Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߦߛߎߝߎ߫   ߟߝߊߙߌ ߘߏ߫:

ಯೂಸುಫ್

الٓرٰ ۫— تِلْكَ اٰیٰتُ الْكِتٰبِ الْمُبِیْنِ ۟۫
ಅಲಿಫ್. ಲಾಮ್. ರಾ. ಇವು ಸ್ಪಷ್ಟ ಗ್ರಂಥದ ವಚನಗಳಾಗಿವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنَّاۤ اَنْزَلْنٰهُ قُرْءٰنًا عَرَبِیًّا لَّعَلَّكُمْ تَعْقِلُوْنَ ۟
ನಿಶ್ಚಯವಾಗಿಯೂ ನಾವು ಇದನ್ನು ಅರಬ್ಬಿ ಭಾಷೆಯಲ್ಲಿರುವ ಕುರ್‌ಆನ್ ಆಗಿ ಅವತೀರ್ಣಗೊಳಿಸಿದ್ದೇವೆ. ನೀವು ಅರ್ಥಮಾಡಿಕೊಳ್ಳುವುದಕ್ಕಾಗಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
نَحْنُ نَقُصُّ عَلَیْكَ اَحْسَنَ الْقَصَصِ بِمَاۤ اَوْحَیْنَاۤ اِلَیْكَ هٰذَا الْقُرْاٰنَ ۖۗ— وَاِنْ كُنْتَ مِنْ قَبْلِهٖ لَمِنَ الْغٰفِلِیْنَ ۟
ನಾವು ಈ ಕುರ್‌ಆನನ್ನು ದೇವವಾಣಿಯ ಮೂಲಕ ನಿಮಗೆ ಅವತೀರ್ಣಗೊಳಿಸಿರುವುದರಿಂದ, ನಿಮಗೆ ಇದರಲ್ಲಿ ಒಂದು ಅತ್ಯುತ್ತಮ ಕಥೆಯನ್ನು ನಿರೂಪಿಸುವೆವು. ಇದಕ್ಕೆ ಮೊದಲು ನಿಮಗೆ ಇದರ ಬಗ್ಗೆ ತಿಳಿದೇ ಇರಲಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِذْ قَالَ یُوْسُفُ لِاَبِیْهِ یٰۤاَبَتِ اِنِّیْ رَاَیْتُ اَحَدَ عَشَرَ كَوْكَبًا وَّالشَّمْسَ وَالْقَمَرَ رَاَیْتُهُمْ لِیْ سٰجِدِیْنَ ۟
ಯೂಸುಫ್ ತಮ್ಮ ತಂದೆಯೊಡನೆ ಹೇಳಿದ ಸಂದರ್ಭ: “ಅಪ್ಪಾ! ಖಂಡಿತವಾಗಿಯೂ ನಾನು (ಕನಸಿನಲ್ಲಿ) ಹನ್ನೊಂದು ನಕ್ಷತ್ರಗಳನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಕಂಡಿದ್ದೇನೆ. ಅವು ನನಗೆ ಸಾಷ್ಟಾಂಗ ಮಾಡುವುದನ್ನು ಕಂಡಿದ್ದೇನೆ.”[1]
[1] ಹನ್ನೊಂದು ನಕ್ಷತ್ರಗಳು ಎಂದರೆ ಯೂಸುಫರ (ಅವರ ಮೇಲೆ ಶಾಂತಿಯಿರಲಿ) ಹನ್ನೊಂದು ಸಹೋದರರು. ಸೂರ್ಯ ಎಂದರೆ ತಂದೆ (ಯಾಕೂಬ್) ಮತ್ತು ಚಂದ್ರ ಎಂದರೆ ತಾಯಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ یٰبُنَیَّ لَا تَقْصُصْ رُءْیَاكَ عَلٰۤی اِخْوَتِكَ فَیَكِیْدُوْا لَكَ كَیْدًا ؕ— اِنَّ الشَّیْطٰنَ لِلْاِنْسَانِ عَدُوٌّ مُّبِیْنٌ ۟
ತಂದೆ ಹೇಳಿದರು: “ಮಗೂ! ನಿನ್ನ ಕನಸನ್ನು ನಿನ್ನ ಸಹೋದರರಿಗೆ ತಿಳಿಸಬೇಡ. ಹಾಗೇನಾದರೂ ಆದರೆ ಅವರು ನಿನ್ನ ವಿರುದ್ಧ ಪಿತೂರಿ ಮಾಡುವರು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَكَذٰلِكَ یَجْتَبِیْكَ رَبُّكَ وَیُعَلِّمُكَ مِنْ تَاْوِیْلِ الْاَحَادِیْثِ وَیُتِمُّ نِعْمَتَهٗ عَلَیْكَ وَعَلٰۤی اٰلِ یَعْقُوْبَ كَمَاۤ اَتَمَّهَا عَلٰۤی اَبَوَیْكَ مِنْ قَبْلُ اِبْرٰهِیْمَ وَاِسْحٰقَ ؕ— اِنَّ رَبَّكَ عَلِیْمٌ حَكِیْمٌ ۟۠
ಈ ರೀತಿಯಲ್ಲಿ ನಿನ್ನ ಪರಿಪಾಲಕನು (ಅಲ್ಲಾಹು) ನಿನ್ನನ್ನು ಆರಿಸುವನು ಮತ್ತು ನಿನಗೆ ಕನಸುಗಳ ವ್ಯಾಖ್ಯಾನವನ್ನು ಕಲಿಸುವನು. ನಿನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್ ಮತ್ತು ಇಸ್‍ಹಾಕರ ಮೇಲೆ ಅವನು ತನ್ನ ಅನುಗ್ರಹವನ್ನು ಪೂರ್ಣಗೊಳಿಸಿದಂತೆ ನಿನ್ನ ಮೇಲೂ ಯಾಕೂಬರ ಕುಟುಂಬದ ಮೇಲೂ ಪೂರ್ಣಗೊಳಿಸುವನು. ನಿಶ್ಚಯವಾಗಿಯೂ ನಿನ್ನ ಪರಿಪಾಲಕನು (ಅಲ್ಲಾಹು) ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
لَقَدْ كَانَ فِیْ یُوْسُفَ وَاِخْوَتِهٖۤ اٰیٰتٌ لِّلسَّآىِٕلِیْنَ ۟
ನಿಶ್ಚಯವಾಗಿಯೂ ಯೂಸುಫ್ ಮತ್ತು ಅವರ ಸಹೋದರರಲ್ಲಿ ಕೇಳುಗರಿಗೆ (ದೊಡ್ಡ) ದೃಷ್ಟಾಂತಗಳಿವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِذْ قَالُوْا لَیُوْسُفُ وَاَخُوْهُ اَحَبُّ اِلٰۤی اَبِیْنَا مِنَّا وَنَحْنُ عُصْبَةٌ ؕ— اِنَّ اَبَانَا لَفِیْ ضَلٰلٍ مُّبِیْنِ ۟ۙۖ
ಅವರು (ಸಹೋದರರು) ಹೇಳಿದ ಸಂದರ್ಭ: “ನಮ್ಮ ತಂದೆಗೆ ನಮಗಿಂತಲೂ ಹೆಚ್ಚು ಯೂಸುಫ್ ಮತ್ತು ಅವನ ಸಹೋದರನ ಮೇಲೆ ಪ್ರೀತಿಯಿದೆ. ನಾವೊಂದು (ಬಲಿಷ್ಠ) ತಂಡವಾಗಿದ್ದೇವೆ. ನಿಶ್ಚಯವಾಗಿಯೂ ನಮ್ಮ ತಂದೆ ಸ್ಪಷ್ಟ ಪ್ರಮಾದದಲ್ಲಿದ್ದಾರೆ.[1]
[1] ಯೂಸುಫರ ಸಹೋದರ ಎಂದರೆ ಬಿನ್ಯಾಮೀನ್. ಇವರಿಬ್ಬರು ಒಂದು ತಾಯಿಯ ಮಕ್ಕಳು. ಉಳಿದ ಹತ್ತು ಮಂದಿ ಇನ್ನೊಬ್ಬ ತಾಯಿಯ ಮಕ್ಕಳು. ಯಾಕೂಬರಿಗೆ (ಅವರ ಮೇಲೆ ಶಾಂತಿಯಿರಲಿ) ಇವರಿಗಿಂತಲೂ ಹೆಚ್ಚು ಪ್ರೀತಿ ಯೂಸುಫ್ ಮತ್ತು ಬಿನ್ಯಾಮೀನರ ಮೇಲಿತ್ತು. ನಾವು ಹತ್ತು ಮಂದಿ ಸಹೋದರರು ಬಲಿಷ್ಠರು ಮತ್ತು ಬಹುಸಂಖ್ಯಾತರಾಗಿದ್ದೂ ಸಹ, ತಂದೆ ನಮಗಿಂತಲೂ ಹೆಚ್ಚು ಅವರಿಬ್ಬರನ್ನು ಪ್ರೀತಿಸುತ್ತಿರುವುದು ಅವರಿಗೆ ಸ್ಪಷ್ಟ ಪ್ರಮಾದವಾಗಿ ಕಾಣುತ್ತಿದೆ ಎಂದರ್ಥ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
١قْتُلُوْا یُوْسُفَ اَوِ اطْرَحُوْهُ اَرْضًا یَّخْلُ لَكُمْ وَجْهُ اَبِیْكُمْ وَتَكُوْنُوْا مِنْ بَعْدِهٖ قَوْمًا صٰلِحِیْنَ ۟
ಯೂಸುಫನನ್ನು ಕೊಲ್ಲಿರಿ ಅಥವಾ ಅವನನ್ನು ಯಾವುದಾದರೂ (ನಿರ್ಜನ) ಸ್ಥಳದಲ್ಲಿ ಎಸೆಯಿರಿ. ಆಗ ನಿಮ್ಮ ತಂದೆಯ ಮುಖಭಾವವು (ಪ್ರೀತಿ) ನಿಮಗೆ ಸೀಮಿತವಾಗುವುದು. ಅನಂತರ ನೀವು ನೀತಿವಂತ ಜನರಾಗಿ ಬಿಡಿ.”[1]
[1] ಅಂದರೆ ಯೂಸುಫರನ್ನು (ಅವರ ಮೇಲೆ ಶಾಂತಿಯಿರಲಿ) ಕೊಂದ ನಂತರ ಅಲ್ಲಾಹನಲ್ಲಿ ಪಶ್ಚಾತ್ತಾಪಪಟ್ಟು ಕ್ಷಮೆ ಕೇಳಿರಿ. ಆಗ ಅವನು ನಿಮ್ಮನ್ನು ಕ್ಷಮಿಸುತ್ತಾನೆ. ನಂತರ ನೀವು ಉತ್ತಮ ಜನರಾಗಿ ಬಿಡಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ قَآىِٕلٌ مِّنْهُمْ لَا تَقْتُلُوْا یُوْسُفَ وَاَلْقُوْهُ فِیْ غَیٰبَتِ الْجُبِّ یَلْتَقِطْهُ بَعْضُ السَّیَّارَةِ اِنْ كُنْتُمْ فٰعِلِیْنَ ۟
ಅವರಲ್ಲೊಬ್ಬನು ಹೇಳಿದನು: “ಯೂಸುಫನನ್ನು ಕೊಲ್ಲಬೇಡಿ. ಬದಲಿಗೆ, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯಿರಿ. (ಆ ದಾರಿಯಲ್ಲಿ ಸಾಗುವ) ಕೆಲವು ಪ್ರಯಾಣಿಕರು ಅವನನ್ನು ಎತ್ತಿಕೊಳ್ಳುವರು. ನೀವೇನಾದರೂ ಮಾಡುವುದಿದ್ದರೆ ಇದನ್ನೇ ಮಾಡಿರಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا یٰۤاَبَانَا مَا لَكَ لَا تَاْمَنَّا عَلٰی یُوْسُفَ وَاِنَّا لَهٗ لَنٰصِحُوْنَ ۟
ಅವರು ಹೇಳಿದರು: “ಅಪ್ಪಾ! ಯೂಸುಫನ ವಿಷಯದಲ್ಲಿ ನೀವೇಕೆ ನಮ್ಮನ್ನು ನಂಬುವುದಿಲ್ಲ? ನಿಶ್ಚಯವಾಗಿಯೂ ನಾವು ಅವನ ಹಿತಚಿಂತಕರಾಗಿದ್ದೇವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَرْسِلْهُ مَعَنَا غَدًا یَّرْتَعْ وَیَلْعَبْ وَاِنَّا لَهٗ لَحٰفِظُوْنَ ۟
ನಾಳೆ ಅವನನ್ನು ನಮ್ಮೊಡನೆ ಕಳುಹಿಸಿಕೊಡಿ. ಅವನು ಯಥೇಷ್ಟವಾಗಿ ಆನಂದಿಸುತ್ತಾ ಆಟವಾಡಲಿ. ನಿಶ್ಚಯವಾಗಿಯೂ ಅವನ ರಕ್ಷಣೆ ಮಾಡುವ ಹೊಣೆ ನಮ್ಮದು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ اِنِّیْ لَیَحْزُنُنِیْۤ اَنْ تَذْهَبُوْا بِهٖ وَاَخَافُ اَنْ یَّاْكُلَهُ الذِّئْبُ وَاَنْتُمْ عَنْهُ غٰفِلُوْنَ ۟
ತಂದೆ ಹೇಳಿದರು: “ನೀವು ಅವನನ್ನು ಕೊಂಡೊಯ್ಯುವುದನ್ನು ನೆನೆಯುವಾಗ ನನಗೆ ಬಹಳ ಸಂಕಟವಾಗುತ್ತದೆ. ಅದೂ ಅಲ್ಲದೆ, ನೀವು ಅವನನ್ನು ಗಮನಿಸದೆ ಇರುವಾಗ ತೋಳ ಅವನನ್ನು ತಿಂದುಬಿಡಬಹುದೋ ಎಂದು ನನಗೆ ಭಯವಾಗುತ್ತಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا لَىِٕنْ اَكَلَهُ الذِّئْبُ وَنَحْنُ عُصْبَةٌ اِنَّاۤ اِذًا لَّخٰسِرُوْنَ ۟
ಅವರು ಹೇಳಿದರು: “ನಾವು (ಬಲಿಷ್ಠ) ತಂಡವಾಗಿದ್ದೂ ಸಹ ತೋಳವು ಅವನನ್ನು ತಿಂದರೆ, ನಷ್ಟಹೊಂದುವವರು ನಾವೇ ಆಗಿದ್ದೇವೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا ذَهَبُوْا بِهٖ وَاَجْمَعُوْۤا اَنْ یَّجْعَلُوْهُ فِیْ غَیٰبَتِ الْجُبِّ ۚ— وَاَوْحَیْنَاۤ اِلَیْهِ لَتُنَبِّئَنَّهُمْ بِاَمْرِهِمْ هٰذَا وَهُمْ لَا یَشْعُرُوْنَ ۟
ನಂತರ ಅವರು ಯೂಸುಫರೊಂದಿಗೆ ಹೊರಟು, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯುವುದೆಂದು ಒಮ್ಮತದಿಂದ ನಿರ್ಧರಿಸಿದಾಗ, ನಾವು ಯೂಸುಫರಿಗೆ ಹೀಗೆ ದೇವವಾಣಿಯನ್ನು ನೀಡಿದೆವು: “ಅವರ ಈ ಕೃತ್ಯದ ಬಗ್ಗೆ ನೀವು ಖಂಡಿತ ಅವರಿಗೆ ತಿಳಿಸುವಿರಿ. ಆ ಸಂದರ್ಭದಲ್ಲಿ ಅವರಿಗೆ ಅದರ ನೆನಪೇ ಇರಲಾರದು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَجَآءُوْۤ اَبَاهُمْ عِشَآءً یَّبْكُوْنَ ۟ؕ
ರಾತ್ರಿಯಾಗುತ್ತಲೇ ಅವರು ಅಳುತ್ತಾ ತಮ್ಮ ತಂದೆಯ ಬಳಿಗೆ ಬಂದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا یٰۤاَبَانَاۤ اِنَّا ذَهَبْنَا نَسْتَبِقُ وَتَرَكْنَا یُوْسُفَ عِنْدَ مَتَاعِنَا فَاَكَلَهُ الذِّئْبُ ۚ— وَمَاۤ اَنْتَ بِمُؤْمِنٍ لَّنَا وَلَوْ كُنَّا صٰدِقِیْنَ ۟
ಅವರು ಹೇಳಿದರು: “ಅಪ್ಪಾ! ನಾವು ಓಟದ ಸ್ಪರ್ಧೆ ಮಾಡಿ ಓಡಿದೆವು. ಯೂಸುಫನನ್ನು ನಮ್ಮ ಸರಂಜಾಮುಗಳ ಬಳಿ ಬಿಟ್ಟಿದ್ದೆವು. ಆಗ ತೋಳ ಅವನನ್ನು ಕೊಂದು ತಿಂದಿತು. ನಾವು ಸತ್ಯ ಹೇಳುವವರಾಗಿದ್ದರೂ ಸಹ ನೀವು ನಮ್ಮನ್ನು ನಂಬಲಾರಿರಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَجَآءُوْ عَلٰی قَمِیْصِهٖ بِدَمٍ كَذِبٍ ؕ— قَالَ بَلْ سَوَّلَتْ لَكُمْ اَنْفُسُكُمْ اَمْرًا ؕ— فَصَبْرٌ جَمِیْلٌ ؕ— وَاللّٰهُ الْمُسْتَعَانُ عَلٰی مَا تَصِفُوْنَ ۟
ಅವರು ಯೂಸುಫರ ಅಂಗಿಗೆ ನಕಲಿ ರಕ್ತವನ್ನು ಹಚ್ಚಿ ತಂದರು.[1] ತಂದೆ ಹೇಳಿದರು: “ಅಲ್ಲ, ವಾಸ್ತವವಾಗಿ ನೀವು ನಿಮ್ಮ ಮನಸ್ಸಿನಲ್ಲಿಯೇ ಒಂದು ವಿಷಯವನ್ನು ಕಲ್ಪಿಸಿ ತಂದಿದ್ದೀರಿ. ಆದ್ದರಿಂದ ತಾಳ್ಮೆಯಿಂದಿರುವುದೇ ಉತ್ತಮ. ನೀವು ವರ್ಣಿಸಿ ಹೇಳುವ ಈ ವಿಷಯದಲ್ಲಿ ನಾನು ಅಲ್ಲಾಹನಲ್ಲಿ ಮಾತ್ರ ಸಹಾಯ ಬೇಡುತ್ತೇನೆ.”
[1] ಅವರೊಂದು ಕುರಿಯನ್ನು ಕೊಯ್ದು ಅದರ ರಕ್ತವನ್ನು ಯೂಸುಫರ ಬಟ್ಟೆಗೆ ಹಚ್ಚಿದರು. ಆದರೆ ಅಂಗಿಯನ್ನು ತೋಳ ತಿಂದ ರೀತಿಯಲ್ಲಿ ಹರಿಯಲು ಅವರು ಮರೆತು ಬಿಟ್ಟಿದ್ದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَجَآءَتْ سَیَّارَةٌ فَاَرْسَلُوْا وَارِدَهُمْ فَاَدْلٰی دَلْوَهٗ ؕ— قَالَ یٰبُشْرٰی هٰذَا غُلٰمٌ ؕ— وَاَسَرُّوْهُ بِضَاعَةً ؕ— وَاللّٰهُ عَلِیْمٌۢ بِمَا یَعْمَلُوْنَ ۟
ಪ್ರಯಾಣಿಕರ ಒಂದು ತಂಡ ಅಲ್ಲಿಗೆ ಬಂತು. ಅವರು ನೀರು ತರುವವನನ್ನು (ನೀರಿಗಾಗಿ) ಕಳುಹಿಸಿದರು. ಅವನು ತನ್ನ ಬಕೆಟ್ಟನ್ನು ಇಳಿಸಿದನು. ನಂತರ ಕೂಗಿ ಹೇಳಿದನು: “ವಾಹ್! ಶುಭ ಸುದ್ದಿ! ಇಲ್ಲೊಬ್ಬ ಹುಡುಗ ಇದ್ದಾನೆ!” ಅವರು ಯೂಸುಫರನ್ನು ಮಾರಾಟದ ಸರಕಾಗಿ ಮಾಡಿ ಬಚ್ಚಿಟ್ಟರು. ಅವರು ಮಾಡುತ್ತಿರುವ ಕೆಲಸಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَشَرَوْهُ بِثَمَنٍ بَخْسٍ دَرَاهِمَ مَعْدُوْدَةٍ ۚ— وَكَانُوْا فِیْهِ مِنَ الزَّاهِدِیْنَ ۟۠
ಅವರು ಯೂಸುಫರನ್ನು ಚಿಲ್ಲರೆ ಕಾಸಿಗೆ—ಬೆರಳೆಣಿಕೆಯ ಬೆಳ್ಳಿ ನಾಣ್ಯಗಳಿಗೆ—ಮಾರಾಟ ಮಾಡಿದರು. ಅವರಿಗೆ ಯೂಸುಫರ ಬಗ್ಗೆ ಯಾವುದೇ ಆಸಕ್ತಿಯಿರಲಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ الَّذِی اشْتَرٰىهُ مِنْ مِّصْرَ لِامْرَاَتِهٖۤ اَكْرِمِیْ مَثْوٰىهُ عَسٰۤی اَنْ یَّنْفَعَنَاۤ اَوْ نَتَّخِذَهٗ وَلَدًا ؕ— وَكَذٰلِكَ مَكَّنَّا لِیُوْسُفَ فِی الْاَرْضِ ؗ— وَلِنُعَلِّمَهٗ مِنْ تَاْوِیْلِ الْاَحَادِیْثِ ؕ— وَاللّٰهُ غَالِبٌ عَلٰۤی اَمْرِهٖ وَلٰكِنَّ اَكْثَرَ النَّاسِ لَا یَعْلَمُوْنَ ۟
ಈಜಿಪ್ಟಿನಲ್ಲಿ ಅವರನ್ನು ಖರೀದಿಸಿದ ವ್ಯಕ್ತಿ[1] ತನ್ನ ಪತ್ನಿಯೊಂದಿಗೆ ಹೇಳಿದನು: “ಇವನೊಡನೆ ಗೌರವದಿಂದ ವರ್ತಿಸು. ಇವನಿಂದ ನಮಗೆ ಉಪಕಾರವಾಗಬಹುದು ಅಥವಾ ನಮಗೆ ಇವನನ್ನು ಮಗನಾಗಿ ಸ್ವೀಕರಿಸಿಕೊಳ್ಳಬಹುದು.” ಈ ರೀತಿ ನಾವು ಯೂಸುಫರಿಗೆ (ಈಜಿಪ್ಟಿನ) ಭೂಮಿಯಲ್ಲಿ ನೆಲೆಯನ್ನು ಮಾಡಿಕೊಟ್ಟೆವು. ಅವರಿಗೆ ಕನಸುಗಳ ವ್ಯಾಖ್ಯಾನವನ್ನು ಕಲಿಸಿಕೊಡುವುದಕ್ಕಾಗಿ. ಅಲ್ಲಾಹು ತನ್ನ ಎಲ್ಲಾ ವ್ಯವಹಾರಗಳಲ್ಲಿ ಅಜೇಯನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
[1] ಆ ಕಾಲದಲ್ಲಿ ರಯಾನ್ ಬಿನ್ ವಲೀದ್ ಎಂಬಾತ ಈಜಿಪ್ಟಿನ ಅರಸನಾಗಿದ್ದ ಮತ್ತು ಯೂಸುಫರನ್ನು (ಅವರ ಮೇಲೆ ಶಾಂತಿಯಿರಲಿ) ಖರೀದಿಸಿದ ವ್ಯಕ್ತಿ ಆತನ ಮಂತ್ರಿಯಾಗಿದ್ದ. ಅಝೀಝ್ ಎಂಬುದು ಈತನ ಬಿರುದಾಗಿತ್ತು. ಈತನ ಪತ್ನಿಯ ಹೆಸರು ರಾಈಲ್ ಅಥವಾ ಝಲೀಖಾ ಎಂದು ಹೇಳಲಾಗುತ್ತದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَمَّا بَلَغَ اَشُدَّهٗۤ اٰتَیْنٰهُ حُكْمًا وَّعِلْمًا ؕ— وَكَذٰلِكَ نَجْزِی الْمُحْسِنِیْنَ ۟
ನಂತರ ಯೂಸುಫ್ ಪ್ರೌಢರಾದಾಗ ನಾವು ಅವರಿಗೆ ವಿವೇಕ ಮತ್ತು ಜ್ಞಾನವನ್ನು ನೀಡಿದೆವು. ಒಳಿತು ಮಾಡುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَرَاوَدَتْهُ الَّتِیْ هُوَ فِیْ بَیْتِهَا عَنْ نَّفْسِهٖ وَغَلَّقَتِ الْاَبْوَابَ وَقَالَتْ هَیْتَ لَكَ ؕ— قَالَ مَعَاذَ اللّٰهِ اِنَّهٗ رَبِّیْۤ اَحْسَنَ مَثْوَایَ ؕ— اِنَّهٗ لَا یُفْلِحُ الظّٰلِمُوْنَ ۟
ಯೂಸುಫ್ ಯಾವ ಮಹಿಳೆಯ ಮನೆಯಲ್ಲಿದ್ದರೋ ಅವಳು ಯೂಸುಫರನ್ನು ಪುಸಲಾಯಿಸಲು ಪ್ರಾರಂಭಿಸಿದಳು. ಆಕೆ ಕದಗಳನ್ನೆಲ್ಲಾ ಮುಚ್ಚಿ “ಇತ್ತ ಬಾ” ಎಂದು ಕರೆದಳು. ಯೂಸುಫ್ ಹೇಳಿದರು: “ಅಲ್ಲಾಹನಿಗೆ ಶರಣು! ಅವನು ನನ್ನ ಒಡೆಯ. ಅವನು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದಾನೆ. ನಿಶ್ಚಯವಾಗಿಯೂ ಅಕ್ರಮಿಗಳು ಯಶಸ್ವಿಯಾಗುವುದಿಲ್ಲ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَقَدْ هَمَّتْ بِهٖ وَهَمَّ بِهَا لَوْلَاۤ اَنْ رَّاٰ بُرْهَانَ رَبِّهٖ ؕ— كَذٰلِكَ لِنَصْرِفَ عَنْهُ السُّوْٓءَ وَالْفَحْشَآءَ ؕ— اِنَّهٗ مِنْ عِبَادِنَا الْمُخْلَصِیْنَ ۟
ಅವಳು ಯೂಸುಫರಲ್ಲಿ ಅನುರಕ್ತಳಾಗಿದ್ದಳು. ತಮ್ಮ ಪರಿಪಾಲಕನ (ಅಲ್ಲಾಹನ) ಸಾಕ್ಷ್ಯವನ್ನು ಕಾಣದಿರುತ್ತಿದ್ದರೆ ಯೂಸುಫ್ ಕೂಡ ಆಕೆಯಲ್ಲಿ ಅನುರಕ್ತರಾಗುತ್ತಿದ್ದರು. ಈ ರೀತಿ ಅವರಿಂದ ದುಷ್ಕರ್ಮ ಮತ್ತು ಅಶ್ಲೀಲಕೃತ್ಯವನ್ನು ದೂರ ಸರಿಸಲು (ನಾವು ಹೀಗೆ ಮಾಡಿದೆವು). ನಿಶ್ಚಯವಾಗಿಯೂ ಅವರು ನಮ್ಮ ನಿಷ್ಕಳಂಕ ದಾಸರಲ್ಲಿ ಸೇರಿದವರಾಗಿದ್ದಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاسْتَبَقَا الْبَابَ وَقَدَّتْ قَمِیْصَهٗ مِنْ دُبُرٍ وَّاَلْفَیَا سَیِّدَهَا لَدَا الْبَابِ ؕ— قَالَتْ مَا جَزَآءُ مَنْ اَرَادَ بِاَهْلِكَ سُوْٓءًا اِلَّاۤ اَنْ یُّسْجَنَ اَوْ عَذَابٌ اَلِیْمٌ ۟
ಅವರಿಬ್ಬರೂ ಬಾಗಿಲ ಬಳಿಗೆ ವೇಗವಾಗಿ ಓಡಿದರು. ಅವಳು ಯೂಸುಫರ ಅಂಗಿಯನ್ನು ಹಿಂದಿನಿಂದ ಎಳೆದು ಹರಿದಳು. ಅವರಿಬ್ಬರೂ ಬಾಗಿಲ ಬಳಿ ಅವಳ ಯಜಮಾನನನ್ನು (ಗಂಡನನ್ನು) ಕಂಡರು. ಅವಳು ಹೇಳಿದಳು: “ಯಾರು ನಿಮ್ಮ ಹೆಂಡತಿಯೊಂದಿಗೆ ಕೆಟ್ಟ ಇರಾದೆ ಇಟ್ಟುಕೊಳ್ಳುತ್ತಾನೋ ಅವನಿಗೆ ನೀಡಲಾಗುವ ಶಿಕ್ಷೆ ಅವನನ್ನು ಕಾರಾಗೃಹಕ್ಕೆ ತಳ್ಳುವುದು ಅಥವಾ ಯಾತನಾಮಯ ಶಿಕ್ಷೆ ನೀಡುವುದು ಮಾತ್ರವಾಗಿರಬೇಕು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ هِیَ رَاوَدَتْنِیْ عَنْ نَّفْسِیْ وَشَهِدَ شَاهِدٌ مِّنْ اَهْلِهَا ۚ— اِنْ كَانَ قَمِیْصُهٗ قُدَّ مِنْ قُبُلٍ فَصَدَقَتْ وَهُوَ مِنَ الْكٰذِبِیْنَ ۟
ಯೂಸುಫ್ ಹೇಳಿದರು: “ಅವಳೇ ನನ್ನನ್ನು ಪುಸಲಾಯಿಸಲು ಬಂದವಳು.” ಆಗ ಅವಳ ಕುಟುಂಬದ ಒಬ್ಬ ವ್ಯಕ್ತಿ ಸಾಕ್ಷಿ ನುಡಿಯುತ್ತಾ ಹೇಳಿದನು: “ಅವನ ಅಂಗಿ ಮುಂದಿನಿಂದ ಹರಿದಿದ್ದರೆ ಅವಳು ಹೇಳುವುದು ಸತ್ಯವಾಗಿದೆ ಮತ್ತು ಅವನು ಸುಳ್ಳುಗಾರನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاِنْ كَانَ قَمِیْصُهٗ قُدَّ مِنْ دُبُرٍ فَكَذَبَتْ وَهُوَ مِنَ الصّٰدِقِیْنَ ۟
ಆದರೆ ಅವನ ಅಂಗಿ ಹಿಂದಿನಿಂದ ಹರಿದಿದ್ದರೆ ಅವಳು ಸುಳ್ಳು ಹೇಳುತ್ತಿದ್ದಾಳೆ ಮತ್ತು ಅವನು ಸತ್ಯವಂತನಾಗಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا رَاٰ قَمِیْصَهٗ قُدَّ مِنْ دُبُرٍ قَالَ اِنَّهٗ مِنْ كَیْدِكُنَّ ؕ— اِنَّ كَیْدَكُنَّ عَظِیْمٌ ۟
ಯೂಸುಫರ ಅಂಗಿ ಹಿಂದಿನಿಂದ ಹರಿದಿರುವುದು ಕಂಡಾಗ ಅವನು (ಅವಳ ಗಂಡ) ಹೇಳಿದನು: “ಇದು ನಿಮ್ಮ (ಮಹಿಳೆಯರ) ಪಿತೂರಿಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ನಿಮ್ಮ ಪಿತೂರಿ ಭಯಾನಕವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یُوْسُفُ اَعْرِضْ عَنْ هٰذَا ٚ— وَاسْتَغْفِرِیْ لِذَنْۢبِكِ ۖۚ— اِنَّكِ كُنْتِ مِنَ الْخٰطِـِٕیْنَ ۟۠
ಯೂಸುಫ್! ನೀನು ಚಿಂತೆ ಮಾಡಬೇಡ. (ಓ ಹೆಣ್ಣೇ!) ನೀನು ನಿನ್ನ ಪಾಪಕ್ಕೆ ಕ್ಷಮೆ ಕೇಳು. ನಿಶ್ಚಯವಾಗಿಯೂ ನೀನು ತಪ್ಪು ಮಾಡಿದವಳಾಗಿರುವೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ نِسْوَةٌ فِی الْمَدِیْنَةِ امْرَاَتُ الْعَزِیْزِ تُرَاوِدُ فَتٰىهَا عَنْ نَّفْسِهٖ ۚ— قَدْ شَغَفَهَا حُبًّا ؕ— اِنَّا لَنَرٰىهَا فِیْ ضَلٰلٍ مُّبِیْنٍ ۟
ನಗರದ ಕೆಲವು ಮಹಿಳೆಯರು ಗುಸುಗುಸು ಮಾತನಾಡತೊಡಗಿದರು: “ಅಝೀಝರ ಹೆಂಡತಿ ಅವಳ ಗುಲಾಮ ಹುಡುಗನನ್ನು ಪುಸಲಾಯಿಸಿದ್ದಾಳೆ. ಆಕೆ ಅವನಲ್ಲಿ ಸಂಪೂರ್ಣ ಭಾವಪರವಶಳಾಗಿದ್ದಾಳೆ; ನಿಶ್ಚಯವಾಗಿಯೂ ಅವಳು ಸ್ಪಷ್ಟ ದುರ್ಮಾರ್ಗದಲ್ಲಿರುವಂತೆ ತೋರುತ್ತಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا سَمِعَتْ بِمَكْرِهِنَّ اَرْسَلَتْ اِلَیْهِنَّ وَاَعْتَدَتْ لَهُنَّ مُتَّكَاً وَّاٰتَتْ كُلَّ وَاحِدَةٍ مِّنْهُنَّ سِكِّیْنًا وَّقَالَتِ اخْرُجْ عَلَیْهِنَّ ۚ— فَلَمَّا رَاَیْنَهٗۤ اَكْبَرْنَهٗ وَقَطَّعْنَ اَیْدِیَهُنَّ ؗ— وَقُلْنَ حَاشَ لِلّٰهِ مَا هٰذَا بَشَرًا ؕ— اِنْ هٰذَاۤ اِلَّا مَلَكٌ كَرِیْمٌ ۟
ಮಹಿಳೆಯರ ಈ ಪುಕಾರು ಕೇಳಿದಾಗ ಆಕೆ ಅವರ ಬಳಿಗೆ ಆಳುಗಳನ್ನು ಕಳುಹಿಸಿ ಬರಮಾಡಿಸಿದಳು. ನಂತರ ಅವರಿಗೆ ಒರಗಿ ಕೂರುವ ಆಸನಗಳ ವ್ಯವಸ್ಥೆ ಮಾಡಿ, ಅವರೆಲ್ಲರಿಗೂ ಒಂದೊಂದು ಚೂರಿಯನ್ನು ನೀಡಿದಳು. ನಂತರ ಯೂಸುಫರನ್ನು ಕರೆದು, “ಇವರ ಮಂದೆ ಬಾ” ಎಂದಳು. ಯೂಸುಫರನ್ನು ಕಂಡಾಗ ಆ ಮಹಿಳೆಯರು ಹುಬ್ಬೇರಿಸಿದರು ಮತ್ತು ತಮ್ಮ ಕೈಗಳನ್ನೇ ಕೊಯ್ದರು. ಅವರು (ಬೆರಗಾಗಿ) ಹೇಳಿದರು: “ಅಲ್ಲಾಹು ಪರಿಶುದ್ಧನು! ಇವನು ಮನುಷ್ಯನೇ ಅಲ್ಲ! ಇವನೊಬ್ಬ ಶ್ರೇಷ್ಠ ದೇವದೂತನೇ ಸರಿ!”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَتْ فَذٰلِكُنَّ الَّذِیْ لُمْتُنَّنِیْ فِیْهِ ؕ— وَلَقَدْ رَاوَدْتُّهٗ عَنْ نَّفْسِهٖ فَاسْتَعْصَمَ ؕ— وَلَىِٕنْ لَّمْ یَفْعَلْ مَاۤ اٰمُرُهٗ لَیُسْجَنَنَّ وَلَیَكُوْنًا مِّنَ الصّٰغِرِیْنَ ۟
ಅವಳು ಹೇಳಿದಳು: “ಯಾರ ವಿಷಯದಲ್ಲಿ ನೀವು ನನ್ನ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಿರೋ ಅವನೇ ಈತ! ನಾನು ಅವನನ್ನು ಪುಸಲಾಯಿಸಿದ್ದೆ. ಆದರೆ ಆತ ಅದಕ್ಕೆ ಒಪ್ಪದೆ ಪಾರಾಗಿಬಿಟ್ಟ. ನಾನು ಅವನಿಗೆ ಆಜ್ಞಾಪಿಸುವುದನ್ನು ಅವನು ನೆರವೇರಿಸದಿದ್ದರೆ, ಅವನನ್ನು ಕಾರಾಗೃಹಕ್ಕೆ ತಳ್ಳಲಾಗುವುದು ಮತ್ತು ಅವನು ಅವಮಾನಕ್ಕೊಳಗಾದವರಲ್ಲಿ ಸೇರುವನು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ رَبِّ السِّجْنُ اَحَبُّ اِلَیَّ مِمَّا یَدْعُوْنَنِیْۤ اِلَیْهِ ۚ— وَاِلَّا تَصْرِفْ عَنِّیْ كَیْدَهُنَّ اَصْبُ اِلَیْهِنَّ وَاَكُنْ مِّنَ الْجٰهِلِیْنَ ۟
ಯೂಸುಫ್ ಹೇಳಿದರು: “ಓ ನನ್ನ ಪರಿಪಾಲಕನೇ! ಇವರು ನನ್ನನ್ನು ಯಾವುದರ ಕಡೆಗೆ ಕರೆಯುತ್ತಿದ್ದಾರೋ ಅದಕ್ಕಿಂತಲೂ ನನಗೆ ಕಾರಾಗೃಹವೇ ಹೆಚ್ಚು ಇಷ್ಟ. ನೀನು ನನ್ನನ್ನು ಇವರ ಪಿತೂರಿಯಿಂದ ದೂರ ಸರಿಸದಿದ್ದರೆ ನಾನು ಅವರ ಕಡೆಗೆ ವಾಲುವೆನು ಮತ್ತು ಅವಿವೇಕಿಗಳಲ್ಲಿ ಸೇರಿದವನಾಗುವೆನು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاسْتَجَابَ لَهٗ رَبُّهٗ فَصَرَفَ عَنْهُ كَیْدَهُنَّ ؕ— اِنَّهٗ هُوَ السَّمِیْعُ الْعَلِیْمُ ۟
ಆಗ ಅವರ ಪರಿಪಾಲಕನು (ಅಲ್ಲಾಹು) ಅವರ ಪ್ರಾರ್ಥನೆಗೆ ಉತ್ತರಿಸಿದನು ಮತ್ತು ಆ ಮಹಿಳೆಯರ ಪಿತೂರಿಯಿಂದ ಅವರನ್ನು ದೂರ ಸರಿಸಿದನು. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ بَدَا لَهُمْ مِّنْ بَعْدِ مَا رَاَوُا الْاٰیٰتِ لَیَسْجُنُنَّهٗ حَتّٰی حِیْنٍ ۟۠
ನಂತರ ಆ ಎಲ್ಲಾ ಸಾಕ್ಷ್ಯಾಧಾರಗಳನ್ನು ನೋಡಿದ ಬಳಿಕವೂ ಯೂಸುಫರನ್ನು ಒಂದು ಅವಧಿಯ ತನಕ ಕಾರಾಗೃಹದಲ್ಲಿಡುವುದು ಲೇಸೆಂದು ಅವರಿಗೆ ತೋಚಿತು.[1]
[1] ಯೂಸುಫರ (ಅವರ ಮೇಲೆ ಶಾಂತಿಯಿರಲಿ) ನಿರಪರಾಧಿತ್ವವು ಸಾಬೀತಾದ ಬಳಿಕವೂ ಅವರನ್ನು ಒಂದು ಅವಧಿಯ ತನಕ ಸೆರೆಯಲ್ಲಿಡುವುದು ಲೇಸೆಂದು ಆಕೆಯ ಗಂಡನಿಗೆ (ಮಂತ್ರಿಗೆ) ತೋರಿತು. ಬಹುಶಃ ಇದು ಯೂಸುಫರನ್ನು (ಅವರ ಮೇಲೆ ಶಾಂತಿಯಿರಲಿ) ತನ್ನ ಹೆಂಡತಿಯಿಂದ ದೂರವಿಡುವ ಉದ್ದೇಶದಿಂದಾಗಿರಬಹುದು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَدَخَلَ مَعَهُ السِّجْنَ فَتَیٰنِ ؕ— قَالَ اَحَدُهُمَاۤ اِنِّیْۤ اَرٰىنِیْۤ اَعْصِرُ خَمْرًا ۚ— وَقَالَ الْاٰخَرُ اِنِّیْۤ اَرٰىنِیْۤ اَحْمِلُ فَوْقَ رَاْسِیْ خُبْزًا تَاْكُلُ الطَّیْرُ مِنْهُ ؕ— نَبِّئْنَا بِتَاْوِیْلِهٖ ۚ— اِنَّا نَرٰىكَ مِنَ الْمُحْسِنِیْنَ ۟
ಯೂಸುಫರೊಂದಿಗೆ ಇಬ್ಬರು ಯುವಕರು ಕೂಡ ಕಾರಾಗೃಹಕ್ಕೆ ಪ್ರವೇಶ ಮಾಡಿದರು. ಅವರಲ್ಲೊಬ್ಬನು ಹೇಳಿದನು: “ನಾನು ಮದ್ಯ (ದ್ರಾಕ್ಷಾರಸ) ಹಿಂಡುತ್ತಿರುವಂತೆ ನನಗೆ ಕನಸು ಬಿದ್ದಿದೆ.” ಇನ್ನೊಬ್ಬನು ಹೇಳಿದನು: “ನಾನು ನನ್ನ ತಲೆಯ ಮೇಲೆ ರೊಟ್ಟಿಯನ್ನು ಒಯ್ಯುತ್ತಿರುವಂತೆ ನನಗೆ ಕನಸು ಬಿದ್ದಿದೆ. ಹಕ್ಕಿಗಳು ಅದನ್ನು ಕುಕ್ಕಿ ತಿನ್ನುತ್ತಿದ್ದವು. ಇದರ ಅರ್ಥವೇನೆಂದು ನಮಗೆ ತಿಳಿಸಿಕೊಡಿ. ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಜ್ಜನರಂತೆ ಕಾಣುತ್ತಿದ್ದೇವೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ لَا یَاْتِیْكُمَا طَعَامٌ تُرْزَقٰنِهٖۤ اِلَّا نَبَّاْتُكُمَا بِتَاْوِیْلِهٖ قَبْلَ اَنْ یَّاْتِیَكُمَا ؕ— ذٰلِكُمَا مِمَّا عَلَّمَنِیْ رَبِّیْ ؕ— اِنِّیْ تَرَكْتُ مِلَّةَ قَوْمٍ لَّا یُؤْمِنُوْنَ بِاللّٰهِ وَهُمْ بِالْاٰخِرَةِ هُمْ كٰفِرُوْنَ ۟
ಯೂಸುಫ್ ಹೇಳಿದರು: “ನಿಮಗೆ ಒದಗಿಸಲಾಗುವ ಆಹಾರವು ನಿಮ್ಮ ಬಳಿಗೆ ಬರುವ ಮೊದಲೇ ನಾನು ಅದರ (ಕನಸಿನ) ವ್ಯಾಖ್ಯಾನವನ್ನು ನಿಮಗೆ ತಿಳಿಸಿಕೊಡುವೆನು. ನಾನು ಹೇಳುವ ವ್ಯಾಖ್ಯಾನವು ನನ್ನ ಪರಿಪಾಲಕನು (ಅಲ್ಲಾಹು) ನನಗೆ ಕಲಿಸಿಕೊಟ್ಟ ವಿಷಯಗಳಲ್ಲಿ ಸೇರಿದ್ದಾಗಿದೆ. ಅಲ್ಲಾಹನಲ್ಲಿ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿಷೇಧಿಸುವ ಜನರ ಮಾರ್ಗವನ್ನು ನಿಶ್ಚಯವಾಗಿಯೂ ನಾನು ತೊರೆದಿದ್ದೇನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاتَّبَعْتُ مِلَّةَ اٰبَآءِیْۤ اِبْرٰهِیْمَ وَاِسْحٰقَ وَیَعْقُوْبَ ؕ— مَا كَانَ لَنَاۤ اَنْ نُّشْرِكَ بِاللّٰهِ مِنْ شَیْءٍ ؕ— ذٰلِكَ مِنْ فَضْلِ اللّٰهِ عَلَیْنَا وَعَلَی النَّاسِ وَلٰكِنَّ اَكْثَرَ النَّاسِ لَا یَشْكُرُوْنَ ۟
ನಾನು ನನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್, ಇಸ್‍ಹಾಕ್ ಮತ್ತು ಯಾಕೂಬರ ಮಾರ್ಗವನ್ನು ಹಿಂಬಾಲಿಸಿದ್ದೇನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು ನಮಗೆ ಅರ್ಹವಾದುದಲ್ಲ. ಇದು ನಮ್ಮ ಮತ್ತು ಸಂಪೂರ್ಣ ಮಾನವರ ಮೇಲಿರುವ ಅಲ್ಲಾಹನ ವಿಶೇಷ ಅನುಗ್ರಹವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یٰصَاحِبَیِ السِّجْنِ ءَاَرْبَابٌ مُّتَفَرِّقُوْنَ خَیْرٌ اَمِ اللّٰهُ الْوَاحِدُ الْقَهَّارُ ۟ؕ
ಓ ನನ್ನ ಕಾರಾಗೃಹದ ಗೆಳೆಯರೇ! ಅನೇಕ ವಿಭಿನ್ನ ದೇವರುಗಳು ಉತ್ತಮವೋ, ಅಥವಾ ಮಹಾ ಶಕ್ತಿಶಾಲಿಯಾದ ಏಕೈಕ ಅಲ್ಲಾಹನೋ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
مَا تَعْبُدُوْنَ مِنْ دُوْنِهٖۤ اِلَّاۤ اَسْمَآءً سَمَّیْتُمُوْهَاۤ اَنْتُمْ وَاٰبَآؤُكُمْ مَّاۤ اَنْزَلَ اللّٰهُ بِهَا مِنْ سُلْطٰنٍ ؕ— اِنِ الْحُكْمُ اِلَّا لِلّٰهِ ؕ— اَمَرَ اَلَّا تَعْبُدُوْۤا اِلَّاۤ اِیَّاهُ ؕ— ذٰلِكَ الدِّیْنُ الْقَیِّمُ وَلٰكِنَّ اَكْثَرَ النَّاسِ لَا یَعْلَمُوْنَ ۟
ನೀವು ಅಲ್ಲಾಹನನ್ನು ಬಿಟ್ಟು ಯಾವೆಲ್ಲಾ ದೇವರುಗಳನ್ನು ಆರಾಧಿಸುತ್ತಿದ್ದೀರೋ ಅವರು ಕೇವಲ ನೀವು ಮತ್ತು ನಿಮ್ಮ ಪೂರ್ವಜರು ನಾಮಕರಣ ಮಾಡಿದ ಕೆಲವು ಹೆಸರುಗಳಲ್ಲದೆ ಇನ್ನೇನೂ ಅಲ್ಲ. ಅಲ್ಲಾಹು ಅವರ ಬಗ್ಗೆ ಯಾವುದೇ ಸಾಕ್ಷ್ಯಾಧಾರವನ್ನು ಅವತೀರ್ಣಗೊಳಿಸಿಲ್ಲ. ಆಜ್ಞಾಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ನೀವು ಅವನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬಾರದೆಂದು ಅವನು ಆಜ್ಞಾಪಿಸಿದ್ದಾನೆ. ಅದೇ ನೇರ ಧರ್ಮ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یٰصَاحِبَیِ السِّجْنِ اَمَّاۤ اَحَدُكُمَا فَیَسْقِیْ رَبَّهٗ خَمْرًا ۚ— وَاَمَّا الْاٰخَرُ فَیُصْلَبُ فَتَاْكُلُ الطَّیْرُ مِنْ رَّاْسِهٖ ؕ— قُضِیَ الْاَمْرُ الَّذِیْ فِیْهِ تَسْتَفْتِیٰنِ ۟ؕ
ಓ ನನ್ನ ಕಾರಾಗೃಹದ ಗೆಳೆಯರೇ! ನಿಮ್ಮಲ್ಲೊಬ್ಬನು ತನ್ನ ಅರಸನಿಗೆ ಮದ್ಯವನ್ನು ಕುಡಿಸುವನು.[1] ಇನ್ನೊಬ್ಬನನ್ನು ಶಿಲುಬೆಗೇರಿಸಲಾಗುವುದು. ಆಗ ಹಕ್ಕಿಗಳು ಅವನ ತಲೆಯನ್ನು ಕುಕ್ಕಿ ತಿನ್ನುವುವು. ನೀವಿಬ್ಬರು ತೀರ್ಪು ಕೇಳುವ ಆ ವಿಷಯವು ಈಗಾಗಲೇ ತೀರ್ಮಾನಿಸಲ್ಪಟ್ಟಿದೆ.”
[1] ಅಂದರೆ ಅವನು ಸೆರೆಮನೆಯಿಂದ ಬಿಡುಗಡೆಯಾದ ನಂತರ ಅರಸನಿಗೆ ಮದ್ಯ ಬಡಿಸುವ ಕೆಲಸಕ್ಕೆ ಸೇರಿಕೊಳ್ಳುವನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ لِلَّذِیْ ظَنَّ اَنَّهٗ نَاجٍ مِّنْهُمَا اذْكُرْنِیْ عِنْدَ رَبِّكَ ؗ— فَاَنْسٰىهُ الشَّیْطٰنُ ذِكْرَ رَبِّهٖ فَلَبِثَ فِی السِّجْنِ بِضْعَ سِنِیْنَ ۟۠
ಅವರಿಬ್ಬರಲ್ಲಿ ಬಿಡುಗಡೆಯಾಗುವನೆಂಬ ಗುಮಾನಿಯಿದ್ದ ವ್ಯಕ್ತಿಯೊಡನೆ ಅವರು ಹೇಳಿದರು: “ನಿನ್ನ ಅರಸನಿಗೆ ನನ್ನ ಬಗ್ಗೆ ನೆನಪು ಮಾಡು.” ಆದರೆ ಅವನ ಅರಸನ ಬಳಿ ಯೂಸುಫರ ಬಗ್ಗೆ ನೆನಪು ಮಾಡುವುದನ್ನು ಶೈತಾನನು ಮರೆಸಿ ಬಿಟ್ಟನು. ಆದ್ದರಿಂದ ಅವರು ಅನೇಕ ವರ್ಷಗಳ ಕಾಲ ಕಾರಾಗೃಹದಲ್ಲೇ ಉಳಿದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ الْمَلِكُ اِنِّیْۤ اَرٰی سَبْعَ بَقَرٰتٍ سِمَانٍ یَّاْكُلُهُنَّ سَبْعٌ عِجَافٌ وَّسَبْعَ سُنْۢبُلٰتٍ خُضْرٍ وَّاُخَرَ یٰبِسٰتٍ ؕ— یٰۤاَیُّهَا الْمَلَاُ اَفْتُوْنِیْ فِیْ رُءْیَایَ اِنْ كُنْتُمْ لِلرُّءْیَا تَعْبُرُوْنَ ۟
ಅರಸ ಹೇಳಿದನು: “ಏಳು ಕೊಬ್ಬಿದ ಹಸುಗಳನ್ನು ಏಳು ಬಡಕಲು ಹಸುಗಳು ತಿನ್ನುವುದನ್ನು ಮತ್ತು ಏಳು ಹಸಿರು ತೆನೆಗಳು ಹಾಗೂ ಏಳು ಒಣ ತೆನೆಗಳನ್ನು ನಾನು (ಕನಸಿನಲ್ಲಿ) ಕಂಡಿದ್ದೇನೆ. ಓ ಸರದಾರರೇ! ನನ್ನ ಈ ಕನಸಿನ ಅರ್ಥವೇನೆಂದು ತಿಳಿಸಿಕೊಡಿ. ನೀವು ಕನಸುಗಳ ವ್ಯಾಖ್ಯಾನವನ್ನು ತಿಳಿದವರಾಗಿದ್ದರೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْۤا اَضْغَاثُ اَحْلَامٍ ۚ— وَمَا نَحْنُ بِتَاْوِیْلِ الْاَحْلَامِ بِعٰلِمِیْنَ ۟
ಅವರು ಹೇಳಿದರು: “ಅರ್ಥರಹಿತ ಕನಸುಗಳ ಮಿಶ್ರಣ! ನಮಗೆ ಇಂತಹ ಅರ್ಥರಹಿತ ಕನಸುಗಳ ವ್ಯಾಖ್ಯಾನವು ತಿಳಿದಿಲ್ಲ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ الَّذِیْ نَجَا مِنْهُمَا وَادَّكَرَ بَعْدَ اُمَّةٍ اَنَا اُنَبِّئُكُمْ بِتَاْوِیْلِهٖ فَاَرْسِلُوْنِ ۟
ಅವರಿಬ್ಬರಲ್ಲಿ ಬಿಡುಗಡೆಯಾದವನಿಗೆ ಒಂದು ದೀರ್ಘವಧಿಯ ನಂತರ (ಯೂಸುಫರ ಬಗ್ಗೆ) ಜ್ಞಾಪಕ ಬಂದು ಹೇಳಿದನು: “ಅದರ ವ್ಯಾಖ್ಯಾನವನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ. ನನ್ನನ್ನು ಕಳುಹಿಸಿಕೊಡಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یُوْسُفُ اَیُّهَا الصِّدِّیْقُ اَفْتِنَا فِیْ سَبْعِ بَقَرٰتٍ سِمَانٍ یَّاْكُلُهُنَّ سَبْعٌ عِجَافٌ وَّسَبْعِ سُنْۢبُلٰتٍ خُضْرٍ وَّاُخَرَ یٰبِسٰتٍ ۙ— لَّعَلِّیْۤ اَرْجِعُ اِلَی النَّاسِ لَعَلَّهُمْ یَعْلَمُوْنَ ۟
(ಅವನು ಯೂಸುಫರ ಬಳಿಗೆ ಹೋಗಿ ಹೇಳಿದನು): “ಓ ಸತ್ಯವಂತ ಯೂಸುಫರೇ! ಏಳು ಕೊಬ್ಬಿದ ಹಸುಗಳನ್ನು ಏಳು ಬಡಕಲು ಹಸುಗಳು ತಿನ್ನುವುದು ಮತ್ತು ಏಳು ಹಸಿರು ತೆನೆಗಳು ಹಾಗೂ ಏಳು ಒಣ ತೆನೆಗಳ ವ್ಯಾಖ್ಯಾನವನ್ನು ತಿಳಿಸಿ. ನಾನು ಮರಳಿ ಹೋಗಿ ಆ ಜನರಿಗೆ ಹೇಳುತ್ತೇನೆ. ಅವರು (ನಿಮ್ಮ ಬಗ್ಗೆ) ತಿಳಿಯುವಂತಾಗಲಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ تَزْرَعُوْنَ سَبْعَ سِنِیْنَ دَاَبًا ۚ— فَمَا حَصَدْتُّمْ فَذَرُوْهُ فِیْ سُنْۢبُلِهٖۤ اِلَّا قَلِیْلًا مِّمَّا تَاْكُلُوْنَ ۟
ಯೂಸುಫ್ ಹೇಳಿದರು: “ನೀವು ಸತತ ಏಳು ವರ್ಷಗಳ ಕಾಲ ನಿರಂತರ ಬಿತ್ತನೆ ಮಾಡಿರಿ. ನಂತರ ನೀವು ಕೊಯ್ಲು ಮಾಡಿದ್ದನ್ನು—ನಿಮಗೆ ತಿನ್ನಲು ಬೇಕಾದ ಸ್ವಲ್ಪಾಂಶದ ಬಿಟ್ಟು—ಉಳಿದುದನ್ನು ತೆನೆಯಲ್ಲೇ ಬಿಟ್ಟುಬಿಡಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ یَاْتِیْ مِنْ بَعْدِ ذٰلِكَ سَبْعٌ شِدَادٌ یَّاْكُلْنَ مَا قَدَّمْتُمْ لَهُنَّ اِلَّا قَلِیْلًا مِّمَّا تُحْصِنُوْنَ ۟
ಅದರ ನಂತರ ತೀವ್ರ ಬರಗಾಲದ ಏಳು ವರ್ಷಗಳು ಬಂದು, ನೀವು ಆ ವರ್ಷಗಳಿಗಾಗಿ ದಾಸ್ತಾನು ಮಾಡಿದ ಧಾನ್ಯಗಳೆಲ್ಲವನ್ನೂ ಅವು ತಿನ್ನುತ್ತವೆ. ನೀವು ಜೋಪಾನವಾಗಿಟ್ಟ ಸ್ವಲ್ಪಾಂಶದ ಹೊರತು.[1]
[1] ಏಳು ಕೊಬ್ಬಿದ ಹಸುಗಳು ಎಂದರೆ ಸಮೃದ್ಧವಾದ ಏಳು ವರ್ಷಗಳು. ಏಳು ಬಡಕಲು ಹಸುಗಳು ಎಂದರೆ ಅದರ ನಂತರ ಬರುವ ಏಳು ಬರಗಾಲದ ವರ್ಷಗಳು. ಏಳು ಹಸಿರು ಪೈರುಗಳು ಎಂದರೆ ಭೂಮಿ ಫಲವತ್ತಾಗಿರುವ ಏಳು ವರ್ಷಗಳು ಮತ್ತು ಏಳು ಒಣಗಿದ ಪೈರುಗಳು ಎಂದರೆ ಭೂಮಿ ಬರಡಾಗಿರುವ ಏಳು ವರ್ಷಗಳು. ಭೂಮಿ ಫಲವತ್ತಾಗಿರುವ ಏಳು ಸಮೃದ್ಧಪೂರ್ಣ ವರ್ಷಗಳಲ್ಲಿ ಸತತವಾಗಿ ಕೃಷಿ ಮಾಡಿ, ತಿನ್ನಲು ಬೇಕಾದಷ್ಟು ಧಾನ್ಯಗಳನ್ನು ತೆಗೆದು ಉಳಿದವುಗಳನ್ನು ಅವುಗಳ ತೆನೆಗಳೊಂದಿಗೇ ದಾಸ್ತಾನು ಮಾಡಿಟ್ಟುಕೊಳ್ಳಬೇಕು. ಮುಂದೆ ಬರುವ ಏಳು ಬರಗಾಲದ ವರ್ಷಗಳಲ್ಲಿ ಇವು ಉಪಯೋಗಕ್ಕೆ ಬರುತ್ತವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ یَاْتِیْ مِنْ بَعْدِ ذٰلِكَ عَامٌ فِیْهِ یُغَاثُ النَّاسُ وَفِیْهِ یَعْصِرُوْنَ ۟۠
ಅದರ ನಂತರ ಬರುವ ವರ್ಷದಲ್ಲಿ ಜನರಿಗೆ ಯಥೇಷ್ಠ ಮಳೆಯಾಗುತ್ತದೆ. ಆ ವರ್ಷದಲ್ಲಿ ಅವರು (ದ್ರಾಕ್ಷಾರಸವನ್ನು) ಹಿಂಡುವರು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ الْمَلِكُ ائْتُوْنِیْ بِهٖ ۚ— فَلَمَّا جَآءَهُ الرَّسُوْلُ قَالَ ارْجِعْ اِلٰی رَبِّكَ فَسْـَٔلْهُ مَا بَالُ النِّسْوَةِ الّٰتِیْ قَطَّعْنَ اَیْدِیَهُنَّ ؕ— اِنَّ رَبِّیْ بِكَیْدِهِنَّ عَلِیْمٌ ۟
ಅರಸ ಹೇಳಿದನು: “ಅವನನ್ನು ನನ್ನ ಬಳಿಗೆ ಕರೆತನ್ನಿ.” ಯೂಸುಫರ ಬಳಿಗೆ ದೂತನು ಬಂದಾಗ ಅವರು ಹೇಳಿದರು: “ನಿನ್ನ ಅರಸನ ಬಳಿಗೆ ಮರಳಿ ಹೋಗಿ ಕೈಗಳನ್ನು ಕೊಯ್ದ ಆ ಮಹಿಳೆಯರಿಗೆ ಏನಾಯಿತೆಂದು ವಿಚಾರಿಸು. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವರ ಪಿತೂರಿಯ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ مَا خَطْبُكُنَّ اِذْ رَاوَدْتُّنَّ یُوْسُفَ عَنْ نَّفْسِهٖ ؕ— قُلْنَ حَاشَ لِلّٰهِ مَا عَلِمْنَا عَلَیْهِ مِنْ سُوْٓءٍ ؕ— قَالَتِ امْرَاَتُ الْعَزِیْزِ الْـٰٔنَ حَصْحَصَ الْحَقُّ ؗ— اَنَا رَاوَدْتُّهٗ عَنْ نَّفْسِهٖ وَاِنَّهٗ لَمِنَ الصّٰدِقِیْنَ ۟
ಅರಸ ಕೇಳಿದನು: “ನೀವು ಯೂಸುಫರನ್ನು ಪುಸಲಾಯಿಸಿದ ಆ ಘಟನೆಯ ನಿಜಸ್ಥಿತಿಯೇನು?” ಆ ಮಹಿಳೆಯರು ಹೇಳಿದರು: “ಅಲ್ಲಾಹು ಕಾಪಾಡಲಿ! ಯೂಸುಫರಲ್ಲಿ ಏನಾದರೂ ದುರ್ನಡತೆಯಿರುವುದು ನಮ್ಮ ಗಮನಕ್ಕೆ ಬಂದಿಲ್ಲ.” ಅಝೀಝನ ಹೆಂಡತಿ ಹೇಳಿದಳು: “ಈಗ ಸತ್ಯವು ಬೆಳಕಿಗೆ ಬಂದಿದೆ. ನಾನೇ ಅವರನ್ನು ಪುಸಲಾಯಿಸಿದ್ದೆ. ಅವರು ನಿಜವಾಗಿಯೂ ಸತ್ಯವಂತರಾಗಿದ್ದಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ذٰلِكَ لِیَعْلَمَ اَنِّیْ لَمْ اَخُنْهُ بِالْغَیْبِ وَاَنَّ اللّٰهَ لَا یَهْدِیْ كَیْدَ الْخَآىِٕنِیْنَ ۟
ಇದೇಕೆಂದರೆ ನಾನು ಅವನ (ಗಂಡನ) ಅನುಪಸ್ಥಿತಿಯಲ್ಲಿ ಅವನಿಗೆ ವಿಶ್ವಾಸದ್ರೋಹ ಮಾಡಿಲ್ಲ ಎಂದು ಅವನು ತಿಳಿಯಲೆಂದು ಮತ್ತು ವಿಶ್ವಾಸದ್ರೋಹಿಗಳ ಪಿತೂರಿಯನ್ನು ಅಲ್ಲಾಹು ಯಶಸ್ವಿಗೊಳಿಸುವುದಿಲ್ಲ ಎಂದು ತಿಳಿಯಲೆಂದಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَاۤ اُبَرِّئُ نَفْسِیْ ۚ— اِنَّ النَّفْسَ لَاَمَّارَةٌ بِالسُّوْٓءِ اِلَّا مَا رَحِمَ رَبِّیْ ؕ— اِنَّ رَبِّیْ غَفُوْرٌ رَّحِیْمٌ ۟
ನನ್ನ ಮನಸ್ಸು ಪರಿಶುದ್ಧವಾಗಿದೆಯೆಂದು ನಾನು ಹೇಳುವುದಿಲ್ಲ. ನಿಶ್ಚಯವಾಗಿಯೂ ಮನಸ್ಸು ಕೆಡುಕು ಮಾಡಲು ಉತ್ತೇಜಿಸುತ್ತಲೇ ಇರುತ್ತದೆ. ನನ್ನ ಪರಿಪಾಲಕನು (ಅಲ್ಲಾಹು) ದಯೆ ತೋರಿದವರ ಹೊರತು. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ الْمَلِكُ ائْتُوْنِیْ بِهٖۤ اَسْتَخْلِصْهُ لِنَفْسِیْ ۚ— فَلَمَّا كَلَّمَهٗ قَالَ اِنَّكَ الْیَوْمَ لَدَیْنَا مَكِیْنٌ اَمِیْنٌ ۟
ಅರಸ ಹೇಳಿದನು: “ಅವರನ್ನು ನನ್ನ ಬಳಿಗೆ ತನ್ನಿ. ನಾನು ಅವರನ್ನು ನನ್ನ ಆಪ್ತ ಸಲಹೆಗಾರನಾಗಿ ನೇಮಿಸುತ್ತೇನೆ.” ನಂತರ ಅವರೊಡನೆ ಮಾತನಾಡಿದಾಗ ಅರಸ ಹೇಳಿದನು: “ನೀವು ಇಂದಿನಿಂದ ನಮ್ಮ ಬಳಿ ಗೌರವಾನ್ವಿತ ಮತ್ತು ವಿಶ್ವಾಸಾರ್ಹ ವ್ಯಕ್ತಿಯಾಗಿದ್ದೀರಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ اجْعَلْنِیْ عَلٰی خَزَآىِٕنِ الْاَرْضِ ۚ— اِنِّیْ حَفِیْظٌ عَلِیْمٌ ۟
ಯೂಸುಫ್ ಹೇಳಿದರು: “ನನ್ನನ್ನು ರಾಜ್ಯದ ಬೊಕ್ಕಸಗಳ ಅಧಿಕಾರಿಯನ್ನಾಗಿ ನೇಮಿಸಿ. ನಾನು ರಕ್ಷಣೆ ಮಾಡುವವನು ಮತ್ತು ತಿಳುವಳಿಕೆಯುಳ್ಳವನಾಗಿದ್ದೇನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَكَذٰلِكَ مَكَّنَّا لِیُوْسُفَ فِی الْاَرْضِ ۚ— یَتَبَوَّاُ مِنْهَا حَیْثُ یَشَآءُ ؕ— نُصِیْبُ بِرَحْمَتِنَا مَنْ نَّشَآءُ وَلَا نُضِیْعُ اَجْرَ الْمُحْسِنِیْنَ ۟
ಈ ರೀತಿ ನಾವು ಯೂಸುಫರಿಗೆ ಆ ರಾಜ್ಯದಲ್ಲಿ ಅಧಿಕಾರವನ್ನು ನೀಡಿದೆವು—ಅಲ್ಲಿ ಅವರಿಗೆ ಇಷ್ಟ ಬಂದ ಕಡೆ ಅವರು ವಾಸಿಸಲಿ ಎಂದು. ನಾವು ಇಚ್ಛಿಸುವವರಿಗೆ ನಾವು ನಮ್ಮ ದಯೆಯನ್ನು ದಯಪಾಲಿಸುತ್ತೇವೆ. ಒಳಿತು ಮಾಡುವವರ ಪ್ರತಿಫಲವನ್ನು ನಾವು ವ್ಯರ್ಥಗೊಳಿಸುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَاَجْرُ الْاٰخِرَةِ خَیْرٌ لِّلَّذِیْنَ اٰمَنُوْا وَكَانُوْا یَتَّقُوْنَ ۟۠
ಸತ್ಯವಿಶ್ವಾಸಿಗಳಿಗೆ ಮತ್ತು ದೇವಭಯವುಳ್ಳವರಿಗೆ ಪರಲೋಕದ ಪ್ರತಿಫಲವೇ ಅತಿಶ್ರೇಷ್ಠವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَجَآءَ اِخْوَةُ یُوْسُفَ فَدَخَلُوْا عَلَیْهِ فَعَرَفَهُمْ وَهُمْ لَهٗ مُنْكِرُوْنَ ۟
ಯೂಸುಫರ ಸಹೋದರರು (ಈಜಿಪ್ಟಿಗೆ) ಬಂದರು.[1] ಅವರು ಯೂಸುಫರ ಬಳಿಗೆ ತೆರಳಿದಾಗ, ಯೂಸುಫ್ ಅವರನ್ನು ಗುರುತಿಸಿದರು. ಆದರೆ ಅವರಿಗೆ ಯೂಸುಫರನ್ನು ಗುರುತಿಸಲಾಗಲಿಲ್ಲ.
[1] ಏಳು ಸಮೃದ್ಧಪೂರ್ಣ ವರ್ಷಗಳು ಕಳೆದ ಬಳಿಕ ಏಳು ಬರಗಾಲದ ವರ್ಷಗಳು ಬಂದವು. ಈ ವರ್ಷಗಳಲ್ಲಿ ಬರಗಾಲವು ಎಷ್ಟು ತೀವ್ರವಾಗಿತ್ತೆಂದರೆ ಈಜಿಪ್ಚ್ ದೇಶವು ಸಂಪೂರ್ಣವಾಗಿ ಬರ ಪೀಡಿತವಾಯಿತು. ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ಮತ್ತು ಅವರ ಮಕ್ಕಳು ವಾಸವಾಗಿದ್ದ ಕನ್‌ಆನ್ ದೇಶವು ಕೂಡ ಬರಗಾಲಕ್ಕೆ ತುತ್ತಾಯಿತು. ಯೂಸುಫ್ (ಅವರ ಮೇಲೆ ಶಾಂತಿಯಿರಲಿ) ಮೊದಲೇ ಯೋಜನೆಗಳನ್ನು ರಚಿಸಿ ಬರಗಾಲವನ್ನು ಅತ್ಯಂತ ನಾಜೂಕಾಗಿ ನಿರ್ವಹಿಸಿದರು. ಈಜಿಪ್ಟಿನಲ್ಲಿ ಧಾನ್ಯ ಸಿಗುತ್ತದೆಯೆಂಬ ಸುದ್ದಿ ತಿಳಿದಾಗ ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ತಮ್ಮ ಮಕ್ಕಳನ್ನು ಧಾನ್ಯ ಖರೀದಿಸಲು ಈಜಿಪ್ಟಿಗೆ ಕಳುಹಿಸಿದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَمَّا جَهَّزَهُمْ بِجَهَازِهِمْ قَالَ ائْتُوْنِیْ بِاَخٍ لَّكُمْ مِّنْ اَبِیْكُمْ ۚ— اَلَا تَرَوْنَ اَنِّیْۤ اُوْفِی الْكَیْلَ وَاَنَا خَیْرُ الْمُنْزِلِیْنَ ۟
ಅವರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಸಜ್ಜುಗೊಳಿಸಿದಾಗ ಯೂಸುಫ್ ಹೇಳಿದರು: “ನಿಮ್ಮ ತಂದೆಯ ಕಡೆಯ ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ. ನಾನು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ಕೊಡುವುದನ್ನು ಮತ್ತು ನಾನು ಆತಿಥ್ಯ ನೀಡುವವರಲ್ಲಿ ಅತ್ಯುತ್ತಮನೆಂದು ನೀವು ನೋಡುತ್ತಿಲ್ಲವೇ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاِنْ لَّمْ تَاْتُوْنِیْ بِهٖ فَلَا كَیْلَ لَكُمْ عِنْدِیْ وَلَا تَقْرَبُوْنِ ۟
ನೀವು ಅವನನ್ನು ಕರೆದುಕೊಂಡು ಬರದಿದ್ದರೆ, ನನ್ನಿಂದ ನಿಮಗೆ (ಇನ್ನು ಮುಂದೆ ಯಾವುದೇ ಧಾನ್ಯವನ್ನು) ಅಳೆದು ಕೊಡಲಾಗುವುದಿಲ್ಲ ಮತ್ತು ನೀವು ನನ್ನ ಬಳಿಗೆ ಬರಬೇಕಾಗಿಯೂ ಇಲ್ಲ.”[1]
[1] ಯೂಸುಫ್ (ಅವರ ಮೇಲೆ ಶಾಂತಿಯಿರಲಿ) ತನ್ನ ಸಹೋದರರನ್ನು ಅತ್ಯುತ್ತಮವಾಗಿ ಸತ್ಕರಿಸಿದರು. ಅವರಿಗೆ ಬೇಕಾದ ಎಲ್ಲಾ ಆಹಾರ ಸಾಮಗ್ರಿಗಳನ್ನು ಒದಗಿಸಿದರು. ನಮಗೊಬ್ಬ ತಂದೆ ಮತ್ತು ಇಬ್ಬರು ತಮ್ಮಂದಿರಿದ್ದಾರೆ. ಒಬ್ಬ ತಮ್ಮ ಕಳೆದುಹೋಗಿದ್ದಾನೆ. ಇನ್ನೊಬ್ಬ ತಮ್ಮನನ್ನು ತಂದೆಯವರು ಎಲ್ಲಿಗೂ ಕಳಿಸುವುದಿಲ್ಲ. ಆದ್ದರಿಂದ ಅವನು ನಮ್ಮ ಜೊತೆಗೆ ಬಂದಿಲ್ಲವೆಂದು ಸಹೋದರರು ಹೇಳಿದರು. ಆಗ ಯೂಸುಫ್ (ಅವರ ಮೇಲೆ ಶಾಂತಿಯಿರಲಿ) ಮುಂದೆ ನೀವು ಇಲ್ಲಿಗೆ ಆಹಾರ ಸಾಮಗ್ರಿಗಳಿಗಾಗಿ ಬರುವಾಗ ತಮ್ಮನನ್ನೂ ಕರೆದುಕೊಂಡು ಬನ್ನಿ. ಇಲ್ಲದಿದ್ದರೆ ನಿಮಗೆ ನಾನು ಆಹಾರ ಸಾಮಗ್ರಿಗಳನ್ನು ಕೊಡುವುದಿಲ್ಲವೆಂದು ಹೇಳಿದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا سَنُرَاوِدُ عَنْهُ اَبَاهُ وَاِنَّا لَفٰعِلُوْنَ ۟
ಅವರು ಹೇಳಿದರು: “ನಾನು ಅವನ ತಂದೆಯನ್ನು ಪುಸಲಾಯಿಸುವೆವು. ನಾವು ಅದನ್ನು ಖಂಡಿತ ಮಾಡುವೆವು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ لِفِتْیٰنِهِ اجْعَلُوْا بِضَاعَتَهُمْ فِیْ رِحَالِهِمْ لَعَلَّهُمْ یَعْرِفُوْنَهَاۤ اِذَا انْقَلَبُوْۤا اِلٰۤی اَهْلِهِمْ لَعَلَّهُمْ یَرْجِعُوْنَ ۟
ಯೂಸುಫ್ ತಮ್ಮ ಆಳುಗಳೊಂದಿಗೆ ಹೇಳಿದರು: “ಅವರು (ಧಾನ್ಯ ಖರೀದಿಸಲು ತಂದ) ಸರಕುಗಳನ್ನು ಅವರ ಹಸುಬೆಗಳಲ್ಲೇ (ಗುಟ್ಟಾಗಿ) ಹಾಕಿಬಿಡಿ. ಅವರು ತಮ್ಮ ಮನೆಯವರ ಬಳಿಗೆ ಮರಳಿದಾಗ ಅವುಗಳನ್ನು ಗುರುತಿಸುವರು. ಇದರಿಂದ ಅವರು ಮರಳಿ ಬರುವ ಸಾಧ್ಯತೆ ಹೆಚ್ಚಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا رَجَعُوْۤا اِلٰۤی اَبِیْهِمْ قَالُوْا یٰۤاَبَانَا مُنِعَ مِنَّا الْكَیْلُ فَاَرْسِلْ مَعَنَاۤ اَخَانَا نَكْتَلْ وَاِنَّا لَهٗ لَحٰفِظُوْنَ ۟
ಅವರು ತಮ್ಮ ತಂದೆಯ ಬಳಿಗೆ ಮರಳಿದಾಗ ಹೇಳಿದರು: “ಅಪ್ಪಾ! ನಮಗೆ (ಧಾನ್ಯಗಳನ್ನು) ಅಳೆದುಕೊಡುವುದನ್ನು ತಡೆಹಿಡಿಯಲಾಗಿದೆ. ಆದ್ದರಿಂದ ನಮ್ಮ ಜೊತೆಗೆ ನಮ್ಮ ತಮ್ಮನನ್ನು ಕಳುಹಿಸಿ. ನಾವು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ತರುವೆವು. ನಾವು ಇವನನ್ನು ಸುರಕ್ಷಿತವಾಗಿ ಕಾಪಾಡುವೆವು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ هَلْ اٰمَنُكُمْ عَلَیْهِ اِلَّا كَمَاۤ اَمِنْتُكُمْ عَلٰۤی اَخِیْهِ مِنْ قَبْلُ ؕ— فَاللّٰهُ خَیْرٌ حٰفِظًا ۪— وَّهُوَ اَرْحَمُ الرّٰحِمِیْنَ ۟
ತಂದೆ ಹೇಳಿದರು: “ಇದಕ್ಕೆ ಮೊದಲು ಇವನ ಅಣ್ಣನ (ಯೂಸುಫನ) ವಿಷಯದಲ್ಲಿ ನಾನು ನಿಮ್ಮನ್ನು ನಂಬಿದಂತೆಯೇ ಹೊರತು ಇವನ ವಿಷಯದಲ್ಲಿ ನಿಮ್ಮನ್ನು ನಂಬಲಾದೀತೇ? ಅಲ್ಲಾಹನೇ ಅತ್ಯುತ್ತಮ ರಕ್ಷಕ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَمَّا فَتَحُوْا مَتَاعَهُمْ وَجَدُوْا بِضَاعَتَهُمْ رُدَّتْ اِلَیْهِمْ ؕ— قَالُوْا یٰۤاَبَانَا مَا نَبْغِیْ ؕ— هٰذِهٖ بِضَاعَتُنَا رُدَّتْ اِلَیْنَا ۚ— وَنَمِیْرُ اَهْلَنَا وَنَحْفَظُ اَخَانَا وَنَزْدَادُ كَیْلَ بَعِیْرٍ ؕ— ذٰلِكَ كَیْلٌ یَّسِیْرٌ ۟
ಅವರು ತಮ್ಮ ಹಸುಬೆಗಳನ್ನು ಬಿಚ್ಚಿದಾಗ ತಮ್ಮ ಸರಕುಗಳನ್ನು ಕಂಡರು. ಅದನ್ನು ಅವರಿಗೆ ಹಿಂದಿರುಗಿಸಲಾಗಿತ್ತು. ಅವರು ಹೇಳಿದರು: “ಅಪ್ಪಾ! ನಮಗೆ ಇನ್ನೇನು ಬೇಕು? ಇಗೋ ನಮ್ಮ ಸರಕುಗಳನ್ನು ನಮಗೇ ಮರಳಿಸಲಾಗಿದೆ. ಆದರೂ ನಾವು ನಮ್ಮ ಕುಟುಂಬಕ್ಕೆ ಆಹಾರ ಸಾಮಗ್ರಿಗಳನ್ನು ತರುವೆವು ಮತ್ತು ನಮ್ಮ ಸಹೋದರನನ್ನು ಕಾಪಾಡುವೆವು. ಒಂದು ಒಂಟೆ ಹೊರುವ ಧಾನ್ಯಗಳನ್ನು ಹೆಚ್ಚಿಗೆ ತರುವೆವು. ಅದು ಬಹಳ ಸುಲಭದ ಅಳತೆಯಾಗಿದೆ.”[1]
[1] ಇದರ ಒಂದು ಅರ್ಥವೇನೆಂದರೆ ಅರಸನಿಗೆ ಒಂದು ಒಂಟೆ ಹೊರುವ ಧಾನ್ಯಗಳನ್ನು ಹೆಚ್ಚಿಗೆ ಕೊಡುವುದು ಕಷ್ಟದ ವಿಷಯವೇನಲ್ಲ. ಇನ್ನೊಂದು ಅರ್ಥವೇನೆಂದರೆ ನಾವು ಈಗಾಗಲೇ ತಂದಿರುವ ಧಾನ್ಯಗಳು ನಮಗೆ ಸುಲಭದಲ್ಲಿ ಸಿಕ್ಕಿದ ಧಾನ್ಯಗಳಾಗಿವೆ. ನಾವು ತಮ್ಮನನ್ನು ಕರೆದುಕೊಂಡು ಹೋದರೆ ನಮಗೆ ಇದಕ್ಕಿಂತಲೂ ಹೆಚ್ಚು ಧಾನ್ಯ ಸಿಗುತ್ತದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ لَنْ اُرْسِلَهٗ مَعَكُمْ حَتّٰی تُؤْتُوْنِ مَوْثِقًا مِّنَ اللّٰهِ لَتَاْتُنَّنِیْ بِهٖۤ اِلَّاۤ اَنْ یُّحَاطَ بِكُمْ ۚ— فَلَمَّاۤ اٰتَوْهُ مَوْثِقَهُمْ قَالَ اللّٰهُ عَلٰی مَا نَقُوْلُ وَكِیْلٌ ۟
ತಂದೆ ಹೇಳಿದರು: “ನೀವು ಅವನನ್ನು ನನ್ನ ಬಳಿಗೆ ವಾಪಸು ತರುತ್ತೀರಿ ಎಂದು ನೀವು ಅಲ್ಲಾಹನ ಹೆಸರಲ್ಲಿ ನನಗೆ ಖಾತ್ರಿ ನೀಡುವ ತನಕ ನಾನು ಅವನನ್ನು ನಿಮ್ಮ ಜೊತೆಗೆ ಕಳುಹಿಸುವುದೇ ಇಲ್ಲ. ಆದರೆ ನೀವು (ಅಪಾಯಗಳಿಂದ) ಸುತ್ತುವರಿಯಲಾಗುವ ಹೊರತು.” ಅವರು ತಂದೆಗೆ ಖಾತ್ರಿ ನೀಡಿದಾಗ ತಂದೆ ಹೇಳಿದರು: “ನಾವು ಹೇಳುತ್ತಿರುವ ಮಾತುಗಳಿಗೆ ಅಲ್ಲಾಹನೇ ಮೇಲ್ವಿಚಾರಕನು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ یٰبَنِیَّ لَا تَدْخُلُوْا مِنْ بَابٍ وَّاحِدٍ وَّادْخُلُوْا مِنْ اَبْوَابٍ مُّتَفَرِّقَةٍ ؕ— وَمَاۤ اُغْنِیْ عَنْكُمْ مِّنَ اللّٰهِ مِنْ شَیْءٍ ؕ— اِنِ الْحُكْمُ اِلَّا لِلّٰهِ ؕ— عَلَیْهِ تَوَكَّلْتُ ۚ— وَعَلَیْهِ فَلْیَتَوَكَّلِ الْمُتَوَكِّلُوْنَ ۟
ತಂದೆ ಹೇಳಿದರು: “ನನ್ನ ಪ್ರೀತಿಯ ಮಕ್ಕಳೇ! ನೀವು ಒಂದೇ ಬಾಗಿಲಿನಿಂದ ಪ್ರವೇಶ ಮಾಡಬೇಡಿ. ಬದಲಿಗೆ, ಬೇರೆ ಬೇರೆ ಬಾಗಿಲುಗಳಿಂದ ಪ್ರವೇಶ ಮಾಡಿರಿ. ಅಲ್ಲಾಹನ ಕಡೆಯಿಂದ ಬರುವ ಏನನ್ನೂ ನಿಮ್ಮಿಂದ ತಡೆಗಟ್ಟಲು ನನಗೆ ಸಾಧ್ಯವಿಲ್ಲ. ತೀರ್ಪು ನೀಡುವ ಅಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ನಾನು ಅವನಲ್ಲಿ ಭರವಸೆಯಿಟ್ಟಿದ್ದೇನೆ. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.”[1]
[1] ಸ್ಫುರದ್ರೂಪಿಗಳು ಮತ್ತು ಉತ್ತಮ ದೇಹದಾರ್ಢ್ಯವನ್ನು ಹೊಂದಿರುವ ತನ್ನ ಹನ್ನೊಂದು ಮಕ್ಕಳು ಒಟ್ಟೊಟ್ಟಿಗೆ ಪ್ರವೇಶ ಮಾಡುವಾಗ ಜನರು ಅವರನ್ನು ಕಂಡು ಬೆರಗಾಗುವರು ಮತ್ತು ಅಸೂಯೆಪಡುವರು. ಇದರಿಂದ ಅವರಿಗೆ ದೃಷ್ಟಿ ತಾಗುವ ಸಾಧ್ಯತೆಯಿದೆ. ಜನರ ದೃಷ್ಟಿಯಿಂದ ಅವರನ್ನು ಕಾಪಾಡಲು ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ಈ ಉಪಾಯವನ್ನು ಹೇಳಿದ್ದರು. ಆದರೆ ಇದರ ಹೊರತಾಗಿಯೂ ದೃಷ್ಟಿ ತಾಗಬೇಕೆಂದು ಅಲ್ಲಾಹನ ವಿಧಿಸಿದ್ದರೆ ಅದನ್ನು ತಡೆಗಟ್ಟಲು ಯಾರಿಗೂ ಸಾಧ್ಯವಿಲ್ಲ. ಇದು ಕೇವಲ ಒಂದು ಮುಂಜಾಗೃತಾ ಕ್ರಮ ಮಾತ್ರವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَمَّا دَخَلُوْا مِنْ حَیْثُ اَمَرَهُمْ اَبُوْهُمْ ؕ— مَا كَانَ یُغْنِیْ عَنْهُمْ مِّنَ اللّٰهِ مِنْ شَیْءٍ اِلَّا حَاجَةً فِیْ نَفْسِ یَعْقُوْبَ قَضٰىهَا ؕ— وَاِنَّهٗ لَذُوْ عِلْمٍ لِّمَا عَلَّمْنٰهُ وَلٰكِنَّ اَكْثَرَ النَّاسِ لَا یَعْلَمُوْنَ ۟۠
ಅವರ ತಂದೆ ಆದೇಶಿಸಿದ ಕಡೆಯಿಂದಲೇ ಅವರು ಪ್ರವೇಶ ಮಾಡಿದಾಗ, ಅಲ್ಲಾಹು ತೀರ್ಮಾನಿಸಿದ ಯಾವುದನ್ನೂ ಅವರಿಂದ ತಡೆಗಟ್ಟಲು ಅವರಿಗೆ (ಯಾಕೂಬರಿಗೆ) ಸಾಧ್ಯವಾಗಲಿಲ್ಲ. ಯಾಕೂಬರು ತಮ್ಮ ಮನಸ್ಸಿನಲ್ಲಿದ್ದ ಒಂದು ಆಸೆಯನ್ನು ನೆರವೇರಿಸಿದರು ಎಂದು ಮಾತ್ರ. ನಿಶ್ಚಯವಾಗಿಯೂ ಅವರು ನಾವು ಅವರಿಗೆ ಕಲಿಸಿಕೊಟ್ಟ ಜ್ಞಾನದಿಂದಾಗಿ ಒಬ್ಬ ವಿದ್ವಾಂಸರಾಗಿದ್ದಾರೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَمَّا دَخَلُوْا عَلٰی یُوْسُفَ اٰوٰۤی اِلَیْهِ اَخَاهُ قَالَ اِنِّیْۤ اَنَا اَخُوْكَ فَلَا تَبْتَىِٕسْ بِمَا كَانُوْا یَعْمَلُوْنَ ۟
ಅವರು (ಸಹೋದರರು) ಯೂಸುಫರ ಬಳಿಗೆ ತೆರಳಿದಾಗ, ಯೂಸುಫ್ ತಮ್ಮನನ್ನು ಬಳಿಯಲ್ಲಿ ಕೂರಿಸಿ ಹೇಳಿದರು: “ನಿಜಕ್ಕೂ ನಾನೇ ನಿನ್ನ ಅಣ್ಣ. ಆದ್ದರಿಂದ ಅವರು ಮಾಡುವ ಕೆಲಸಗಳಿಂದ ಬೇಸರಪಡಬೇಡ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا جَهَّزَهُمْ بِجَهَازِهِمْ جَعَلَ السِّقَایَةَ فِیْ رَحْلِ اَخِیْهِ ثُمَّ اَذَّنَ مُؤَذِّنٌ اَیَّتُهَا الْعِیْرُ اِنَّكُمْ لَسٰرِقُوْنَ ۟
ನಂತರ ಅವರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಸಜ್ಜುಗೊಳಿಸಿದಾಗ ಯೂಸುಫ್ ತಮ್ಮನ ಹಸುಬೆಯಲ್ಲಿ ಪಾನಪಾತ್ರೆಯನ್ನು (ಧಾನ್ಯಗಳನ್ನು ಅಳೆಯುವ ಪಾತ್ರೆ) ಹಾಕಿದರು. ನಂತರ ಒಬ್ಬ ಉದ್ಘೋಷಕ ಕೂಗಿ ಹೇಳಿದನು: “ಓ ದಾರಿಗ ತಂಡದವರೇ! ನಿಜಕ್ಕೂ ನೀವು ಕಳ್ಳರೇ ಆಗಿದ್ದೀರಿ!”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا وَاَقْبَلُوْا عَلَیْهِمْ مَّاذَا تَفْقِدُوْنَ ۟
ಅವರು ಆತನ ಕಡೆಗೆ ತಿರುಗಿ ಕೇಳಿದರು: “ನಿಮ್ಮಲ್ಲಿ ಏನು ಕಾಣೆಯಾಗಿದೆ?”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا نَفْقِدُ صُوَاعَ الْمَلِكِ وَلِمَنْ جَآءَ بِهٖ حِمْلُ بَعِیْرٍ وَّاَنَا بِهٖ زَعِیْمٌ ۟
ಅವರು ಹೇಳಿದರು: “ಅರಸನ ಪಾನಪಾತ್ರೆ ಕಾಣೆಯಾಗಿದೆ. ಯಾರು ಅದನ್ನು ತಂದು ಕೊಡುತ್ತಾರೋ ಅವನಿಗೆ ಒಂದು ಒಂಟೆ ಹೊರುವಷ್ಟು ಧಾನ್ಯವನ್ನು ನೀಡಲಾಗುವುದು. ಅದರ ಹೊಣೆಯನ್ನು ನಾನು ವಹಿಸಿಕೊಂಡಿದ್ದೇನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا تَاللّٰهِ لَقَدْ عَلِمْتُمْ مَّا جِئْنَا لِنُفْسِدَ فِی الْاَرْضِ وَمَا كُنَّا سٰرِقِیْنَ ۟
ಅವರು ಹೇಳಿದರು: “ಅಲ್ಲಾಹನಾಣೆ! ನಾವು ರಾಜ್ಯದಲ್ಲಿ ಕಿಡಿಗೇಡಿತನ ಮಾಡಲು ಬಂದವರಲ್ಲ ಮತ್ತು ನಾವು ಕಳ್ಳರೂ ಅಲ್ಲ ಎಂದು ನಿಮಗೆ ಚೆನ್ನಾಗಿ ತಿಳಿದಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا فَمَا جَزَآؤُهٗۤ اِنْ كُنْتُمْ كٰذِبِیْنَ ۟
ಅವರು ಕೇಳಿದರು: “ನೀವು ಹೇಳುವ ಮಾತು ಸುಳ್ಳಾಗಿ (ನೀವೇ ಕಳ್ಳರಾಗಿದ್ದರೆ) ಅದಕ್ಕೆ ನೀಡಲಾಗುವ ಶಿಕ್ಷೆಯೇನು?”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا جَزَآؤُهٗ مَنْ وُّجِدَ فِیْ رَحْلِهٖ فَهُوَ جَزَآؤُهٗ ؕ— كَذٰلِكَ نَجْزِی الظّٰلِمِیْنَ ۟
ಅವರು ಉತ್ತರಿಸಿದರು: “ಅದಕ್ಕಿರುವ ಶಿಕ್ಷೆಯೇನೆಂದರೆ ಯಾರ ಹಸುಬೆಯಲ್ಲಿ ಅದು ಪತ್ತೆಯಾಗುವುದೋ ಅವನನ್ನೇ ಅದಕ್ಕೆ ಬದಲಿಯಾಗಿ ಹಿಡಿಯಬೇಕು. ಅಕ್ರಮಿಗಳಿಗೆ ನಾವು ಹೀಗೆಯೇ ಶಿಕ್ಷೆ ನೀಡುತ್ತೇವೆ.”[1]
[1] ಅಂದರೆ ಕಳ್ಳನನ್ನು ಅವನು ಯಾರಿಂದ ಕಳ್ಳತನ ಮಾಡಿದನೋ ಅವನ ಸುಪರ್ದಿಗೆ ಬಿಡಲಾಗುತ್ತದೆ. ಇದು ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ರವರ ಶರಿಯತ್‌ನಲ್ಲಿರುವ (ಧರ್ಮಸಂಹಿತೆಯಲ್ಲಿರುವ) ಶಿಕ್ಷೆಯಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَبَدَاَ بِاَوْعِیَتِهِمْ قَبْلَ وِعَآءِ اَخِیْهِ ثُمَّ اسْتَخْرَجَهَا مِنْ وِّعَآءِ اَخِیْهِ ؕ— كَذٰلِكَ كِدْنَا لِیُوْسُفَ ؕ— مَا كَانَ لِیَاْخُذَ اَخَاهُ فِیْ دِیْنِ الْمَلِكِ اِلَّاۤ اَنْ یَّشَآءَ اللّٰهُ ؕ— نَرْفَعُ دَرَجٰتٍ مَّنْ نَّشَآءُ ؕ— وَفَوْقَ كُلِّ ذِیْ عِلْمٍ عَلِیْمٌ ۟
ತಮ್ಮನ ಚೀಲವನ್ನು ತಪಾಸಣೆ ಮಾಡುವುದಕ್ಕೆ ಮುನ್ನ ಯೂಸುಫ್ ಅವರ (ಸಹೋದರರ) ಚೀಲಗಳನ್ನು ತಪಾಸಣೆ ಮಾಡಲು ಆರಂಭಿಸಿದರು. ನಂತರ ಅದನ್ನು ತಮ್ಮನ ಚೀಲದಿಂದ ಹೊರತೆಗೆದರು. ನಾವು ಯೂಸುಫರಿಗಾಗಿ ಈ ರೀತಿಯಲ್ಲಿ ತಂತ್ರಗಾರಿಕೆ ಮಾಡಿದೆವು. ಏಕೆಂದರೆ, ಅರಸನ ಕಾನೂನಿನ ಪ್ರಕಾರ ಅವರಿಗೆ ತಮ್ಮನನ್ನು ವಶಕ್ಕೆ ಪಡೆಯಲಾಗುತ್ತಿರಲಿಲ್ಲ[1]—ಅಲ್ಲಾಹು ಇಚ್ಛಿಸಿದರೆ ಹೊರತು. ನಾವು ಇಚ್ಛಿಸುವವರ ಸ್ಥಾನಮಾನಗಳನ್ನು ನಾವು ಎತ್ತರಕ್ಕೇರಿಸುತ್ತೇವೆ. ಪ್ರತಿಯೊಬ್ಬ ಜ್ಞಾನಿಯ ಮೇಲೆ ಇನ್ನೊಬ್ಬ ಮಹಾಜ್ಞಾನಿಯಿದ್ದಾನೆ.
[1] ಅಂದರೆ ಈಜಿಪ್ಟ್ ದೇಶದ ಕಾನೂನು ಪ್ರಕಾರ ಈ ರೀತಿಯಲ್ಲಿ ತಮ್ಮನನ್ನು ವಶಕ್ಕೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಯೂಸುಫ್ (ಅವರ ಮೇಲ ಶಾಂತಿಯಿರಲಿ) ಅವರಲ್ಲಿ ಅವರ ಕಾನೂನಿನ ಬಗ್ಗೆ ಕೇಳಿ ಅದರಂತೆಯೇ ತೀರ್ಪು ನೀಡಿದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْۤا اِنْ یَّسْرِقْ فَقَدْ سَرَقَ اَخٌ لَّهٗ مِنْ قَبْلُ ۚ— فَاَسَرَّهَا یُوْسُفُ فِیْ نَفْسِهٖ وَلَمْ یُبْدِهَا لَهُمْ ۚ— قَالَ اَنْتُمْ شَرٌّ مَّكَانًا ۚ— وَاللّٰهُ اَعْلَمُ بِمَا تَصِفُوْنَ ۟
ಸಹೋದರರು ಹೇಳಿದರು: “ಈತ ಕಳ್ಳತನ ಮಾಡಿದ್ದರೆ (ಅದರಲ್ಲಿ ಅಚ್ಚರಿಪಡುವಂತದ್ದೇನೂ ಇಲ್ಲ). ಏಕೆಂದರೆ ಇದಕ್ಕೆ ಮೊದಲು ಈತನ ಅಣ್ಣನೂ ಕಳ್ಳತನ ಮಾಡಿದ್ದ.” ಯೂಸುಫ್ ಅದನ್ನು ಮನಸ್ಸಿನಲ್ಲೇ ಬಚ್ಚಿಟ್ಟುಕೊಂಡರು. ಅದನ್ನು ಅವರ ಮುಂದೆ ಬಹಿರಂಗಪಡಿಸಲಿಲ್ಲ. ಯೂಸುಫ್ (ಸ್ವಗತವಾಗಿ) ಹೇಳಿದರು: “ನೀವು ನಿಕೃಷ್ಟ ಸ್ಥಾನದಲ್ಲಿದ್ದೀರಿ. ನೀವು ವರ್ಣಿಸುವ ಈ ವಿಷಯದ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا یٰۤاَیُّهَا الْعَزِیْزُ اِنَّ لَهٗۤ اَبًا شَیْخًا كَبِیْرًا فَخُذْ اَحَدَنَا مَكَانَهٗ ۚ— اِنَّا نَرٰىكَ مِنَ الْمُحْسِنِیْنَ ۟
ಅವರು ಹೇಳಿದರು: “ಓ ಅಝೀಝರೇ! ಅವನಿಗೆ ಒಬ್ಬ ವಯೋವೃದ್ಧ ತಂದೆಯಿದ್ದಾರೆ. ಆದ್ದರಿಂದ ಅವನ ಸ್ಥಾನದಲ್ಲಿ ನಮ್ಮಲ್ಲೊಬ್ಬನನ್ನು ಹಿಡಿಯಿರಿ. ನಿಜಕ್ಕೂ ನಿಮ್ಮನ್ನು ನಾವು ನೀತಿವಂತರಂತೆ ಕಾಣುತ್ತಿದ್ದೇವೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ مَعَاذَ اللّٰهِ اَنْ نَّاْخُذَ اِلَّا مَنْ وَّجَدْنَا مَتَاعَنَا عِنْدَهٗۤ ۙ— اِنَّاۤ اِذًا لَّظٰلِمُوْنَ ۟۠
ಯೂಸುಫ್ ಹೇಳಿದರು: “ಅಲ್ಲಾಹನಿಗೆ ಶರಣು! ನಾವು ನಮ್ಮ ವಸ್ತುವನ್ನು ಯಾರಲ್ಲಿ ಪತ್ತೆ ಮಾಡಿದೆವೋ ಅವನನ್ನು ಬಿಟ್ಟು ಬೇರೊಬ್ಬನನ್ನು ಹಿಡಿಯುವುದೇ? ಹಾಗೇನಾದರೂ ಆದರೆ ನಾವು ನಿಜಕ್ಕೂ ಅಕ್ರಮಿಗಳಾಗುವೆವು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا اسْتَیْـَٔسُوْا مِنْهُ خَلَصُوْا نَجِیًّا ؕ— قَالَ كَبِیْرُهُمْ اَلَمْ تَعْلَمُوْۤا اَنَّ اَبَاكُمْ قَدْ اَخَذَ عَلَیْكُمْ مَّوْثِقًا مِّنَ اللّٰهِ وَمِنْ قَبْلُ مَا فَرَّطْتُّمْ فِیْ یُوْسُفَ ۚ— فَلَنْ اَبْرَحَ الْاَرْضَ حَتّٰی یَاْذَنَ لِیْۤ اَبِیْۤ اَوْ یَحْكُمَ اللّٰهُ لِیْ ۚ— وَهُوَ خَیْرُ الْحٰكِمِیْنَ ۟
ನಂತರ ಅವರು ತಮ್ಮನ ಬಗ್ಗೆ ನಿರಾಶರಾದಾಗ, ಏಕಾಂತ ಸ್ಥಳದಲ್ಲಿ ಕುಳಿತು ಸಮಾಲೋಚನೆ ಮಾಡಿದರು. ಅವರಲ್ಲಿ ಹಿರಿಯವನು ಹೇಳಿದನು: “ನಿಮ್ಮ ತಂದೆ ನಿಮ್ಮಿಂದ ಅಲ್ಲಾಹನ ಹೆಸರಿನಲ್ಲಿ ಖಾತ್ರಿ ಪಡೆದದ್ದು ಮತ್ತು ಇದಕ್ಕೆ ಮೊದಲು ನೀವು ಯೂಸುಫರ ವಿಷಯದಲ್ಲಿ ತಪ್ಪೆಸಗಿದ್ದು ನಿಮಗೆ ತಿಳಿದಿಲ್ಲವೇ? ಆದ್ದರಿಂದ ನನ್ನ ತಂದೆ ನನಗೆ ಅಪ್ಪಣೆ ನೀಡುವ ತನಕ ಅಥವಾ ಅಲ್ಲಾಹು ನನ್ನ ವಿಷಯದಲ್ಲಿ ತೀರ್ಪು ನೀಡುವ ತನಕ ನಾನು ಈ ಸ್ಥಳದಿಂದ ಕದಲುವುದೇ ಇಲ್ಲ. ತೀರ್ಪು ನೀಡುವುದರಲ್ಲಿ ಅವನು ಅತಿಶ್ರೇಷ್ಠನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِرْجِعُوْۤا اِلٰۤی اَبِیْكُمْ فَقُوْلُوْا یٰۤاَبَانَاۤ اِنَّ ابْنَكَ سَرَقَ ۚ— وَمَا شَهِدْنَاۤ اِلَّا بِمَا عَلِمْنَا وَمَا كُنَّا لِلْغَیْبِ حٰفِظِیْنَ ۟
ನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ: ಅಪ್ಪಾ! ನಿಜಕ್ಕೂ ನಿಮ್ಮ ಮಗ ಕಳ್ಳತನ ಮಾಡಿದ್ದಾನೆ. ನಮಗೇನು ತಿಳಿದಿದೆಯೋ ಅದನ್ನೇ ನಾವು ಸಾಕ್ಷಿ ನುಡಿದಿದ್ದೇವೆ. ನಮಗಂತೂ ಅದೃಶ್ಯ ವಿಷಯಗಳ ಬಗ್ಗೆ ಸಾಕ್ಷಿ ನುಡಿಯಲು ಸಾಧ್ಯವಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَسْـَٔلِ الْقَرْیَةَ الَّتِیْ كُنَّا فِیْهَا وَالْعِیْرَ الَّتِیْۤ اَقْبَلْنَا فِیْهَا ؕ— وَاِنَّا لَصٰدِقُوْنَ ۟
ನಾವು ತೆರಳಿದ್ದ ಆ ನಗರದ ಜನರೊಡನೆ ಮತ್ತು ನಾವು ಜೊತೆಯಾಗಿ ಬಂದ ಆ ದಾರಿಗ ತಂಡದೊಡನೆ ಕೇಳಿರಿ. ಖಂಡಿತವಾಗಿಯೂ ನಾವು ಸತ್ಯವನ್ನೇ ಹೇಳುತ್ತಿದ್ದೇವೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ بَلْ سَوَّلَتْ لَكُمْ اَنْفُسُكُمْ اَمْرًا ؕ— فَصَبْرٌ جَمِیْلٌ ؕ— عَسَی اللّٰهُ اَنْ یَّاْتِیَنِیْ بِهِمْ جَمِیْعًا ؕ— اِنَّهٗ هُوَ الْعَلِیْمُ الْحَكِیْمُ ۟
ತಂದೆ ಹೇಳಿದರು: “ಅಲ್ಲ, ವಾಸ್ತವವಾಗಿ ನೀವು ನಿಮ್ಮ ಮನಸ್ಸಿನಲ್ಲಿಯೇ ಒಂದು ವಿಷಯವನ್ನು ಕಲ್ಪಿಸಿ ತಂದಿದ್ದೀರಿ. ಆದ್ದರಿಂದ ತಾಳ್ಮೆಯಿಂದಿರುವುದೇ ಉತ್ತಮ. ಅಲ್ಲಾಹು ಅವರೆಲ್ಲರನ್ನೂ ನನ್ನ ಬಳಿಗೆ ಕರೆತರಲೂಬಹುದು. ನಿಶ್ಚಯವಾಗಿಯೂ ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَتَوَلّٰی عَنْهُمْ وَقَالَ یٰۤاَسَفٰی عَلٰی یُوْسُفَ وَابْیَضَّتْ عَیْنٰهُ مِنَ الْحُزْنِ فَهُوَ كَظِیْمٌ ۟
ನಂತರ ಅವರು (ಯಾಕೂಬ್) ಮಕ್ಕಳಿಂದ ತಿರುಗಿ ನಡೆಯುತ್ತಾ, “ಅಯ್ಯೋ ಯೂಸುಫ್!” ಎಂದು ಮರುಗಿದರು. ದುಃಖದಿಂದ ಅವರ ಕಣ್ಣಿನ ಪಾಪೆಗಳು ಬಿಳಿಯಾಗಿದ್ದವು. ಅವರು ದುಃಖವನ್ನು ನುಂಗಿಕೊಳ್ಳುತ್ತಿದ್ದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا تَاللّٰهِ تَفْتَؤُا تَذْكُرُ یُوْسُفَ حَتّٰی تَكُوْنَ حَرَضًا اَوْ تَكُوْنَ مِنَ الْهٰلِكِیْنَ ۟
ಮಕ್ಕಳು ಹೇಳಿದರು: “ಅಲ್ಲಾಹನಾಣೆ! ನೀವು ಸಂಪೂರ್ಣ ಸೊರಗಿ ಬಿಡುವ ತನಕ ಅಥವಾ ಪ್ರಾಣ ಕಳೆದುಕೊಳ್ಳುವ ತನಕ ಯೂಸುಫರನ್ನು ನೆನೆಯುತ್ತಲೇ ಇರುವಿರಿ!”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ اِنَّمَاۤ اَشْكُوْا بَثِّیْ وَحُزْنِیْۤ اِلَی اللّٰهِ وَاَعْلَمُ مِنَ اللّٰهِ مَا لَا تَعْلَمُوْنَ ۟
ತಂದೆ ಹೇಳಿದರು: “ನಾನು ನನ್ನ ನೋವು ಮತ್ತು ದುಃಖವನ್ನು ಅಲ್ಲಾಹನ ಮುಂದೆ ಮಾತ್ರ ತೋಡಿಕೊಳ್ಳುತ್ತೇನೆ. ನನಗೆ ಅಲ್ಲಾಹನಿಂದ ನೀವು ತಿಳಿಯದ ವಿಷಯಗಳು ತಿಳಿದಿವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یٰبَنِیَّ اذْهَبُوْا فَتَحَسَّسُوْا مِنْ یُّوْسُفَ وَاَخِیْهِ وَلَا تَایْـَٔسُوْا مِنْ رَّوْحِ اللّٰهِ ؕ— اِنَّهٗ لَا یَایْـَٔسُ مِنْ رَّوْحِ اللّٰهِ اِلَّا الْقَوْمُ الْكٰفِرُوْنَ ۟
ನನ್ನ ಪ್ರೀತಿಯ ಮಕ್ಕಳೇ! ಹೊರಡಿ. ಯೂಸುಫ್ ಮತ್ತು ಅವನ ತಮ್ಮನನ್ನು ಹುಡುಕಿರಿ. ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಹೊರತು ಬೇರೆ ಯಾರೂ ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗುವುದಿಲ್ಲ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا دَخَلُوْا عَلَیْهِ قَالُوْا یٰۤاَیُّهَا الْعَزِیْزُ مَسَّنَا وَاَهْلَنَا الضُّرُّ وَجِئْنَا بِبِضَاعَةٍ مُّزْجٰىةٍ فَاَوْفِ لَنَا الْكَیْلَ وَتَصَدَّقْ عَلَیْنَا ؕ— اِنَّ اللّٰهَ یَجْزِی الْمُتَصَدِّقِیْنَ ۟
ನಂತರ ಅವರು ಯೂಸುಫರ ಬಳಿಗೆ ತೆರಳಿ ಹೇಳಿದರು: “ಓ ಅಝೀಝರೇ! ನಮಗೂ ನಮ್ಮ ಕುಟುಂಬಕ್ಕೂ ತೊಂದರೆಯಾಗಿದೆ. ನಾವು ಕಳಪೆ ಸರಕುಗಳನ್ನು ತಂದಿದ್ದೇವೆ. ನಮಗೆ (ಧಾನ್ಯಗಳನ್ನು) ಪೂರ್ಣವಾಗಿ ಅಳೆದುಕೊಡಿ. ನಮಗೆ ದಾನ ಮಾಡಿ. ದಾನ ಮಾಡುವವರಿಗೆ ಅಲ್ಲಾಹು ಖಂಡಿತ ಪ್ರತಿಫಲವನ್ನು ನೀಡುತ್ತಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ هَلْ عَلِمْتُمْ مَّا فَعَلْتُمْ بِیُوْسُفَ وَاَخِیْهِ اِذْ اَنْتُمْ جٰهِلُوْنَ ۟
ಯೂಸುಫ್ ಹೇಳಿದರು: “ನೀವು ಅವಿವೇಕಿಗಳಾಗಿದ್ದಾಗ ನೀವು ಯೂಸುಫ್ ಮತ್ತು ಅವನ ತಮ್ಮನಿಗೆ ಏನು ಮಾಡಿದ್ದೇರೆಂದು ನಿಮಗೆ ತಿಳಿದಿದೆಯೇ?”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْۤا ءَاِنَّكَ لَاَنْتَ یُوْسُفُ ؕ— قَالَ اَنَا یُوْسُفُ وَهٰذَاۤ اَخِیْ ؗ— قَدْ مَنَّ اللّٰهُ عَلَیْنَا ؕ— اِنَّهٗ مَنْ یَّتَّقِ وَیَصْبِرْ فَاِنَّ اللّٰهَ لَا یُضِیْعُ اَجْرَ الْمُحْسِنِیْنَ ۟
ಅವರು ಕೇಳಿದರು: “ನಿಜಕ್ಕೂ ಯೂಸುಫ್ ನೀವೇ ಏನು?” ಯೂಸುಫ್ ಹೇಳಿದರು: “ಹೌದು, ನಾನೇ ಯೂಸುಫ್. ಇದು ನನ್ನ ತಮ್ಮ. ಅಲ್ಲಾಹು ನಮಗೆ ಉಪಕಾರ ಮಾಡಿದ್ದಾನೆ. ನಿಜವಾಗಿಯೂ ಅಲ್ಲಾಹನನ್ನು ಭಯಪಡುವವರು ಮತ್ತು ತಾಳ್ಮೆಯಿಂದಿರುವವರು ಯಾರೋ—ಅಂತಹ ಒಳಿತು ಮಾಡುವ ಜನರ ಪ್ರತಿಫಲವನ್ನು ಅಲ್ಲಾಹು ಖಂಡಿತ ವ್ಯರ್ಥಗೊಳಿಸುವುದಿಲ್ಲ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا تَاللّٰهِ لَقَدْ اٰثَرَكَ اللّٰهُ عَلَیْنَا وَاِنْ كُنَّا لَخٰطِـِٕیْنَ ۟
ಅವರು ಹೇಳಿದರು: “ಅಲ್ಲಾಹನಾಣೆ! ಅಲ್ಲಾಹು ನಮಗಿಂತಲೂ ಹೆಚ್ಚು ನಿನಗೆ ಶ್ರೇಷ್ಠತೆಯನ್ನು ನೀಡಿದ್ದಾನೆ. ನಾವಂತೂ ಖಂಡಿತ ತಪ್ಪಿತಸ್ಥರಾಗಿದ್ದೆವು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ لَا تَثْرِیْبَ عَلَیْكُمُ الْیَوْمَ ؕ— یَغْفِرُ اللّٰهُ لَكُمْ ؗ— وَهُوَ اَرْحَمُ الرّٰحِمِیْنَ ۟
ಯೂಸುಫ್ ಹೇಳಿದರು: “ಇಂದು ನಿಮ್ಮ ಮೇಲೆ ಯಾವುದೇ ದೋಷಾರೋಪಣೆಯಿಲ್ಲ. ಅಲ್ಲಾಹು ನಿಮ್ಮನ್ನು ಕ್ಷಮಿಸಲಿ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِذْهَبُوْا بِقَمِیْصِیْ هٰذَا فَاَلْقُوْهُ عَلٰی وَجْهِ اَبِیْ یَاْتِ بَصِیْرًا ۚ— وَاْتُوْنِیْ بِاَهْلِكُمْ اَجْمَعِیْنَ ۟۠
ನನ್ನ ಈ ಅಂಗಿಯನ್ನು ತೆಗೆದುಕೊಂಡು ಹೋಗಿ ನನ್ನ ತಂದೆಯ ಮುಖದ ಮೇಲೆ ಎಸೆಯಿರಿ. ಆಗ ಅವರಿಗೆ ದೃಷ್ಟಿ ಮರಳಿ ಬರುತ್ತದೆ. ನಿಮ್ಮ ಸಂಪೂರ್ಣ ಕುಟುಂಬವನ್ನು ಕರೆದುಕೊಂಡು ಬನ್ನಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَمَّا فَصَلَتِ الْعِیْرُ قَالَ اَبُوْهُمْ اِنِّیْ لَاَجِدُ رِیْحَ یُوْسُفَ لَوْلَاۤ اَنْ تُفَنِّدُوْنِ ۟
ದಾರಿಗ ತಂಡವು (ಈಜಿಪ್ಟಿನಿಂದ) ನಿರ್ಗಮಿಸಿದಾಗ, ಇತ್ತ ಅವರ ತಂದೆ ಹೇಳಿದರು: “ನಿಜಕ್ಕೂ ನನಗೆ ಯೂಸುಫನ ಪರಿಮಳ ಬರುತ್ತಿದೆ. ನೀವು ನನ್ನನ್ನು ಹುಚ್ಚನೆಂದು ಭಾವಿಸದಿದ್ದರೆ!”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا تَاللّٰهِ اِنَّكَ لَفِیْ ضَلٰلِكَ الْقَدِیْمِ ۟
ಅವರ ಬಳಿಯಿದ್ದವರು ಹೇಳಿದರು: “ಅಲ್ಲಾಹನಾಣೆ! ನಿಜಕ್ಕೂ ನೀವು ನಿಮ್ಮ ಹಳೇ ಭ್ರಮೆಯಲ್ಲೇ ಇದ್ದೀರಿ”.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّاۤ اَنْ جَآءَ الْبَشِیْرُ اَلْقٰىهُ عَلٰی وَجْهِهٖ فَارْتَدَّ بَصِیْرًا ۚؕ— قَالَ اَلَمْ اَقُلْ لَّكُمْ ۚ— اِنِّیْۤ اَعْلَمُ مِنَ اللّٰهِ مَا لَا تَعْلَمُوْنَ ۟
ನಂತರ ಸುವಾರ್ತೆ ನೀಡುವವನು ಬಂದು ಆ ಅಂಗಿಯನ್ನು ಅವರ ಮುಖದ ಮೇಲೆ ಎಸೆದಾಗ ಅವರಿಗೆ ದೃಷ್ಟಿ ಮರಳಿ ಬಂತು. ಅವರು ಹೇಳಿದರು: “ನಾನು ಅಲ್ಲಾಹನಿಂದ ನೀವು ತಿಳಿಯದಿರುವ ವಿಷಯಗಳನ್ನು ತಿಳಿದಿದ್ದೇನೆಂದು ನಿಮಗೆ ಹೇಳಲಿಲ್ಲವೇ?”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا یٰۤاَبَانَا اسْتَغْفِرْ لَنَا ذُنُوْبَنَاۤ اِنَّا كُنَّا خٰطِـِٕیْنَ ۟
ಮಕ್ಕಳು ಹೇಳಿದರು: “ಅಪ್ಪಾ! ನಮ್ಮ ತಪ್ಪಿಗಾಗಿ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಜಕ್ಕೂ ನಾವು ಪಾಪಿಗಳಾಗಿದ್ದೆವು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ سَوْفَ اَسْتَغْفِرُ لَكُمْ رَبِّیْ ؕ— اِنَّهٗ هُوَ الْغَفُوْرُ الرَّحِیْمُ ۟
ತಂದೆ ಹೇಳಿದರು: “ನಾನು ಸದ್ಯವೇ ನಿಮಗೋಸ್ಕರ ನನ್ನ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸುತ್ತೇನೆ. ನಿಜಕ್ಕೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَلَمَّا دَخَلُوْا عَلٰی یُوْسُفَ اٰوٰۤی اِلَیْهِ اَبَوَیْهِ وَقَالَ ادْخُلُوْا مِصْرَ اِنْ شَآءَ اللّٰهُ اٰمِنِیْنَ ۟ؕ
ನಂತರ ಅವರೆಲ್ಲರೂ ಯೂಸುಫರ ಬಳಿಗೆ ತೆರಳಿದಾಗ ಅವರು ತಮ್ಮ ತಂದೆ-ತಾಯಿಯನ್ನು ತಮ್ಮ ಬಳಿಗೆ ಸೆಳೆದುಕೊಂಡರು. ಅವರು ಹೇಳಿದರು: “ಅಲ್ಲಾಹು ಇಚ್ಛಿಸಿದರೆ ಸುರಕ್ಷಿತವಾಗಿ ಈಜಿಪ್ಟನ್ನು ಪ್ರವೇಶಿಸಿರಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَرَفَعَ اَبَوَیْهِ عَلَی الْعَرْشِ وَخَرُّوْا لَهٗ سُجَّدًا ۚ— وَقَالَ یٰۤاَبَتِ هٰذَا تَاْوِیْلُ رُءْیَایَ مِنْ قَبْلُ ؗ— قَدْ جَعَلَهَا رَبِّیْ حَقًّا ؕ— وَقَدْ اَحْسَنَ بِیْۤ اِذْ اَخْرَجَنِیْ مِنَ السِّجْنِ وَجَآءَ بِكُمْ مِّنَ الْبَدْوِ مِنْ بَعْدِ اَنْ نَّزَغَ الشَّیْطٰنُ بَیْنِیْ وَبَیْنَ اِخْوَتِیْ ؕ— اِنَّ رَبِّیْ لَطِیْفٌ لِّمَا یَشَآءُ ؕ— اِنَّهٗ هُوَ الْعَلِیْمُ الْحَكِیْمُ ۟
ಅವರು ತಮ್ಮ ತಂದೆ-ತಾಯಿಯನ್ನು ಸಿಂಹಾಸನಕ್ಕೇರಿಸಿ ಕೂರಿಸಿದರು. ಅವರೆಲ್ಲರೂ ಯೂಸುಫರ ಮುಂದೆ ಸಾಷ್ಟಾಂಗ ಮಾಡುತ್ತಾ ಬಿದ್ದರು. ಯೂಸುಫ್ ಹೇಳಿದರು: “ಅಪ್ಪಾಜಿ! ಇದೇ ನಾನು ಆವತ್ತು ಕಂಡ ಕನಸಿನ ವ್ಯಾಖ್ಯಾನ. ನನ್ನ ಪರಿಪಾಲಕನು (ಅಲ್ಲಾಹು) ಅದನ್ನು ನಿಜಗೊಳಿಸಿದ್ದಾನೆ. ನನ್ನನ್ನು ಕಾರಾಗೃಹದಿಂದ ಹೊರತಂದಾಗ, ಮತ್ತು ನನ್ನ ಹಾಗೂ ನನ್ನ ಸಹೋದರರ ಮಧ್ಯೆ ಶೈತಾನನು ದ್ವೇಷ ಮೂಡಿಸಿದ ನಂತರವೂ ನಿಮ್ಮನ್ನು ಮರುಭೂಮಿಯಿಂದ ಇಲ್ಲಿಗೆ ಕರೆತಂದಾಗ ಅವನು ನನಗೆ ಬಹಳ ಉಪಕಾರ ಮಾಡಿದ್ದಾನೆ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವನು ಬಯಸುವುದನ್ನು ಬಹಳ ನಾಜೂಕಾಗಿ ನಿರ್ವಹಿಸುತ್ತಾನೆ. ನಿಜಕ್ಕೂ ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
رَبِّ قَدْ اٰتَیْتَنِیْ مِنَ الْمُلْكِ وَعَلَّمْتَنِیْ مِنْ تَاْوِیْلِ الْاَحَادِیْثِ ۚ— فَاطِرَ السَّمٰوٰتِ وَالْاَرْضِ ۫— اَنْتَ وَلِیّٖ فِی الدُّنْیَا وَالْاٰخِرَةِ ۚ— تَوَفَّنِیْ مُسْلِمًا وَّاَلْحِقْنِیْ بِالصّٰلِحِیْنَ ۟
“ಓ ನನ್ನ ಪರಿಪಾಲಕನೇ! ನೀನು ನನಗೆ ಸಾಮ್ರಾಜ್ಯವನ್ನು ನೀಡಿದೆ ಮತ್ತು ಕನಸಿನ ವ್ಯಾಖ್ಯಾನಗಳನ್ನು ಕಲಿಸಿಕೊಟ್ಟೆ. ಭೂಮ್ಯಾಕಾಶಗಳ ಸೃಷ್ಟಿಕರ್ತನೇ! ಇಹಲೋಕದಲ್ಲೂ ಪರಲೋಕದಲ್ಲೂ ನೀನೇ ನನ್ನ ರಕ್ಷಕ. ಮುಸ್ಲಿಮನಾಗಿರುವ ಸ್ಥಿತಿಯಲ್ಲೇ ನನ್ನ ಪ್ರಾಣವನ್ನು ವಶಪಡಿಸು ಮತ್ತು ನನ್ನನ್ನು ನೀತಿವಂತರೊಡನೆ ಸೇರಿಸು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ذٰلِكَ مِنْ اَنْۢبَآءِ الْغَیْبِ نُوْحِیْهِ اِلَیْكَ ۚ— وَمَا كُنْتَ لَدَیْهِمْ اِذْ اَجْمَعُوْۤا اَمْرَهُمْ وَهُمْ یَمْكُرُوْنَ ۟
(ಪ್ರವಾದಿಯವರೇ) ಇವೆಲ್ಲವೂ ಅದೃಶ್ಯ ಸಮಾಚಾರಗಳಲ್ಲಿ ಸೇರಿದ್ದಾಗಿವೆ. ನಾವು ನಿಮಗೆ ಇದನ್ನು ದೇವವಾಣಿಯ ಮೂಲಕ ತಿಳಿಸುತ್ತಿದ್ದೇವೆ. ಅವರು ತಮ್ಮ ಯೋಜನೆಯನ್ನು ರೂಪಿಸಿ ಒಮ್ಮತದಿಂದ ನಿರ್ಧರಿಸಿದಾಗ ನೀವು ಅವರ ಬಳಿಯಲ್ಲಿರಲಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَاۤ اَكْثَرُ النَّاسِ وَلَوْ حَرَصْتَ بِمُؤْمِنِیْنَ ۟
ನೀವು ಎಷ್ಟೇ ಹಂಬಲಿಸಿದರೂ ಜನರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا تَسْـَٔلُهُمْ عَلَیْهِ مِنْ اَجْرٍ ؕ— اِنْ هُوَ اِلَّا ذِكْرٌ لِّلْعٰلَمِیْنَ ۟۠
ನೀವು ಇದಕ್ಕಾಗಿ ಅವರೊಡನೆ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಇದು ಸರ್ವಲೋಕದವರಿಗೆ ಒಂದು ಉಪದೇಶ ಮಾತ್ರವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَكَاَیِّنْ مِّنْ اٰیَةٍ فِی السَّمٰوٰتِ وَالْاَرْضِ یَمُرُّوْنَ عَلَیْهَا وَهُمْ عَنْهَا مُعْرِضُوْنَ ۟
ಭೂಮ್ಯಾಕಾಶಗಳಲ್ಲಿ ಎಷ್ಟೋ ದೃಷ್ಟಾಂತಗಳಿವೆ! ಅವರು ಅವುಗಳ ಬಳಿಯಿಂದ ಮುಖ ತಿರುಗಿಸಿಕೊಂಡು (ನಿರ್ಲಕ್ಷ್ಯ ಭಾವದಿಂದ) ಹಾದುಹೋಗುತ್ತಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا یُؤْمِنُ اَكْثَرُهُمْ بِاللّٰهِ اِلَّا وَهُمْ مُّشْرِكُوْنَ ۟
ಅವರಲ್ಲಿ ಹೆಚ್ಚಿನವರು ಅಲ್ಲಾಹನಲ್ಲಿ ವಿಶ್ವಾಸವಿರುವವರಾಗಿದ್ದೂ ಸಹ (ಆರಾಧನೆಯಲ್ಲಿ) ಸಹಭಾಗಿತ್ವ (ಶಿರ್ಕ್) ಮಾಡುತ್ತಾರೆ.[1]
[1] ಅಂದರೆ ಬಹುದೇವವಿಶ್ವಾಸಿಗಳಲ್ಲಿ ಹೆಚ್ಚಿನವರು ಅಲ್ಲಾಹನ ಪ್ರಭುತ್ವದಲ್ಲಿ (ರುಬೂಬಿಯತ್) ವಿಶ್ವಾಸವಿಡುತ್ತಾರೆ. ಅಂದರೆ ಸೃಷ್ಟಿಕರ್ತ, ಪರಿಪಾಲಕ, ನಿಯಂತ್ರಕ, ಅನ್ನದಾತ, ಜೀವ ಮತ್ತು ಮರಣ ನೀಡುವವನು ಮುಂತಾದ ಎಲ್ಲವೂ ಅಲ್ಲಾಹನೆಂದು ಅವರು ವಿಶ್ವಾಸವಿಡುತ್ತಾರೆ. ಇದರಲ್ಲಿ ಅಲ್ಲಾಹನಿಗೆ ಯಾವುದೇ ಸಹಭಾಗಿಗಳು ಅಥವಾ ಪಾಲುದಾರರು ಇಲ್ಲವೆಂದು ಅವರು ದೃಢವಾಗಿ ವಿಶ್ವಾಸವಿಡುತ್ತಾರೆ. ಆದರೆ ಆರಾಧನೆಯ ವಿಷಯದಲ್ಲಿ ಅವರು ಅಲ್ಲಾಹನೊಂದಿಗೆ ಇತರರನ್ನು ಸಹಭಾಗಿಗಳನ್ನಾಗಿ ಮಾಡುತ್ತಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَفَاَمِنُوْۤا اَنْ تَاْتِیَهُمْ غَاشِیَةٌ مِّنْ عَذَابِ اللّٰهِ اَوْ تَاْتِیَهُمُ السَّاعَةُ بَغْتَةً وَّهُمْ لَا یَشْعُرُوْنَ ۟
ಅಲ್ಲಾಹನ ಶಿಕ್ಷೆಗಳಲ್ಲಿ ಒಳಪಟ್ಟ ಒಂದು ಸಾರ್ವತ್ರಿಕ ಶಿಕ್ಷೆಯು ಅವರ ಮೇಲೆರಗಲಾರದು, ಅಥವಾ ಅವರಿಗೆ ತಿಳಿಯದಂತೆಯೇ ಹಠಾತ್ತನೆ ಅಂತಿಮದಿನವು ಸಂಭವಿಸಲಾರದು ಎಂದು ಅವರು ನಿರ್ಭಯರಾಗಿದ್ದಾರೆಯೇ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قُلْ هٰذِهٖ سَبِیْلِیْۤ اَدْعُوْۤا اِلَی اللّٰهِ ؔ۫— عَلٰی بَصِیْرَةٍ اَنَا وَمَنِ اتَّبَعَنِیْ ؕ— وَسُبْحٰنَ اللّٰهِ وَمَاۤ اَنَا مِنَ الْمُشْرِكِیْنَ ۟
ಹೇಳಿರಿ: “ಇದೇ ನನ್ನ ಮಾರ್ಗ. ನಾನು ಮತ್ತು ನನ್ನ ಅನುಯಾಯಿಗಳು ಪೂರ್ಣ ಭರವಸೆಯೊಂದಿಗೆ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇವೆ. ಅಲ್ಲಾಹು ಪರಿಶುದ್ಧನು. ನಾನು ದೇವಸಹಭಾಗಿತ್ವ (ಶಿರ್ಕ್) ಮಾಡುವವರಲ್ಲಿ ಸೇರಿದವನಲ್ಲ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَاۤ اَرْسَلْنَا مِنْ قَبْلِكَ اِلَّا رِجَالًا نُّوْحِیْۤ اِلَیْهِمْ مِّنْ اَهْلِ الْقُرٰی ؕ— اَفَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— وَلَدَارُ الْاٰخِرَةِ خَیْرٌ لِّلَّذِیْنَ اتَّقَوْا ؕ— اَفَلَا تَعْقِلُوْنَ ۟
ನಿಮಗಿಂತ ಮೊದಲು ನಾವು ವಿಭಿನ್ನ ಊರುಗಳಲ್ಲಿ ಎಷ್ಟು ಸಂದೇಶವಾಹಕರನ್ನು ಕಳುಹಿಸಿದ್ದೆವೋ ಅವರೆಲ್ಲರೂ ನಾವು ದೇವವಾಣಿ ನೀಡಿದ ಪುರುಷರಾಗಿದ್ದರು. ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನ ಜನರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ದೇವಭಯವುಳ್ಳವರಿಗೆ ಪರಲೋಕ ಭವನವೇ ಅತಿಶ್ರೇಷ್ಠವಾಗಿದೆ. ಆದರೂ ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?
435. ಪ್ರತಿಯೊಂದು ಪ್ರದೇಶಕ್ಕೂ ಅವರಿಂದಲೇ ವಿಶೇಷವಾಗಿ ಆರಿಸಲ್ಪಟ್ಟ ಪುರುಷರನ್ನು ಮಾತ್ರ ಅಲ್ಲಾಹು ಸಂದೇಶವಾಹಕರನ್ನಾಗಿ ಕಳುಹಿಸಿರುವನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
حَتّٰۤی اِذَا اسْتَیْـَٔسَ الرُّسُلُ وَظَنُّوْۤا اَنَّهُمْ قَدْ كُذِبُوْا جَآءَهُمْ نَصْرُنَا ۙ— فَنُجِّیَ مَنْ نَّشَآءُ ؕ— وَلَا یُرَدُّ بَاْسُنَا عَنِ الْقَوْمِ الْمُجْرِمِیْنَ ۟
ಎಲ್ಲಿಯವರೆಗೆಂದರೆ, ಸಂದೇಶವಾಹಕರುಗಳು ನಿರಾಶರಾಗಿ, ಜನರು ತಮ್ಮನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆಂದು ಅವರಿಗೆ ಖಾತ್ರಿಯಾದಾಗ, ನಮ್ಮ ಸಹಾಯವು ಅವರ ಬಳಿಗೆ ಬಂತು. ಆಗ ನಾವು ಇಚ್ಛಿಸುವವರು ಪಾರಾದರು. ಅಕ್ರಮವೆಸಗುವ ಜನರಿಂದ ನಮ್ಮ ಶಿಕ್ಷೆಯನ್ನು ಹಿಂದೆಗೆಯಲಾಗುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
لَقَدْ كَانَ فِیْ قَصَصِهِمْ عِبْرَةٌ لِّاُولِی الْاَلْبَابِ ؕ— مَا كَانَ حَدِیْثًا یُّفْتَرٰی وَلٰكِنْ تَصْدِیْقَ الَّذِیْ بَیْنَ یَدَیْهِ وَتَفْصِیْلَ كُلِّ شَیْءٍ وَّهُدًی وَّرَحْمَةً لِّقَوْمٍ یُّؤْمِنُوْنَ ۟۠
ಅವರ ಕಥೆಗಳಲ್ಲಿ ಬುದ್ಧಿವಂತರಿಗೆ ನೀತಿಪಾಠಗಳಿದ್ದವು. ಇದು (ಕುರ್‌ಆನ್) ಸ್ವಯಂ ರಚಿಸಲಾದ ಗ್ರಂಥವಲ್ಲ. ಬದಲಿಗೆ, ಇದು ಇದಕ್ಕಿಂತ ಮೊದಲಿನ ಗ್ರಂಥಗಳ ದೃಢೀಕರಣವಾಗಿದೆ ಮತ್ತು ಎಲ್ಲಾ ವಿಷಯಗಳ ವಿವರಣೆಯಾಗಿದೆ. ವಿಶ್ವಾಸವಿಡುವ ಜನರಿಗೆ ಇದು ಸನ್ಮಾರ್ಗ ಮತ್ತು ದಯೆಯಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߦߛߎߝߎ߫
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲