಮುಷ್ಠಿಯಲ್ಲಿರುವುದು ಮತ್ತು ಸಕಲ ಆಕಾಶಗಳು ಅವನ ಬಲಗೈಯಲ್ಲಿ ಸುತ್ತಿಕೊಂಡಿರುವುವು. ಅವನು ಪರಮ ಪಾವನನು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
ಅರಬ್ಬಿ ವ್ಯಾಖ್ಯಾನಗಳು:
وَنُفِخَ فِی الصُّوْرِ فَصَعِقَ مَنْ فِی السَّمٰوٰتِ وَمَنْ فِی الْاَرْضِ اِلَّا مَنْ شَآءَ اللّٰهُ ؕ— ثُمَّ نُفِخَ فِیْهِ اُخْرٰی فَاِذَا هُمْ قِیَامٌ یَّنْظُرُوْنَ ۟
ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು ಇಚ್ಛಿಸಿದವರ ಹೊರತು. ಅನಂತರ ಪುನಃ ಕಹಳೆಯನ್ನು ಊದಲಾದಾಗ ಒಮ್ಮೇಲೆ ಅವರು ಎದ್ದು ನಿಂತು ವೀಕ್ಷಿಸುವರು.
ಅರಬ್ಬಿ ವ್ಯಾಖ್ಯಾನಗಳು:
وَاَشْرَقَتِ الْاَرْضُ بِنُوْرِ رَبِّهَا وَوُضِعَ الْكِتٰبُ وَجِایْٓءَ بِالنَّبِیّٖنَ وَالشُّهَدَآءِ وَقُضِیَ بَیْنَهُمْ بِالْحَقِّ وَهُمْ لَا یُظْلَمُوْنَ ۟
ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು ಪ್ರವಾದಿಗಳನ್ನೂ, ಸಾಕ್ಷಿಗಳನ್ನೂ ತರಲಾಗುವುದು ಮತ್ತು ಜನರ ನಡುವೆ ಸತ್ಯದೊಂದಿಗೆ ತೀರ್ಪು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗ ಲಾರರು.
ಅರಬ್ಬಿ ವ್ಯಾಖ್ಯಾನಗಳು:
وَوُفِّیَتْ كُلُّ نَفْسٍ مَّا عَمِلَتْ وَهُوَ اَعْلَمُ بِمَا یَفْعَلُوْنَ ۟۠
ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು ಮತ್ತು ಅವರು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು
ಅರಬ್ಬಿ ವ್ಯಾಖ್ಯಾನಗಳು:
وَسِیْقَ الَّذِیْنَ كَفَرُوْۤا اِلٰی جَهَنَّمَ زُمَرًا ؕ— حَتّٰۤی اِذَا جَآءُوْهَا فُتِحَتْ اَبْوَابُهَا وَقَالَ لَهُمْ خَزَنَتُهَاۤ اَلَمْ یَاْتِكُمْ رُسُلٌ مِّنْكُمْ یَتْلُوْنَ عَلَیْكُمْ اٰیٰتِ رَبِّكُمْ وَیُنْذِرُوْنَكُمْ لِقَآءَ یَوْمِكُمْ هٰذَا ؕ— قَالُوْا بَلٰی وَلٰكِنْ حَقَّتْ كَلِمَةُ الْعَذَابِ عَلَی الْكٰفِرِیْنَ ۟
ಮತ್ತು ಸತ್ಯನಿಷೇಧಿಗಳನ್ನು ನರಕದೆಡೆಗೆ ತಂಡೋಪತAಡವಾಗಿ ಅಟ್ಟಲಾಗುವುದು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆರೆಯಲಾಗುವುವು ಮತ್ತು ಅವರೊಂದಿಗೆ ಅದರ ಕಾವಲುಗಾರರು ಕೇಳುವರು: ನಿಮ್ಮ ಮುಂದೆ ನಿಮ್ಮ ಪ್ರಭುವಿನ ಸೂಕ್ತಿಗಳನ್ನು ಓದುವ ಮತ್ತು ನಿಮ್ಮನ್ನು ಈ ದಿನದ ಭೇಟಿಯ ಬಗ್ಗೆ ಎಚ್ಚರಿಸುವ ಸಂದೇಶವಾಹಕರು ನಿಮ್ಮಿಂದಲೇ ನಿಮ್ಮ ಬಳಿ ಬಂದಿರಲಿಲ್ಲವೇ ? ಆಗ ಅವರು ಹೇಳುವರು: ಹೌದು ಬಂದಿದ್ದರು. ಆದರೆ ಸತ್ಯನಿಷೇಧಿಗಳ ಮೇಲೆ ಯಾತನೆಯ ವಚನವು ಸಾಬೀತುಗೊಂಡಿದೆ.
ಅರಬ್ಬಿ ವ್ಯಾಖ್ಯಾನಗಳು:
قِیْلَ ادْخُلُوْۤا اَبْوَابَ جَهَنَّمَ خٰلِدِیْنَ فِیْهَا ۚ— فَبِئْسَ مَثْوَی الْمُتَكَبِّرِیْنَ ۟
ಹೇಳಲಾಗುವುದು: ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ಅಲ್ಲಿ ನೀವು ಶಾಶ್ವತರಾಗಿರುವಿರಿ. ಹಾಗೆಯೇ ಅಹಂಕಾರಿಗಳ ವಾಸಸ್ಥಳವು ಅದೆಷ್ಟು ನಿಕೃಷ್ಟವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
وَسِیْقَ الَّذِیْنَ اتَّقَوْا رَبَّهُمْ اِلَی الْجَنَّةِ زُمَرًا ؕ— حَتّٰۤی اِذَا جَآءُوْهَا وَفُتِحَتْ اَبْوَابُهَا وَقَالَ لَهُمْ خَزَنَتُهَا سَلٰمٌ عَلَیْكُمْ طِبْتُمْ فَادْخُلُوْهَا خٰلِدِیْنَ ۟
ಇನ್ನು ತಮ್ಮ ಪ್ರಭುವನ್ನು ಭಯಪಡುವವರು ಸ್ವರ್ಗದೆಡೆಗೆ ತಂಡೋಪ ತಂಡವಾಗಿ ಕರೆದೊಯ್ಯಲಾಗುವರು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆÉರೆಯಲಾಗುವುದು. ಅದರ ಕಾವಲುಗಾರರು ಅವರಿಗೆ ಹೇಳುವರು: ನಿಮ್ಮ ಮೇಲೆ ಶಾಂತಿ ಇರಲಿ. ನೀವು ಸಂತುಷ್ಟರಾಗಿರಿ. ಮತ್ತು ಇದರಲ್ಲಿ ಶಾಶ್ವತವಾಗಿ ಪ್ರವೇಶಿಸಿರಿ.
ಅರಬ್ಬಿ ವ್ಯಾಖ್ಯಾನಗಳು:
وَقَالُوا الْحَمْدُ لِلّٰهِ الَّذِیْ صَدَقَنَا وَعْدَهٗ وَاَوْرَثَنَا الْاَرْضَ نَتَبَوَّاُ مِنَ الْجَنَّةِ حَیْثُ نَشَآءُ ۚ— فَنِعْمَ اَجْرُ الْعٰمِلِیْنَ ۟
ಅವರು ಹೇಳುವರು: ನಮ್ಮೊಂದಿಗೆ ತನ್ನ ವಾಗ್ದಾನವನ್ನು ಸತ್ಯವನ್ನಾಗಿಸಿ ನಮ್ಮನ್ನು ಈ ನೆಲದ ವಾರೀಸುದಾರರನ್ನಾಗಿ ಮಾಡಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು. ಸ್ವರ್ಗದಲ್ಲಿ ನಾವು ಇಚ್ಛಿಸಿದ ಕಡೆ ನೆಲೆಸಬಹುದು. ಸತ್ಕರ್ಮಿಗಳ ಪ್ರತಿಫಲವು ಅದೆಷ್ಟು ಉತ್ತಮವಾದುದು!
ಅರಬ್ಬಿ ವ್ಯಾಖ್ಯಾನಗಳು:
وَتَرَی الْمَلٰٓىِٕكَةَ حَآفِّیْنَ مِنْ حَوْلِ الْعَرْشِ یُسَبِّحُوْنَ بِحَمْدِ رَبِّهِمْ ۚ— وَقُضِیَ بَیْنَهُمْ بِالْحَقِّ وَقِیْلَ الْحَمْدُ لِلّٰهِ رَبِّ الْعٰلَمِیْنَ ۟۠
ಮತ್ತು ದೇವಚರರು ಸಿಂಹಾಸನದ ಸುತ್ತ ತಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡುತ್ತಾ ವೃತ್ತಾಕಾರದಲ್ಲಿ ನೆರೆದಿರುವುದನ್ನು ನೀವು ಕಾಣುವಿರಿ. ಜನರ ನಡುವೆ ನ್ಯಾಯದೊಂದಿಗೆ ತೀರ್ಮಾನ ಮಾಡಲಾಗುವುದು ಮತ್ತು ಸರ್ವಸ್ತುತಿಗಳು ಸರ್ವಲೋಕಗಳ ಪ್ರಭುವಿಗೆ ಮೀಸಲು ಎಂದು ಹೇಳಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಸೂರಾ: ಅಝ್ಝುಮರ್
ಸೂರಗಳ (ಅಧ್ಯಾಯಗಳ) ಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ