Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߤߎ߯ߘߎ߫   ߟߝߊߙߌ ߘߏ߫:
یَقْدُمُ قَوْمَهٗ یَوْمَ الْقِیٰمَةِ فَاَوْرَدَهُمُ النَّارَ ؕ— وَبِئْسَ الْوِرْدُ الْمَوْرُوْدُ ۟
ಪುನರುತ್ಥಾನದ ದಿನದಂದು ಅವನು (ಫರೋಹ) ತನ್ನ ಜನರ ಮುಂಭಾಗದಲ್ಲಿ ನಿಂತು ಅವರನ್ನು ನರಕಕ್ಕೆ ಸಾಗಿಸುವನು. ಅವರನ್ನು ಸಾಗಿಸಲಾಗುವ ಆ ಸ್ಥಳವು ಬಹಳ ನಿಕೃಷ್ಟವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاُتْبِعُوْا فِیْ هٰذِهٖ لَعْنَةً وَّیَوْمَ الْقِیٰمَةِ ؕ— بِئْسَ الرِّفْدُ الْمَرْفُوْدُ ۟
ಈ ಲೋಕದಲ್ಲೂ ಪುನರುತ್ಥಾನ ದಿನದಲ್ಲೂ ಶಾಪವು ಅವರನ್ನು ಹಿಂಬಾಲಿಸುವುದು. ಅವರಿಗೆ ನೀಡಲಾಗುವ ಆ ಕೊಡುಗೆ ಬಹಳ ನಿಕೃಷ್ಟವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ذٰلِكَ مِنْ اَنْۢبَآءِ الْقُرٰی نَقُصُّهٗ عَلَیْكَ مِنْهَا قَآىِٕمٌ وَّحَصِیْدٌ ۟
(ಪ್ರವಾದಿಯವರೇ) ಇವೆಲ್ಲವೂ ಆ ಊರುಗಳ ಕೆಲವು ಸಮಾಚಾರಗಳಾಗಿವೆ. ನಾವು ಇದನ್ನು ನಿಮಗೆ ತಿಳಿಸಿಕೊಡುತ್ತಿದ್ದೇವೆ. ಆ ಊರುಗಳಲ್ಲಿ ಕೆಲವು ಅಸ್ತಿತ್ವದಲ್ಲಿವೆ ಮತ್ತು ಕೆಲವನ್ನು (ಬೇರು ಸಹಿತ) ಕೀಳಲಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا ظَلَمْنٰهُمْ وَلٰكِنْ ظَلَمُوْۤا اَنْفُسَهُمْ فَمَاۤ اَغْنَتْ عَنْهُمْ اٰلِهَتُهُمُ الَّتِیْ یَدْعُوْنَ مِنْ دُوْنِ اللّٰهِ مِنْ شَیْءٍ لَّمَّا جَآءَ اَمْرُ رَبِّكَ ؕ— وَمَا زَادُوْهُمْ غَیْرَ تَتْبِیْبٍ ۟
ನಾವು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಅವರಿಗೇ ಅನ್ಯಾಯ ಮಾಡಿದರು. ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯು ಬಂದಾಗ, ಅವರು ಅಲ್ಲಾಹನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದ ಅವರ ದೇವರುಗಳಲ್ಲಿ ಯಾರೂ ಕೂಡ ಅವರಿಗೆ ಸ್ವಲ್ಪವೂ ಪ್ರಯೋಜನಕ್ಕೆ ಬರಲಿಲ್ಲ. ಅವರು (ಆ ದೇವರುಗಳು) ಅವರಿಗೆ ನಷ್ಟವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸಿ ಕೊಡುತ್ತಿರಲಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَكَذٰلِكَ اَخْذُ رَبِّكَ اِذَاۤ اَخَذَ الْقُرٰی وَهِیَ ظَالِمَةٌ ؕ— اِنَّ اَخْذَهٗۤ اَلِیْمٌ شَدِیْدٌ ۟
ಅಕ್ರಮವೆಸಗಿದ ಊರುಗಳನ್ನು ಹಿಡಿಯುವಾಗ ನಿಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಇರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ಯಾತನೆಯಿಂದ ಕೂಡಿದ ಬಲಿಷ್ಠ ಹಿಡಿತವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنَّ فِیْ ذٰلِكَ لَاٰیَةً لِّمَنْ خَافَ عَذَابَ الْاٰخِرَةِ ؕ— ذٰلِكَ یَوْمٌ مَّجْمُوْعٌ ۙ— لَّهُ النَّاسُ وَذٰلِكَ یَوْمٌ مَّشْهُوْدٌ ۟
ಪರಲೋಕದ ಶಿಕ್ಷೆಯನ್ನು ಭಯಪಡುವವರಿಗೆ ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಅದು ಮನುಷ್ಯರೆಲ್ಲರನ್ನೂ ಒಟ್ಟುಗೂಡಿಸುವ ದಿನವಾಗಿದೆ. ಅದು ಎಲ್ಲರೂ ಉಪಸ್ಥಿತರಾಗಿರುವ ದಿನವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا نُؤَخِّرُهٗۤ اِلَّا لِاَجَلٍ مَّعْدُوْدٍ ۟ؕ
ಒಂದು ನಿಶ್ಚಿತ ಅವಧಿಯ ತನಕ (ಪುನರುತ್ಥಾನ ದಿನದ ತನಕ) ಮಾತ್ರ ನಾವು ಅದನ್ನು ಮುಂದೂಡುತ್ತೇವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یَوْمَ یَاْتِ لَا تَكَلَّمُ نَفْسٌ اِلَّا بِاِذْنِهٖ ۚ— فَمِنْهُمْ شَقِیٌّ وَّسَعِیْدٌ ۟
ಆ ಅವಧಿಯು ಬರುವ ದಿನ ಅಲ್ಲಾಹನ ಅಪ್ಪಣೆಯಿಲ್ಲದೆ ಯಾರೂ ಮಾತನಾಡುವುದಿಲ್ಲ. ಅವರಲ್ಲಿ ನತದೃಷ್ಟರು ಮತ್ತು ಅದೃಷ್ಟವಂತರು ಇರುತ್ತಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاَمَّا الَّذِیْنَ شَقُوْا فَفِی النَّارِ لَهُمْ فِیْهَا زَفِیْرٌ وَّشَهِیْقٌ ۟ۙ
ನತದೃಷ್ಟರು ಯಾರೋ—ಅವರು ನರಕದಲ್ಲಿರುತ್ತಾರೆ. ಅಲ್ಲಿ ಅವರು ಚೀತ್ಕರಿಸುತ್ತಲೂ ಕಿರಿಚಾಡುತ್ತಲೂ ಇರುತ್ತಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
خٰلِدِیْنَ فِیْهَا مَا دَامَتِ السَّمٰوٰتُ وَالْاَرْضُ اِلَّا مَا شَآءَ رَبُّكَ ؕ— اِنَّ رَبَّكَ فَعَّالٌ لِّمَا یُرِیْدُ ۟
ಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ[1] ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದವರ ಹೊರತು.[2] ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಬಯಸುವುದನ್ನು ಕಾರ್ಯರೂಪಕ್ಕೆ ತರುತ್ತಾನೆ.
[1] ಇದನ್ನು ಅಕ್ಷರಾರ್ಥದಲ್ಲಿ ಸ್ವೀಕರಿಸಿದ ಕೆಲವರು ಸತ್ಯನಿಷೇಧಿಗಳು ಶಾಶ್ವತವಾಗಿ ನರಕವಾಸಿಗಳಾಗುವುದಿಲ್ಲ ಎನ್ನುತ್ತಾರೆ. ಆದರೆ ಇದು ತಪ್ಪು. ಏಕೆಂದರೆ ಇಲ್ಲಿ ಇದನ್ನು ಆಲಂಕಾರಿಕ ರೂಪದಲ್ಲಿ ಹೇಳಲಾಗಿದೆ. ಅರಬ್ಬರು ತಮ್ಮ ಮಾತಿನಲ್ಲಿ “ಶಾಶ್ವತತೆ”ಯನ್ನು ಸೂಚಿಸಲು ಈ ಪ್ರಯೋಗವನ್ನು ಬಳಸುತ್ತಿದ್ದರು. ಅಂದರೆ ಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ ನಾನು ಹೀಗೆ ಮಾಡುವುದಿಲ್ಲ ಎನ್ನುತ್ತಿದ್ದರು. ಇದೇ ಪ್ರಯೋಗವನ್ನು ಇಲ್ಲಿ ಬಳಸಲಾಗಿದೆ. ಇದರ ಇನ್ನೊಂದು ಅರ್ಥವೇನೆಂದರೆ ಇಲ್ಲಿ ಉದ್ದೇಶಿಸಿರುವುದು ಈಗ ಅಸ್ತಿತ್ವದಲ್ಲಿರುವ ಭೂಮಿ ಮತ್ತು ಇದಕ್ಕೆ ಹೊಂದಿಕೊಂಡಿರುವ ಆಕಾಶಗಳಲ್ಲ. ಬದಲಿಗೆ, ಪರಲೋಕದ ಭೂಮಿ ಮತ್ತು ಆಕಾಶಗಳಾಗಿವೆ. ಪರಲೋಕದಲ್ಲಿ ಬೇರೆಯೇ ಭೂಮ್ಯಾಕಾಶಗಳಿವೆಯೆಂದು 14:48ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. [2] ಇಲ್ಲಿ ಉದ್ದೇಶಿಸಲಾಗಿರುವುದು ಪಾಪಗಳನ್ನು ಮಾಡಿದ ಸತ್ಯವಿಶ್ವಾಸಿಗಳನ್ನಾಗಿದೆ. ಇವರಿಗೆ ಇವರ ಪಾಪಗಳ ಶಿಕ್ಷೆಯಾದ ನಂತರ ಇವರು ಸ್ವರ್ಗವನ್ನು ಪ್ರವೇಶಿಸುವರು. ಇವರು ನರಕದಲ್ಲಿ ಶಾಶ್ವತವಾಗಿ ಉಳಿಯುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاَمَّا الَّذِیْنَ سُعِدُوْا فَفِی الْجَنَّةِ خٰلِدِیْنَ فِیْهَا مَا دَامَتِ السَّمٰوٰتُ وَالْاَرْضُ اِلَّا مَا شَآءَ رَبُّكَ ؕ— عَطَآءً غَیْرَ مَجْذُوْذٍ ۟
ಅದೃಷ್ಟವಂತರು ಯಾರೋ—ಅವರು ಸ್ವರ್ಗದಲ್ಲಿರುತ್ತಾರೆ. ಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದವರ ಹೊರತು.[1] ಇದು ಅಂತ್ಯವಿಲ್ಲದ ಕೊಡುಗೆಯಾಗಿದೆ.
[1] ಇದು ಕೂಡ ಪಾಪಗಳನ್ನು ಮಾಡಿದ ಸತ್ಯವಿಶ್ವಾಸಿಗಳ ಬಗ್ಗೆಯಾಗಿದೆ. ಇವರು ಇತರ ಸತ್ಯವಿಶ್ವಾಸಿಗಳಂತೆ ಆರಂಭದಲ್ಲಿ ಸ್ವರ್ಗ ಪ್ರವೇಶಿಸುವುದಿಲ್ಲ. ಬದಲಿಗೆ, ಇವರ ಶಿಕ್ಷೆ ಮುಗಿದ ನಂತರ ಇವರು ಸ್ವರ್ಗ ಪ್ರವೇಶ ಮಾಡುತ್ತಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߤߎ߯ߘߎ߫
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲