Check out the new design

قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر * - تەرجىمىلەر مۇندەرىجىسى

PDF XML CSV Excel API
Please review the Terms and Policies

مەنالار تەرجىمىسى سۈرە: بەقەرە   ئايەت:
وَاِذْ نَجَّیْنٰكُمْ مِّنْ اٰلِ فِرْعَوْنَ یَسُوْمُوْنَكُمْ سُوْٓءَ الْعَذَابِ یُذَبِّحُوْنَ اَبْنَآءَكُمْ وَیَسْتَحْیُوْنَ نِسَآءَكُمْ ؕ— وَفِیْ ذٰلِكُمْ بَلَآءٌ مِّنْ رَّبِّكُمْ عَظِیْمٌ ۟
ನಾವು ನಿಮ್ಮನ್ನು ಫರೋಹನ ಜನರಿಂದ ರಕ್ಷಿಸಿದ ಸಂದರ್ಭ(ವನ್ನು ಸ್ಮರಿಸಿ). ಅವರು ನಿಮಗೆ ಕಠೋರ ಹಿಂಸೆ ನೀಡುತ್ತಿದ್ದರು; ನಿಮ್ಮ ಗಂಡು ಮಕ್ಕಳ ಕತ್ತು ಕೊಯ್ಯುತ್ತಿದ್ದರು ಮತ್ತು ನಿಮ್ಮ ಹೆಣ್ಣು ಮಕ್ಕಳನ್ನು ಜೀವಂತ ಉಳಿಸುತ್ತಿದ್ದರು. ಅದರಲ್ಲಿ (ನಿಮ್ಮನ್ನು ರಕ್ಷಿಸಿದ್ದರಲ್ಲಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಮಹಾ ಪರೀಕ್ಷೆಯಿತ್ತು.
ئەرەپچە تەپسىرلەر:
وَاِذْ فَرَقْنَا بِكُمُ الْبَحْرَ فَاَنْجَیْنٰكُمْ وَاَغْرَقْنَاۤ اٰلَ فِرْعَوْنَ وَاَنْتُمْ تَنْظُرُوْنَ ۟
ನಾವು ಕಡಲನ್ನು ಸೀಳಿ ನಿಮ್ಮನ್ನು ರಕ್ಷಿಸಿದ, ಮತ್ತು ನೀವು ನೋಡುತ್ತಿದ್ದಂತೆಯೇ ಫರೋಹನ ಜನರನ್ನು ಮುಳುಗಿಸಿದ ಸಂದರ್ಭ(ವನ್ನು ಸ್ಮರಿಸಿ).
ئەرەپچە تەپسىرلەر:
وَاِذْ وٰعَدْنَا مُوْسٰۤی اَرْبَعِیْنَ لَیْلَةً ثُمَّ اتَّخَذْتُمُ الْعِجْلَ مِنْ بَعْدِهٖ وَاَنْتُمْ ظٰلِمُوْنَ ۟
ನಾವು ಮೂಸಾರಿಗೆ ನಲ್ವತ್ತು ರಾತ್ರಿಗಳನ್ನು ವಾಗ್ದಾನ ಮಾಡಿದ ಸಂದರ್ಭ. ನಂತರ, ಅವರ (ನಿರ್ಗಮನದ) ಬಳಿಕ ನೀವು ಕರುವನ್ನು ದೇವರಾಗಿ ಮಾಡಿಕೊಂಡಿರಿ ಮತ್ತು ಅಕ್ರಮಿಗಳಾಗಿ ಬಿಟ್ಟಿರಿ.[1]
[1] ಇಸ್ರಾಯೇಲ್ ಮಕ್ಕಳು ಫರೋಹನ ಸೈನ್ಯದಿಂದ ಪಾರಾಗಿ ಸೀನಾ ತಪ್ಪಲಿಗೆ ಬಂದು ನೆಲೆಸಿದರು. ಅಲ್ಲಿ ಅಲ್ಲಾಹನ ವಾಗ್ದಾನದಂತೆ ಮೂಸಾ (ಅವರ ಮೇಲೆ ಶಾಂತಿಯಿರಲಿ) ತೌರಾತ್ (ತೋರ) ಪಡೆಯಲು ನಲ್ವತ್ತು ದಿನ ತೂರ್ ಪರ್ವತಕ್ಕೆ ಹೋಗಿ ನೆಲೆಸಿದರು. ಮೂಸಾರ (ಅವರ ಮೇಲೆ ಶಾಂತಿಯಿರಲಿ) ನಿರ್ಗಮನದ ನಂತರ ಇಸ್ರಾಯೇಲ್ ಮಕ್ಕಳು ಸಾಮಿರಿ ಎಂಬಾತನ ಆದೇಶದಂತೆ ಕರುವಿನ ವಿಗ್ರಹವನ್ನು ಪೂಜಿಸತೊಡಗಿದರು.
ئەرەپچە تەپسىرلەر:
ثُمَّ عَفَوْنَا عَنْكُمْ مِّنْ بَعْدِ ذٰلِكَ لَعَلَّكُمْ تَشْكُرُوْنَ ۟
ನಂತರ ಅದರ ಬಳಿಕವೂ ನಾವು ನಿಮ್ಮನ್ನು ಕ್ಷಮಿಸಿದೆವು; ನೀವು ಕೃತಜ್ಞರಾಗುವಿರಿ ಎಂದು.
ئەرەپچە تەپسىرلەر:
وَاِذْ اٰتَیْنَا مُوْسَی الْكِتٰبَ وَالْفُرْقَانَ لَعَلَّكُمْ تَهْتَدُوْنَ ۟
ನಾವು ಮೂಸಾರಿಗೆ ಗ್ರಂಥವನ್ನು ಹಾಗೂ ಸತ್ಯಾಸತ್ಯ ವಿವೇಚಕವನ್ನು ನೀಡಿದ ಸಂದರ್ಭ. ನೀವು ಸನ್ಮಾರ್ಗ ಪಡೆಯುವುದಕ್ಕಾಗಿ.
ئەرەپچە تەپسىرلەر:
وَاِذْ قَالَ مُوْسٰی لِقَوْمِهٖ یٰقَوْمِ اِنَّكُمْ ظَلَمْتُمْ اَنْفُسَكُمْ بِاتِّخَاذِكُمُ الْعِجْلَ فَتُوْبُوْۤا اِلٰی بَارِىِٕكُمْ فَاقْتُلُوْۤا اَنْفُسَكُمْ ؕ— ذٰلِكُمْ خَیْرٌ لَّكُمْ عِنْدَ بَارِىِٕكُمْ ؕ— فَتَابَ عَلَیْكُمْ ؕ— اِنَّهٗ هُوَ التَّوَّابُ الرَّحِیْمُ ۟
ಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ನನ್ನ ಜನರೇ! ಕರುವನ್ನು ದೇವರಾಗಿ ಮಾಡಿಕೊಳ್ಳುವ ಮೂಲಕ ನಿಶ್ಚಯವಾಗಿಯೂ ನೀವು ನಿಮ್ಮ ಮೇಲೆಯೇ ಅಕ್ರಮವೆಸಗಿದ್ದೀರಿ. ಆದ್ದರಿಂದ, ನೀವು ಪಶ್ಚಾತ್ತಾಪಪಟ್ಟು ನಿಮ್ಮ ಸೃಷ್ಟಿಕರ್ತನ ಕಡೆಗೆ ಮರಳಿರಿ; ನಿಮ್ಮನ್ನು ನೀವೇ ಕೊಲ್ಲಿರಿ.[1] ನಿಮ್ಮ ಸೃಷ್ಟಿಕರ್ತನ ದೃಷ್ಟಿಯಲ್ಲಿ ಅದೇ ನಿಮಗೆ ಶ್ರೇಷ್ಠವಾಗಿದೆ.” ಆಗ ಅಲ್ಲಾಹು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
[1] ಇಸ್ರಾಯೇಲ್ ಮಕ್ಕಳು ಮಾಡಿದ ಬಹುದೇವಾರಾಧನೆಗಾಗಿ ಮೂಸಾ (ಅವರ ಮೇಲೆ ಶಾಂತಿಯಿರಲಿ) ಅವರಿಗೆ ಛೀಮಾರಿ ಹಾಕಿದಾಗ ಅವರು ವಿಷಾದಿಸಿ ಪಶ್ಚಾತ್ತಾಪಪಡಲು ಮುಂದಾದರು. ಅವರು ಮಾಡಿದ ಪಾಪಕ್ಕೆ ಪರಿಹಾರವು ಅವರನ್ನೇ ಅವರು ಕೊಲ್ಲುವುದಾಗಿತ್ತು. ಇದನ್ನು ಎರಡು ರೀತಿಯಲ್ಲಿ ವಿವರಿಸಲಾಗಿದೆ: ಒಂದು, ಅವರನ್ನು ಎರಡು ಸಾಲುಗಳಾಗಿ ನಿಲ್ಲಿಸಿ ಒಬ್ಬರು ಇನ್ನೊಬ್ಬರನ್ನು ಕೊಲ್ಲಬೇಕೆಂದು ಆದೇಶಿಸಲಾಯಿತು. ಎರಡು, ಅವರಲ್ಲಿ ಈ ಪಾಪ ಮಾಡಿದವರನ್ನು ಪಾಪ ಮಾಡದವರು ಕೊಲ್ಲಬೇಕೆಂದು ಆದೇಶಿಸಲಾಯಿತು.
ئەرەپچە تەپسىرلەر:
وَاِذْ قُلْتُمْ یٰمُوْسٰی لَنْ نُّؤْمِنَ لَكَ حَتّٰی نَرَی اللّٰهَ جَهْرَةً فَاَخَذَتْكُمُ الصّٰعِقَةُ وَاَنْتُمْ تَنْظُرُوْنَ ۟
“ಓ ಮೂಸಾ! ಅಲ್ಲಾಹನನ್ನು ನೇರವಾಗಿ ನೋಡುವ ತನಕ ನಾವು ನಿಮ್ಮಲ್ಲಿ ವಿಶ್ವಾಸವಿಡುವುದೇ ಇಲ್ಲ” ಎಂದು ನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ಆಗ ನೀವು ನೋಡುತ್ತಿದ್ದಂತೆಯೇ ಮಿಂಚು ನಿಮ್ಮ ಮೇಲೆರಗಿ ಬಿಟ್ಟಿತು.
ئەرەپچە تەپسىرلەر:
ثُمَّ بَعَثْنٰكُمْ مِّنْ بَعْدِ مَوْتِكُمْ لَعَلَّكُمْ تَشْكُرُوْنَ ۟
ನಂತರ, ನಿಮ್ಮ ಸಾವಿನ ಬಳಿಕ ನಾವು ನಿಮಗೆ ಜೀವ ನೀಡಿದೆವು. ನೀವು ಕೃತಜ್ಞರಾಗುವುದಕ್ಕಾಗಿ.[1]
[1] ಮೂಸಾ (ಅವರ ಮೇಲೆ ಶಾಂತಿಯಿರಲಿ) ತೂರ್ ಪರ್ವತಕ್ಕೆ ಹೋಗುವಾಗ 70 ಮಂದಿಯನ್ನು ಕರೆದೊಯ್ದಿದ್ದರು. ಹಿಂದಿರುಗಿ ಬರುವಾಗ ಅವರು ಹೇಳಿದರು: "ಓ ಮೂಸಾ! ಅಲ್ಲಾಹನನ್ನು ನಮ್ಮ ಕಣ್ಣ ಮುಂದೆ ನೇರವಾಗಿ ನೋಡುವ ತನಕ ನಿಮ್ಮ ಮಾತಿನಲ್ಲಿ ನಾವು ನಂಬಿಕೆಯಿಡುವುದಿಲ್ಲ." ಆಗ ಇದ್ದಕ್ಕಿದ್ದಂತೆ ಆಕಾಶದಲ್ಲಿ ಮಿಂಚು ಗೋಚರವಾಗಿ ಅದು ಅವರ ಮೇಲೆ ಬಿದ್ದು ಅವರೆಲ್ಲರೂ ಸತ್ತರು. ಇದರಿಂದ ಮೂಸಾ (ಅವರ ಮೇಲೆ ಶಾಂತಿಯಿರಲಿ) ತುಂಬಾ ದುಃಖಿತರಾದರು. ನಂತರ ಅವರ ಪ್ರಾರ್ಥನೆಗೆ ಉತ್ತರವಾಗಿ ಅಲ್ಲಾಹು ಅವರನ್ನು ಜೀವಂತಗೊಳಿಸಿದನು.
ئەرەپچە تەپسىرلەر:
وَظَلَّلْنَا عَلَیْكُمُ الْغَمَامَ وَاَنْزَلْنَا عَلَیْكُمُ الْمَنَّ وَالسَّلْوٰی ؕ— كُلُوْا مِنْ طَیِّبٰتِ مَا رَزَقْنٰكُمْ ؕ— وَمَا ظَلَمُوْنَا وَلٰكِنْ كَانُوْۤا اَنْفُسَهُمْ یَظْلِمُوْنَ ۟
ನಾವು ನಿಮಗೆ ಮೋಡದ ನೆರಳನ್ನು ನೀಡಿದೆವು ಮತ್ತು ಮನ್ನ ಹಾಗೂ ಸಲ್ವಾವನ್ನು ಇಳಿಸಿಕೊಟ್ಟೆವು.[1] (ನಾವು ಹೇಳಿದೆವು): “ನಾವು ನಿಮಗೆ ಒದಗಿಸಿದ ಶುದ್ಧ ವಸ್ತುಗಳಿಂದ ತಿನ್ನಿರಿ.” ಅವರು ನಮಗೆ ಅನ್ಯಾಯ ಮಾಡಲಿಲ್ಲ; ಬದಲಿಗೆ, ಅವರು ಅವರಿಗೇ ಅನ್ಯಾಯ ಮಾಡುತ್ತಿದ್ದರು.
[1] ಮನ್ನ ಎಂದರೆ ಕೆಲವರ ಅಭಿಪ್ರಾಯ ಪ್ರಕಾರ ತರಂಜಬೀನ್ ಎಂಬ ಹೆಸರಿನ ಅಂಟು ತಿನಿಸು. ಇದು ಒಂಟೆಮುಳ್ಳು ಎಂಬ ಸಸ್ಯದ ಎಲೆ ಮತ್ತು ಕಾಂಡಗಳಲ್ಲಿ ಉತ್ಪಾದನೆಯಾಗುವ ರಾಳದಂತಹ ಸಿಹಿವಸ್ತುವಾಗಿದೆ. ಮನ್ನ ಎಂದರೆ ಮರ ಹಾಗೂ ಬಂಡೆಗಳ ಮೇಲೆ ಬೀಳುವ ಇಬ್ಬನಿಯೆಂದು ಕೆಲವರು ಹೇಳಿದ್ದಾರೆ. ಇದು ಜೇನಿನಂತೆ ಸಿಹಿಯಾಗಿರುತ್ತದೆ ಮತ್ತು ಒಣಗಿದಾಗ ಮೇಣದಂತಾಗುತ್ತದೆ. ಕೆಲವರು ಮನ್ನ ಎಂದರೆ ಜೇನು ಅಥವಾ ಸಿಹಿನೀರು ಎಂದಿದ್ದಾರೆ. ಸಲ್ವಾ ಎಂದರೆ ಲಾವಕ್ಕಿ ಅಥವಾ ಗುಬ್ಬಚ್ಚಿಯಂತಹ ಸಣ್ಣ ಹಕ್ಕಿಯಾಗಿದ್ದು ಇದನ್ನು ಕೊಯ್ದು ತಿನ್ನುತ್ತಾರೆ.
ئەرەپچە تەپسىرلەر:
 
مەنالار تەرجىمىسى سۈرە: بەقەرە
سۈرە مۇندەرىجىسى بەت نومۇرى
 
قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر - تەرجىمىلەر مۇندەرىجىسى

مۇھەممەد ھەمزە تەرىپىدىن تەرجىمە قىلىنغان. روۋاد تەرجىمە مەركىزىنىڭ رىياسەتچىلىكىدە تەرەققىي قىلدۇرۇلغان.

تاقاش