Check out the new design

قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر * - تەرجىمىلەر مۇندەرىجىسى

PDF XML CSV Excel API
Please review the Terms and Policies

مەنالار تەرجىمىسى سۈرە: ئىبراھىم   ئايەت:
اَلَمْ تَرَ اَنَّ اللّٰهَ خَلَقَ السَّمٰوٰتِ وَالْاَرْضَ بِالْحَقِّ ؕ— اِنْ یَّشَاْ یُذْهِبْكُمْ وَیَاْتِ بِخَلْقٍ جَدِیْدٍ ۟ۙ
ಅಲ್ಲಾಹು ಭೂಮ್ಯಾಕಾಶಗಳನ್ನು ಅತ್ಯಂತ ನಿಖರವಾಗಿ ಸೃಷ್ಟಿಸಿದ್ದಾನೆಂದು ನೀವು ನೋಡಿಲ್ಲವೇ? ಅವನು ಇಚ್ಛಿಸಿದರೆ ಅವನು ನಿಮ್ಮನ್ನು ತೊಲಗಿಸಿ ಹೊಸ ಸೃಷ್ಟಿಯನ್ನು ತರುವನು.
ئەرەپچە تەپسىرلەر:
وَّمَا ذٰلِكَ عَلَی اللّٰهِ بِعَزِیْزٍ ۟
ಅಲ್ಲಾಹನ ಮಟ್ಟಿಗೆ ಅದು ಕಷ್ಟವೇ ಅಲ್ಲ.
ئەرەپچە تەپسىرلەر:
وَبَرَزُوْا لِلّٰهِ جَمِیْعًا فَقَالَ الضُّعَفٰٓؤُا لِلَّذِیْنَ اسْتَكْبَرُوْۤا اِنَّا كُنَّا لَكُمْ تَبَعًا فَهَلْ اَنْتُمْ مُّغْنُوْنَ عَنَّا مِنْ عَذَابِ اللّٰهِ مِنْ شَیْءٍ ؕ— قَالُوْا لَوْ هَدٰىنَا اللّٰهُ لَهَدَیْنٰكُمْ ؕ— سَوَآءٌ عَلَیْنَاۤ اَجَزِعْنَاۤ اَمْ صَبَرْنَا مَا لَنَا مِنْ مَّحِیْصٍ ۟۠
ಅವರೆಲ್ಲರೂ ಅಲ್ಲಾಹನ ಬಳಿಗೆ ಹೊರಟು ಬರುವರು. ಆಗ ಬಲಹೀನರು ಅಹಂಕಾರಿಗಳೊಂದಿಗೆ ಹೇಳುವರು: “ನಾವು ನಿಜಕ್ಕೂ ನಿಮ್ಮ ಹಿಂಬಾಲಕರಾಗಿದ್ದೆವು. ಈಗ ಅಲ್ಲಾಹನ ಶಿಕ್ಷೆಯಿಂದ ಒಂದಂಶವನ್ನಾದರೂ ನಮ್ಮಿಂದ ದೂರ ಮಾಡುವಿರಾ?” ಅವರು ಉತ್ತರಿಸುವರು: “ಅಲ್ಲಾಹು ನಮಗೆ ಸನ್ಮಾರ್ಗ ತೋರಿಸುತ್ತಿದ್ದರೆ ನಾವು ನಿಮಗೂ ಸನ್ಮಾರ್ಗ ತೋರಿಸುತ್ತಿದ್ದೆವು. ಈಗ ನಾವು ಸಹನೆ ಕಳೆದುಕೊಂಡರೂ ಸಹನೆಯಿಂದ ವರ್ತಿಸಿದರೂ ಯಾವುದೇ ವ್ಯತ್ಯಾಸವಿಲ್ಲ. ನಮಗೆ ಯಾವುದೇ ರಕ್ಷಾಮಾರ್ಗವಿಲ್ಲ.”
ئەرەپچە تەپسىرلەر:
وَقَالَ الشَّیْطٰنُ لَمَّا قُضِیَ الْاَمْرُ اِنَّ اللّٰهَ وَعَدَكُمْ وَعْدَ الْحَقِّ وَوَعَدْتُّكُمْ فَاَخْلَفْتُكُمْ ؕ— وَمَا كَانَ لِیَ عَلَیْكُمْ مِّنْ سُلْطٰنٍ اِلَّاۤ اَنْ دَعَوْتُكُمْ فَاسْتَجَبْتُمْ لِیْ ۚ— فَلَا تَلُوْمُوْنِیْ وَلُوْمُوْۤا اَنْفُسَكُمْ ؕ— مَاۤ اَنَا بِمُصْرِخِكُمْ وَمَاۤ اَنْتُمْ بِمُصْرِخِیَّ ؕ— اِنِّیْ كَفَرْتُ بِمَاۤ اَشْرَكْتُمُوْنِ مِنْ قَبْلُ ؕ— اِنَّ الظّٰلِمِیْنَ لَهُمْ عَذَابٌ اَلِیْمٌ ۟
ವಿಷಯವನ್ನು ತೀರ್ಮಾನಿಸಲಾದಾಗ ಶೈತಾನನು ಹೇಳುವನು: “ನಿಜಕ್ಕೂ ಅಲ್ಲಾಹು ನಿಮಗೆ ಮಾಡಿದ ವಾಗ್ದಾನವು ಸತ್ಯವಾಗಿತ್ತು. ನಾನೂ ನಿಮಗೆ ವಾಗ್ದಾನ ಮಾಡಿದ್ದೆ. ಆದರೆ ನಾನು ನನ್ನ ವಾಗ್ದಾನವನ್ನು ಉಲ್ಲಂಘಿಸಿದ್ದೇನೆ. ನನಗೆ ನಿಮ್ಮ ಮೇಲೆ ಯಾವುದೇ ಅಧಿಕಾರವಿರಲಿಲ್ಲ. ನಾನು ನಿಮ್ಮನ್ನು ಕರೆದಾಗ ನೀವು ನನ್ನ ಹಿಂದೆ ಓಡಿ ಬಂದಿರಿ. ಆದ್ದರಿಂದ ನನ್ನ ಮೇಲೆ ಅಪವಾದ ಹೊರಿಸಬೇಡಿ. ನಿಮ್ಮ ಮೇಲೆಯೇ ಅಪವಾದ ಹೊರಿಸಿರಿ. ನನ್ನನ್ನು ಸಹಾಯಕ್ಕಾಗಿ ಕೂಗಬೇಡಿ. ನಾನು ನಿಮ್ಮನ್ನು ಸಹಾಯಕ್ಕಾಗಿ ಕೂಗುವುದಿಲ್ಲ. ನೀವು ಇದಕ್ಕೆ ಮೊದಲು ನನ್ನನ್ನು ಅಲ್ಲಾಹನೊಂದಿಗೆ ಸಹಭಾಗಿಯನ್ನಾಗಿ ಮಾಡಿದ್ದನ್ನು ನಾನು ನಿಷೇಧಿಸಿದ್ದೇನೆ. ನಿಶ್ಚಯವಾಗಿಯೂ, ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯಿದೆ.”
ئەرەپچە تەپسىرلەر:
وَاُدْخِلَ الَّذِیْنَ اٰمَنُوْا وَعَمِلُوا الصّٰلِحٰتِ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا بِاِذْنِ رَبِّهِمْ ؕ— تَحِیَّتُهُمْ فِیْهَا سَلٰمٌ ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರನ್ನು ತಳಭಾಗದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸಲಾಗುವುದು. ಅವರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಿಂದ ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಿ ಅವರ ಅಭಿವಂದನೆಯು ಸಲಾಂ (ಶಾಂತಿ) ಎಂದಾಗಿರುವುದು.
ئەرەپچە تەپسىرلەر:
اَلَمْ تَرَ كَیْفَ ضَرَبَ اللّٰهُ مَثَلًا كَلِمَةً طَیِّبَةً كَشَجَرَةٍ طَیِّبَةٍ اَصْلُهَا ثَابِتٌ وَّفَرْعُهَا فِی السَّمَآءِ ۟ۙ
ಅಲ್ಲಾಹು ಪರಿಶುದ್ಧ ವಚನಕ್ಕೆ[1] ಯಾವ ರೀತಿಯಲ್ಲಿ ಉದಾಹರಣೆ ನೀಡಿದ್ದಾನೆಂದು ನೀವು ನೋಡಿಲ್ಲವೇ? ಅದೊಂದು ಪರಿಶುದ್ಧ ಮರದಂತೆ. ಅದರ ಬೇರುಗಳು ಭದ್ರವಾಗಿವೆ ಮತ್ತು ರೆಂಭೆಗಳು ಆಕಾಶದಲ್ಲಿವೆ.
[1] ಪರಿಶುದ್ಧ ವಚನ ಎಂದರೆ ‘ಲಾಇಲಾಹ ಇಲ್ಲಲ್ಲಾಹ್’ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ) ಎಂಬ ವಚನ. ಈ ವಚನವನ್ನು ಸ್ವೀಕರಿಸಿ ಇದರ ಆಧಾರದಲ್ಲಿ ಬದುಕುವ ಸತ್ಯವಿಶ್ವಾಸಿಗೆ ಯಾವುದೇ ಭಯವಿಲ್ಲ. ಅವನು ಸಂಪೂರ್ಣ ಆತ್ಮಶಾಂತಿಯೊಂದಿಗೆ ಬದುಕುತ್ತಾನೆ. ಜೀವನದಲ್ಲಿ ಏರುಪೇರುಗಳನ್ನು ಕಾಣುವಾಗ, ಕಷ್ಟಗಳು ಬರುವಾಗ, ದುರಂತಗಳು ಸಂಭವಿಸುವಾಗ ಅವನು ಧೃತಿಗೆಡುವುದಿಲ್ಲ. ಅವನು ಅಲ್ಲಾಹನಲ್ಲಿ ಸಂಪೂರ್ಣ ಭರವಸೆಯಿಟ್ಟು ಮುಂದುವರಿಯುತ್ತಾನೆ. ಅವನ ಎಲ್ಲಾ ಕರ್ಮಗಳಿಗೂ ಪರಲೋಕದಲ್ಲಿ ಅತ್ಯುತ್ತಮ ಪ್ರತಿಫಲವಿರುತ್ತದೆ.
ئەرەپچە تەپسىرلەر:
 
مەنالار تەرجىمىسى سۈرە: ئىبراھىم
سۈرە مۇندەرىجىسى بەت نومۇرى
 
قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر - تەرجىمىلەر مۇندەرىجىسى

مۇھەممەد ھەمزە تەرىپىدىن تەرجىمە قىلىنغان. روۋاد تەرجىمە مەركىزىنىڭ رىياسەتچىلىكىدە تەرەققىي قىلدۇرۇلغان.

تاقاش